AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೆಸ್​ ಬ್ಯಾಂಕ್​ ಸ್ಥಾಪಕ ರಾಣಾ ಕಪೂರ್ ಹೆಂಡತಿ, ಮಗಳಿಗೆ ಸಿಬಿಐ ವಿಶೇಷ ಕೋರ್ಟ್​ ಮಧ್ಯಂತರ ಜಾಮೀನು

ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಹೆಂಡತಿ ಮತ್ತು ಮಗಳಿಗೆ ಸಿಬಿಐ ವಿಶೇಷ ಕೋರ್ಟ್​ನಿಂದ ಮಧ್ಯಂತರ ಜಾಮೀನು ಸಿಕ್ಕಿದೆ.

ಯೆಸ್​ ಬ್ಯಾಂಕ್​ ಸ್ಥಾಪಕ ರಾಣಾ ಕಪೂರ್ ಹೆಂಡತಿ, ಮಗಳಿಗೆ ಸಿಬಿಐ ವಿಶೇಷ ಕೋರ್ಟ್​ ಮಧ್ಯಂತರ ಜಾಮೀನು
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Sep 04, 2021 | 8:48 PM

Share

ಖಾಸಗಿ ಬ್ಯಾಂಕ್​ನ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿರುವ ಯೆಸ್​ ಬ್ಯಾಂಕ್​ ಸಂಸ್ಥಾಪಕ ರಾಣಾ ಕಪೂರ್ ಅವರ ಪತ್ನಿ ಮತ್ತು ಮಗಳಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 4ನೇ ತಾರೀಕಿನ ಶನಿವಾರ ಮಧ್ಯಂತರ ಜಾಮೀನು ನೀಡಿದೆ. ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (ಡಿಎಚ್‌ಎಫ್‌ಎಲ್) ಪ್ರಕರಣದಲ್ಲಿ ಕಪೂರ್ ಪತ್ನಿ ಬಿಂದು ಮತ್ತು ಮಗಳು ರಾಧಾ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಸಿಬಿಐನಿಂದ ಇತ್ತೀಚೆಗೆ ಸಲ್ಲಿಸಿದ ಪೂರಕ ಚಾರ್ಜ್ ಶೀಟ್​ನಲ್ಲಿ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಆದರೆ ಈ ಪ್ರಕರಣದಲ್ಲಿ ಇಬ್ಬರನ್ನೂ ಬಂಧಿಸಿಲ್ಲ.

ಚಾರ್ಜ್​ಶೀಟ್ ಬಗ್ಗೆ ಅರಿತ ನಂತರ, ನ್ಯಾಯಾಲಯವು ಆರೋಪಿಗಳನ್ನು ಕರೆಸಿತು. ಮತ್ತು ಇಬ್ಬರೂ ಇಂದು ನ್ಯಾಯಾಲಯಕ್ಕೆ ಹಾಜರಾದರು. ನಂತರ ವಿಜಯ್ ಅಗರ್​ವಾಲ್ ಮತ್ತು ರಾಹುಲ್ ಅಗರ್​ವಾಲ್ ಅವರನ್ನು ಒಳಗೊಂಡ ಕಾನೂನು ತಂಡದ ಮೂಲಕ ಜಾಮೀನು ಅರ್ಜಿಗಳನ್ನು ಸಲ್ಲಿಸಿದರು. ಸಿಬಿಐನಿಂದ ತನಿಖೆಯ ಸಮಯದಲ್ಲಿ ಅವರನ್ನು ಬಂಧಿಸದೆ ಚಾರ್ಜ್ ಶೀಟ್ ಸಲ್ಲಿಸಿದ್ದರಿಂದ ಈಗ ಬಂಧನ ಅಗತ್ಯವಿಲ್ಲ ಎಂದು ವಾದಿಸಿದರು. ಮನವಿಗಳಿಗೆ ಉತ್ತರ ಸಲ್ಲಿಸಲು ತನಿಖಾ ಸಂಸ್ಥೆ ಸಮಯಾವಕಾಶ ಕೋರಿದಾಗ, ಇಬ್ಬರೂ ಮಧ್ಯಂತರ ಜಾಮೀನು ಕೋರಿದರು. ಇದಕ್ಕೆ ವಿಶೇಷ ನ್ಯಾಯಾಧೀಶ ಎಸ್.ಯು. ವಡ್ಗಾಂವ್ಕರ್ ಅನುಮತಿಸಿದರು.

ಸಿಬಿಐ ಪ್ರಕಾರ, ಯೆಸ್ ಬ್ಯಾಂಕ್‌ನಿಂದ 3,700 ಕೋಟಿ ರೂಪಾಯಿ ಮೌಲ್ಯದ ಡಿಎಚ್‌ಎಫ್‌ಎಲ್‌ನ ಡಿಬೆಂಚರ್‌ಗಳನ್ನು ಹೂಡಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿತ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ನಂತರ ನ್ಯಾಯಾಂಗ ಬಂಧನದಲ್ಲಿರುವ ಕಪೂರ್ ಮತ್ತು ಅವರ ಕುಟುಂಬವು ಲಂಚ ಪಡೆದಿದ್ದಾರೆ. ಸಿಬಿಐ ಹೇಳಿರುವಂತೆ, ಡಿಎಚ್‌ಎಫ್‌ಎಲ್‌ನಲ್ಲಿ ಯೆಸ್​ ಬ್ಯಾಂಕ್​ ಹೂಡಿಕೆಗೆ ಪ್ರತಿಯಾಗಿ, ಕಪೂರ್ ಅವರ ಪತ್ನಿ ಮತ್ತು ಪುತ್ರಿಯರಿಂದ ನಿಯಂತ್ರಿಸುವ ಸಂಸ್ಥೆಗೆ 600 ಕೋಟಿ ರೂಪಾಯಿ ಲಂಚದ ರೂಪದಲ್ಲಿ ನೀಡಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಡಿಎಚ್​ಎಫ್​ಎಲ್​ನಿಂದ 14,046 ಕೋಟಿ ರೂ. ಪಿಎಂಎವೈ ವಂಚನೆ; ಸಿಬಿಐನಿಂದ ಪ್ರಕರಣ ದಾಖಲು

(Yes Bank Founder Rana Kapoor Wife And Daughter Grant Interim Bail From CBI Special Court In DHFL Scam)

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ