YouTube: ಭಾರತದ ಜಿಡಿಪಿಗೆ 2021ರಲ್ಲಿ ಯೂಟ್ಯೂಬರ್​ಗಳಿಂದ 10 ಸಾವಿರ ಕೋಟಿ ರೂ. ಕೊಡುಗೆ; ವರದಿ

ಉದ್ಯಮ ಪೂರಕ ವಾತಾವರಣದೊಂದಿಗೆ ಭಾರತದಲ್ಲಿ ಹೆಚ್ಚು ಸ್ಪರ್ಧಾತ್ಮಕವಾಗಿ ಕಾರ್ಯನಿರ್ವಹಿಸುತ್ತಿರುವ ಯೂಟ್ಯೂಬ್ (YouTube) 2021ರಲ್ಲಿ ಜಿಡಿಪಿಗೆ 10,000 ಕೋಟಿ ರೂ. ಕೊಡುಗೆ ನೀಡಿದೆ ಎಂದು ವರದಿಯಾಗಿದೆ.

YouTube: ಭಾರತದ ಜಿಡಿಪಿಗೆ 2021ರಲ್ಲಿ ಯೂಟ್ಯೂಬರ್​ಗಳಿಂದ 10 ಸಾವಿರ ಕೋಟಿ ರೂ. ಕೊಡುಗೆ; ವರದಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Dec 19, 2022 | 4:33 PM

ನವದೆಹಲಿ: ಉದ್ಯಮ ಪೂರಕ ವಾತಾವರಣದೊಂದಿಗೆ ಭಾರತದಲ್ಲಿ (India) ಹೆಚ್ಚು ಸ್ಪರ್ಧಾತ್ಮಕವಾಗಿ ಕಾರ್ಯನಿರ್ವಹಿಸುತ್ತಿರುವ ಯೂಟ್ಯೂಬ್ (YouTube) 2021ರಲ್ಲಿ ಜಿಡಿಪಿಗೆ 10,000 ಕೋಟಿ ರೂ. ಕೊಡುಗೆ ನೀಡಿದೆ ಎಂದು ವರದಿಯಾಗಿದೆ. ತಂತ್ರಜ್ಞಾನ ಕಂಪನಿಗಳು, ದೇಶೀಯ ಇಂಟರ್​ನೆಟ್ ಸಂಸ್ಥೆಗಳೊಂದಿಗೆ ಪೈಪೋಟಿಗೆ ಇಳಿದಿರುವ ಯೂಟ್ಯೂಬ್ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮದೇ ಚಾನೆಲ್​ಗಳನ್ನು ಸೃಷ್ಟಿಸಲು ಪ್ರೋತ್ಸಾಹಿಸುತ್ತಿದೆ. ಈ ಮೂಲಕ ಕ್ರಿಯೇಟರ್​ಗಳನ್ನು ಸೆಳೆಯುತ್ತಿದೆ. ಸುಮಾರು 7.5 ಲಕ್ಷ ಪೂರ್ಣಾವಧಿಯ ಉದ್ಯೋಗ ಸೃಷ್ಟಿಸಿದೆ ಎಂದು ಕನ್ಸಲ್ಟಿಂಗ್ ಸಂಸ್ಥೆ ‘ಆಕ್ಸ್​ಫರ್ಡ್ ಎಕನಾಮಿಕ್ಸ್’​ನ ವರದಿ ತಿಳಿಸಿದೆ. 2020ರ ಮಾರ್ಚ್​​ 3ರಿಂದ 2022ರ ವರೆಗಿನ ದತ್ತಾಂಶಗಳನ್ನು ಪರಿಗಣಿಸಿಕೊಂಡು ಈ ವರದಿ ಸಿದ್ಧಪಡಿಸಲಾಗಿದೆ.

2020ರಲ್ಲಿ ಯೂಟ್ಯೂಬ್ ವ್ಯವಸ್ಥೆಯು ಭಾರತದ ಜಿಡಿಪಿಗೆ 6,800 ಕೋಟಿ ರೂ. ಕೊಡುಗೆ ನೀಡಿದೆ. 6,83,900 ಪೂರ್ಣಾವಧಿ ಉದ್ಯೋಗ ಸೃಷ್ಟಿಗೆ ನೆರವಾಗಿದೆ ಎಂದು ವರದಿ ತಿಳಿಸಿದೆ.

ಯೂಟ್ಯೂಬರ್​ಗಳ ಸೃಷ್ಟಿಗೆ ಪೂರಕ ವಾತಾವರಣದ ಮೂಲಕ ಭಾರತದ ಆರ್ಥಿಕತೆಗೆ ಯೂಟ್ಯೂಬ್​ ಬಲ ತುಂಬುತ್ತಿರುವುದು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿರುವುದು ಸಂತಸ ಮೂಡಿಸಿದೆ. ವೀಕ್ಷಕರ ಜತೆ ತೊಡಗಿಸಿಕೊಳ್ಳಲು ಹೊಸ ವಿಧಾನಗಳನ್ನು ಕ್ರಿಯೇಟರ್​​ಗಳಿಗೆ ನೀಡುವ ಮೂಲಕ ನಾವು ಬಹು ದೂರ ಕ್ರಮಿಸಿದ್ದೇವೆ ಎಂದು ಯೂಟ್ಯೂಬ್​ನ ದಕ್ಷಿಣ, ಆಗ್ನೇಯ ಏಷ್ಯಾ ವಿಭಾಗದ ನಿರ್ದೇಶಕ ಅಜಯ್ ವಿದ್ಯಾಸಾಗರ್ ತಿಳಿಸಿದ್ದಾರೆ.

ಇದನ್ನೂ ಓದಿ: No Cost EMI: ನೋ ಕಾಸ್ಟ್ ಇಎಂಐ ಆಯ್ಕೆ ಮಾಡುವ ಮುನ್ನ ಈ ವಿಚಾರಗಳನ್ನು ತಿಳಿದಿರಿ

ಈ ವರ್ಷ 5,633 ಮಂದಿಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 523 ಉದ್ಯಮಗಳು ಹಾಗೂ 4,021 ಯೂಟ್ಯೂಬ್ ಬಳಕೆದಾರರು ಎಂದು ‘ಆಕ್ಸ್​ಫರ್ಡ್ ಎಕನಾಮಿಕ್ಸ್’ ವರದಿ ತಿಳಿಸಿದೆ. 10,000 ಸಬ್​ಸ್ಕ್ರೈಬರ್​ಗಳನ್ನು ಹೊಂದಿರುವ ಯೂಟ್ಯೂಬರ್​ಗಳು ತಮ್ಮ ವಿಡಿಯೊಗಳಿಗೆ ಯೂಟ್ಯೂಬ್​ನಿಂದ ಮತ್ತು ಇತರ ಮೂಲಗಳಿಂದ ಆದಾಯ ಗಳಿಸಲು ಯೂಟ್ಯೂಬ್ ಅನುವು ಮಾಡಿಕೊಟ್ಟಿದೆ ಎಂದು ಗೂಗಲ್ ತಿಳಿಸಿದೆ. 10,000ಕ್ಕಿಂತ ಕಡಿಮೆ ಸಬ್​​ಸ್ಕ್ರೈಬರ್​ ಇರುವ ಕೆಲವು ಯೂಟ್ಯೂಬರ್​ಗಳಿಗೂ ಆದಾಯ ಗಳಿಸಲು ಅವಕಾಶ ನೀಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Mon, 19 December 22

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ