AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೇಮ್ ಆಗದೇ ಉಳಿದಿದೆ ಲಕ್ಷ ಕೋಟಿ ರೂ; ಜನರಿಗೆ ಹಣ ಮರಳಿಸಲು ಸರ್ಕಾರ ಹರಸಾಹಸ

PM Narendra Modi asks people to participate in 'Your Money, Your Right' campaign: ಬ್ಯಾಂಕು, ಇನ್ಷೂರೆನ್ಸ್, ಮ್ಯುಚುವಲ್ ಫಂಡ್, ಷೇರುಗಳಲ್ಲಿ ಲಕ್ಷ ಕೋಟಿ ರೂಗಿಂತ ಅಧಿಕ ಹಣ ಕ್ಲೇಮ್ ಆಗದೇ ಉಳಿದಿವೆ. ಇದನ್ನು ಮರಳಿಸಲು ಸರ್ಕಾರ ಹರಸಾಹಸ ನಡೆಸುತ್ತಿದೆ. ಅಂತೆಯೇ, ‘ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನ ಕೈಗೊಂಡಿದೆ. ಲಿಂಕ್ಡ್​ಇನ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡ ಒಂದು ಪೋಸ್ಟ್​ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಕ್ಲೇಮ್ ಆಗದೇ ಉಳಿದಿದೆ ಲಕ್ಷ ಕೋಟಿ ರೂ; ಜನರಿಗೆ ಹಣ ಮರಳಿಸಲು ಸರ್ಕಾರ ಹರಸಾಹಸ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 10, 2025 | 12:14 PM

Share

ನವದೆಹಲಿ, ಡಿಸೆಂಬರ್ 10: ಭಾರತೀಯ ಬ್ಯಾಂಕುಗಳಲ್ಲಿ, ಇನ್ಷೂರೆನ್ಸ್ ಕಂಪನಿಗಳಲ್ಲಿ, ಮ್ಯೂಚುವಲ್ ಫಂಡ್ ಕಂಪನಿಗಳಲ್ಲಿ ಕ್ಲೇಮ್ ಆಗದೇ (Unlcaimed Money) ಇರುವ ಹಣ ಲಕ್ಷ ಕೋಟಿ ಮೀರುತ್ತದೆ. ಈ ಹಣವನ್ನು ಹಕ್ಕುದಾರರಿಗೆ ಮರಳಿಸಲೇಬೇಕೆಂದು ಸರ್ಕಾರ ಪಣತೊಟ್ಟಿದೆ. ಅಂತೆಯೇ, ‘ನಿಮ್ಮ ಹಣ, ನಿಮ್ಮ ಹಕ್ಕು’ (Your Money, Your Right) ಎನ್ನುವ ಅಭಿಯಾನ ನಡೆಸುತ್ತಿದೆ. ಜನರ ದುಡ್ಡು ಜನರಿಗೆ ತಲುಪಬೇಕೆಂಬ ಆಶಯದಲ್ಲಿ ಈ ಕಾರ್ಯ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೂ ಕೂಡ ವೈಯಕ್ತಿಕವಾಗಿ ಈ ಕಾರ್ಯದಲ್ಲಿ ಅಪರಿಮಿತ ಆಸಕ್ತಿ ಹೊಂದಿದ್ದಾರೆ.

ಲಿಂಕ್ಡ್​ಇನ್​ನಲ್ಲಿ ಅವರು ನಿನ್ನೆ ಈ ಅಭಿಯಾನದ ಕುರಿತು ಒಂದು ಪೋಸ್ಟ್ ಹಾಕಿದ್ದಾರೆ. ಮರೆತು ಉಳಿದಿರುವ ಹಣಕಾಸು ಆಸ್ತಿಯನ್ನು ಹೊಸ ಅವಕಾಶವಾಗಿ ಬಳಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಎಐ ಸೌಕರ್ಯ ನಿರ್ಮಾಣಕ್ಕೆ ಮೈಕ್ರೋಸಾಫ್ಟ್​ನಿಂದ 1.50 ಲಕ್ಷ ಕೋಟಿ ರೂ ಹೂಡಿಕೆ

ಬ್ಯಾಂಕುಗಳಲ್ಲಿ 78,000 ಕೋಟಿ ರೂನಷ್ಟು ಹಣವು ಕ್ಲೇಮ್ ಆಗದೇ ಹಾಗೇ ಉಳಿದಿದೆ. ಇನ್ಷೂರೆನ್ಸ್ ಕಂಪನಿಗಳಲ್ಲಿ 14,000 ಕೋಟಿ ರೂ, ಮ್ಯೂಚುವಲ್ ಫಂಡ್​ಗಳಲ್ಲಿ 3,000 ಕೋಟಿ ರೂ ಹಣ ಇನ್ನೂ ಕ್ಲೇಮ್ ಆಗಿಲ್ಲ. ಷೇರುಗಳ ಡಿವಿಡೆಂಡ್ ಕ್ಲೇಮ್ ಆಗದೇ ಇರುವುದು ಬರೋಬ್ಬರಿ 9,000 ಕೋಟಿ ರೂ. ಪ್ರಧಾನಿಗಳು ಈ ಮಾಹಿತಿಯನ್ನು ಲಿಂಕ್ಡ್​ಇನ್​ನಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರ ಎಕ್ಸ್ ಅಕೌಂಟ್​ನಲ್ಲಿ ಪೋಸ್ಟ್ ಆಗಿರುವುದು

ಫಿಕ್ಸೆಡ್ ಡೆಪಾಸಿಟ್, ಸೇವಿಂಗ್ಸ್ ಅಕೌಂಟ್ ಇತ್ಯಾದಿ ಖಾತೆಗಳು ನಿರ್ದಿಷ್ಟ ಅವಧಿಯವರೆಗೆ ನಿಷ್ಕ್ರಿಯವಾಗಿದ್ದರೆ ಅದನ್ನು ನಿಷ್ಕ್ರಿಯ ಖಾತೆಯಾಗಿ ಪರಿಗಣಿಸಲಾಗುತ್ತದೆ. ಅದರಲ್ಲಿರುವ ಹಣವು ಹಾಗೇ ಉಳಿದುಹೋಗಿರುತ್ತದೆ. ಸರ್ಕಾರ ಆ ಹಣವನ್ನು ಪ್ರತ್ಯೇಕವಾಗಿ ಎತ್ತಿ ಇಟ್ಟಿರುತ್ತದೆ.

ಖಾತೆದಾರರು ಮೃತಪಟ್ಟಿದ್ದು, ಅಥವಾ ಹಾಗೆಯೇ ಮರೆತುಬಿಟ್ಟಿರುವುದು, ನಾಮಿನಿಗಳಿಲ್ಲದೇ ಇರುವುದು ಇವೇ ಮುಂತಾದ ಕಾರಣಗಳಿಂದ ಹಣ ಕ್ಲೇಮ್ ಆಗದೇ ಉಳಿದಿರಬಹುದು. ಆ ಖಾತೆದಾರರು ಅಥವಾ ನಾಮಿನಿಗಳು, ಅಥವಾ ಕಾನೂನಾತ್ಮಕವಾಗಿ ವಾರಸುದಾರರಾಗಿರುವವರು ಹಣಕ್ಕೆ ಕ್ಲೇಮ್ ಮಾಡಬಹುದು. ಹೀಗೆ ಹಣಕ್ಕೆ ಕ್ಲೇಮ್ ಸಲ್ಲಿಸಲು ಸರ್ಕಾರ ವಿವಿಧ ಮಾರ್ಗಗಳ ಅವಕಾಶ ಕೊಟ್ಟಿದೆ.

ಇದನ್ನೂ ಓದಿ: ಎಐ ಬಳಸಿ ಅದ್ಭುತ ಕಂಟೆಂಟ್ ಕೊಡಬಲ್ಲಿರಾ? ಇಗೋ ಇಲ್ಲಿದೆ ಟಿವಿ9 ನೆಟ್ವರ್ಕ್ AI² ಅವಾರ್ಡ್ಸ್ 2026

  • ಬ್ಯಾಂಕ್ ಹಣಕ್ಕೆ ಕ್ಲೇಮ್ ಮಾಡಲು ಆರ್​ಬಿಐನಿಂದ UDGAM ಪೋರ್ಟಲ್ ಇದೆ: udgam.rbi.org.in/unclaimed-deposits/
  • ಕ್ಲೇಮ್ ಆಗದೇ ಇರುವ ಇನ್ಷೂರೆನ್ಸ್ ಪಾಲಿಸಿ ಹಣ ಪಡೆಯಲು: bimabharosa.irdai.gov.in/
  • ಕ್ಲೇಮ್ ಆಗದೇ ಇರುವ ಮ್ಯೂಚುವಲ್ ಫಂಡ್ ಹಣಕ್ಕೆ ಸೆಬಿಯಿಂದ MITRA ಪೋರ್ಟಲ್ ಇದೆ: app.mfcentral.com/
  • ಕ್ಲೇಮ್ ಆಗದೇ ಇರುವ ಷೇರು ಮತ್ತು ಡಿವಿಡೆಂಡ್​​ಗಳಿಗೆ ಐಇಪಿಎಫ್​ಎ ಪೋರ್ಟಲ್ ಇದೆ: www.iepf.gov.in/

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?