AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೆಸ್​ ಬ್ಯಾಂಕ್​ ಸ್ಥಾಪಕ ರಾಣಾ ಕಪೂರ್ ಹೆಂಡತಿ, ಮಗಳಿಗೆ ಸಿಬಿಐ ವಿಶೇಷ ಕೋರ್ಟ್​ ಮಧ್ಯಂತರ ಜಾಮೀನು

ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಹೆಂಡತಿ ಮತ್ತು ಮಗಳಿಗೆ ಸಿಬಿಐ ವಿಶೇಷ ಕೋರ್ಟ್​ನಿಂದ ಮಧ್ಯಂತರ ಜಾಮೀನು ಸಿಕ್ಕಿದೆ.

ಯೆಸ್​ ಬ್ಯಾಂಕ್​ ಸ್ಥಾಪಕ ರಾಣಾ ಕಪೂರ್ ಹೆಂಡತಿ, ಮಗಳಿಗೆ ಸಿಬಿಐ ವಿಶೇಷ ಕೋರ್ಟ್​ ಮಧ್ಯಂತರ ಜಾಮೀನು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 04, 2021 | 8:48 PM

Share

ಖಾಸಗಿ ಬ್ಯಾಂಕ್​ನ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿರುವ ಯೆಸ್​ ಬ್ಯಾಂಕ್​ ಸಂಸ್ಥಾಪಕ ರಾಣಾ ಕಪೂರ್ ಅವರ ಪತ್ನಿ ಮತ್ತು ಮಗಳಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 4ನೇ ತಾರೀಕಿನ ಶನಿವಾರ ಮಧ್ಯಂತರ ಜಾಮೀನು ನೀಡಿದೆ. ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (ಡಿಎಚ್‌ಎಫ್‌ಎಲ್) ಪ್ರಕರಣದಲ್ಲಿ ಕಪೂರ್ ಪತ್ನಿ ಬಿಂದು ಮತ್ತು ಮಗಳು ರಾಧಾ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಸಿಬಿಐನಿಂದ ಇತ್ತೀಚೆಗೆ ಸಲ್ಲಿಸಿದ ಪೂರಕ ಚಾರ್ಜ್ ಶೀಟ್​ನಲ್ಲಿ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಆದರೆ ಈ ಪ್ರಕರಣದಲ್ಲಿ ಇಬ್ಬರನ್ನೂ ಬಂಧಿಸಿಲ್ಲ.

ಚಾರ್ಜ್​ಶೀಟ್ ಬಗ್ಗೆ ಅರಿತ ನಂತರ, ನ್ಯಾಯಾಲಯವು ಆರೋಪಿಗಳನ್ನು ಕರೆಸಿತು. ಮತ್ತು ಇಬ್ಬರೂ ಇಂದು ನ್ಯಾಯಾಲಯಕ್ಕೆ ಹಾಜರಾದರು. ನಂತರ ವಿಜಯ್ ಅಗರ್​ವಾಲ್ ಮತ್ತು ರಾಹುಲ್ ಅಗರ್​ವಾಲ್ ಅವರನ್ನು ಒಳಗೊಂಡ ಕಾನೂನು ತಂಡದ ಮೂಲಕ ಜಾಮೀನು ಅರ್ಜಿಗಳನ್ನು ಸಲ್ಲಿಸಿದರು. ಸಿಬಿಐನಿಂದ ತನಿಖೆಯ ಸಮಯದಲ್ಲಿ ಅವರನ್ನು ಬಂಧಿಸದೆ ಚಾರ್ಜ್ ಶೀಟ್ ಸಲ್ಲಿಸಿದ್ದರಿಂದ ಈಗ ಬಂಧನ ಅಗತ್ಯವಿಲ್ಲ ಎಂದು ವಾದಿಸಿದರು. ಮನವಿಗಳಿಗೆ ಉತ್ತರ ಸಲ್ಲಿಸಲು ತನಿಖಾ ಸಂಸ್ಥೆ ಸಮಯಾವಕಾಶ ಕೋರಿದಾಗ, ಇಬ್ಬರೂ ಮಧ್ಯಂತರ ಜಾಮೀನು ಕೋರಿದರು. ಇದಕ್ಕೆ ವಿಶೇಷ ನ್ಯಾಯಾಧೀಶ ಎಸ್.ಯು. ವಡ್ಗಾಂವ್ಕರ್ ಅನುಮತಿಸಿದರು.

ಸಿಬಿಐ ಪ್ರಕಾರ, ಯೆಸ್ ಬ್ಯಾಂಕ್‌ನಿಂದ 3,700 ಕೋಟಿ ರೂಪಾಯಿ ಮೌಲ್ಯದ ಡಿಎಚ್‌ಎಫ್‌ಎಲ್‌ನ ಡಿಬೆಂಚರ್‌ಗಳನ್ನು ಹೂಡಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿತ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ನಂತರ ನ್ಯಾಯಾಂಗ ಬಂಧನದಲ್ಲಿರುವ ಕಪೂರ್ ಮತ್ತು ಅವರ ಕುಟುಂಬವು ಲಂಚ ಪಡೆದಿದ್ದಾರೆ. ಸಿಬಿಐ ಹೇಳಿರುವಂತೆ, ಡಿಎಚ್‌ಎಫ್‌ಎಲ್‌ನಲ್ಲಿ ಯೆಸ್​ ಬ್ಯಾಂಕ್​ ಹೂಡಿಕೆಗೆ ಪ್ರತಿಯಾಗಿ, ಕಪೂರ್ ಅವರ ಪತ್ನಿ ಮತ್ತು ಪುತ್ರಿಯರಿಂದ ನಿಯಂತ್ರಿಸುವ ಸಂಸ್ಥೆಗೆ 600 ಕೋಟಿ ರೂಪಾಯಿ ಲಂಚದ ರೂಪದಲ್ಲಿ ನೀಡಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಡಿಎಚ್​ಎಫ್​ಎಲ್​ನಿಂದ 14,046 ಕೋಟಿ ರೂ. ಪಿಎಂಎವೈ ವಂಚನೆ; ಸಿಬಿಐನಿಂದ ಪ್ರಕರಣ ದಾಖಲು

(Yes Bank Founder Rana Kapoor Wife And Daughter Grant Interim Bail From CBI Special Court In DHFL Scam)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?