AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yahoo Layoff: ಯಾಹೂ ಉದ್ಯೋಗ ಕಡಿತ; ವಜಾಗೊಳ್ಳಲಿದ್ದಾರೆ 1,600ಕ್ಕೂ ಹೆಚ್ಚು ಉದ್ಯೋಗಿಗಳು

ಟೆಕ್ ಕಂಪನಿ ಯಾಹೂ ಕೂಡ ಶೇ 20ಕ್ಕೂ ಹೆಚ್ಚು ಮಂದಿ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ. ತಂತ್ರಜ್ಞಾನ ಘಟಕದ ಪುನರ್​​ರಚನೆ ಪ್ರಕ್ರಿಯೆಯ ಭಾಗವಾಗಿ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಕಂಪನಿ ತಿಳಿಸಿದೆ

Yahoo Layoff: ಯಾಹೂ ಉದ್ಯೋಗ ಕಡಿತ; ವಜಾಗೊಳ್ಳಲಿದ್ದಾರೆ 1,600ಕ್ಕೂ ಹೆಚ್ಚು ಉದ್ಯೋಗಿಗಳು
ಯಾಹೂImage Credit source: Reuters
Ganapathi Sharma
|

Updated on:Feb 10, 2023 | 10:19 AM

Share

ನವದೆಹಲಿ: ವಾಲ್ಟ್ ಡಿಸ್ನಿ 7,000 ಮಂದಿ ಉದ್ಯೋಗಿಗಳ ವಜಾ ಘೋಷಿಸಿದ ಬೆನ್ನಲ್ಲೇ ಟೆಕ್ ಕಂಪನಿ ಯಾಹೂ (Yahoo) ಕೂಡ ಶೇ 20ಕ್ಕೂ ಹೆಚ್ಚು ಮಂದಿ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ (Layoff). ತಂತ್ರಜ್ಞಾನ ಘಟಕದ ಪುನರ್​​ರಚನೆ ಪ್ರಕ್ರಿಯೆಯ ಭಾಗವಾಗಿ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಕಂಪನಿ ತಿಳಿಸಿದೆ ಎಂದು ಕಂಪನಿಯ ಮೂಲಗಳನ್ನು ಉಲ್ಲೇಖಿಸಿ ‘ಆ್ಯಕ್ಷಿಯೋಸ್’ ಮಾಧ್ಯಮ ವರದಿ ಮಾಡಿದೆ. ಈ ಉದ್ಯೋಗ ಕಡಿತವು ಯಾಹೂವಿನ ತಂತ್ರಜ್ಞಾನ ಘಟಕದ ಶೇ 5ರಷ್ಟು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. 1,600ಕ್ಕೂ ಹೆಚ್ಚು ಉದ್ಯೋಗಿಗಳು ವಜಾಗೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ. ಇದರೊಂದಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಮತ್ತೆ ಮುಂದುವರಿದಿದೆ. 7,000 ಮಂದಿ ಉದ್ಯೋಗಿಗಳನ್ನು ವಜಾಗೊಳಿಸುವ ಬಗ್ಗೆ ಅಮೆರಿಕದ ಮನರಂಜನಾ ಮಾಧ್ಯಮ ವಾಲ್ಟ್ ಡಿಸ್ನಿ ಗುರುವಾರ ಘೋಷಿಸಿತ್ತು.

ಗ್ರಾಹಕರು ವೆಚ್ಚ ಕಡಿಮೆ ಮಾಡಿರುವುದು ಸ್ಟ್ರೀಮಿಂಗ್ ಚಂದಾದಾರಿಕೆ ಮೇಲೆ ಪರಿಣಾಮ ಬೀರಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಮೊದಲ ಬಾರಿಗೆ ಚಂದಾದಾರರ ಸಂಖ್ಯೆಯಲ್ಲಿ ಕಡಿತವಾಗಿದೆ ಎಂದು ವಾಲ್ಟ್ ಡಿಸ್ನಿ ತಿಳಿಸಿತ್ತು. ಮೂರು ತಿಂಗಳ ಹಿಂದಿನ ಅಂಕಿಸಂಖ್ಯೆಗೆ ಹೋಲಿಸಿದರೆ ಡಿಸೆಂಬರ್ 31ರ ವೇಳೆಗೆ ಡಿಸ್ನಿ ಪ್ಲಸ್​​ ಚಂದಾದಾರರ ಸಂಖ್ಯೆ 168.1 ದಶಲಕ್ಷಕ್ಕೆ ಇಳಿಕೆಯಾಗಿತ್ತು. ಆದಾಗ್ಯೂ ಡಿಸ್ನಿಯ ಷೇರು ಮೌಲ್ಯ ಶೇ 8ರ ವೃದ್ಧಿಯೊಂದಿಗೆ ವಹಿವಾಟು ನಡೆಸುತ್ತಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: Disney Layoff: ವಾಲ್ಟ್ ಡಿಸ್ನಿಯಿಂದ 7000 ಉದ್ಯೋಗಿಗಳ ವಜಾ

ಅಮೆರಿಕದ ಅನೇಕ ತಂತ್ರಜ್ಞಾನ ಕಂಪನಿಗಳು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಿವೆ. ಅತಿದೊಡ್ಡ ಟೆಕ್ ಕಂಪನಿ ಗೂಗಲ್​ ಜನವರಿಯಲ್ಲಿ 12,000 ಉದ್ಯೋಗಿಗಳ ವಜಾ ಘೋಷಿಸಿತ್ತು. ಅಮೆಜಾನ್, ಮೆಟಾ, ಟ್ವಿಟರ್, ಪಿಂಟ್​ರೆಸ್ಟ್, ಫಿಲಿಪ್ಸ್, ಐಬಿಎಂ ಸೇರಿದಂತೆ ಹತ್ತಾರು ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿವೆ. ಭಾರತದಲ್ಲೂ ವಿಪ್ರೋ, ಇನ್ಫೋಸಿಸ್, ಬೈಜೂಸ್ ಸೇರಿದಂತೆ ಅನೇಕ ಕಂಪನಿಗಳು ಉದ್ಯೋಗ ಕಡಿತದ ಮೊರೆ ಹೋಗಿವೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಲಾಭದಲ್ಲಿ ಕುಸಿತ, ಸಂಭಾವ್ಯ ಆರ್ಥಿಕ ಹಿಂಜರಿತಕ್ಕೆ ಸಿದ್ಧರಾಗುವ ಪ್ರಕ್ರಿಯೆಯ ಭಾಗವಾಗಿ ಮತ್ತು ವೆಚ್ಚ ಕಡಿತದ ಉದ್ದೇಶದೊಂದಿಗೆ ಕಂಪನಿಗಳು ಉದ್ಯೋಗಿಗಳ ವಜಾಗೊಳಿಸುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 am, Fri, 10 February 23

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ