AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್ ರೋಶನ್, ಕತ್ರಿನಾ ಕೈಫ್ ಇದ್ದ ಜೊಮೆಟೊ ಜಾಹೀರಾತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ: ಸಮರ್ಥಿಸಿಕೊಂಡ ಕಂಪನಿ

ಒಂದು ಆರ್ಡರ್​ನಿಂದ ಮತ್ತೊಂದು ಆರ್ಡರ್ ನಡುವೆ ವಿಶ್ರಾಂತಿಗೆ ಅವಕಾಶವೇ ಇಲ್ಲದಂತೆ ಜೊಮೆಟೊ ಡೆಲಿವರಿ ಪ್ರತಿನಿಧಿಗಳು ಹೈರಾಣಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ಷೇಪಿಸಿದ್ದಾರೆ.

ಹೃತಿಕ್ ರೋಶನ್, ಕತ್ರಿನಾ ಕೈಫ್ ಇದ್ದ ಜೊಮೆಟೊ ಜಾಹೀರಾತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ: ಸಮರ್ಥಿಸಿಕೊಂಡ ಕಂಪನಿ
ಜೊಮೆಟೊ ಜಾಹಿರಾತಿನಲ್ಲಿ ಹೃತಿಕ್ ರೋಶನ್ ಹಾಗೂ ಕತ್ರಿನಾ ಕೈಫ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 31, 2021 | 4:15 PM

ಬೆಂಗಳೂರು: ಖ್ಯಾತ ಬಾಲಿವುಡ್ ತಾರೆಯರಾದ ಹೃತಿಕ್ ರೋಶನ್ ಹಾಗೂ ಕತ್ರಿನಾ ಕೈಫ್ ಅವರಿದ್ದ ಜೊಮೆಟೊ ಜಾಹಿರಾತಿನ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೊಮೆಟೊ ಸಹ ಇದೀಗ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಜಾಹಿರಾತುಗಳನ್ನು ಸಮರ್ಥಿಸಿಕೊಂಡಿದೆ.

ಜೊಮೆಟೊ ಬಿಡುಗಡೆ ಮಾಡಿದ್ದ ಎರಡೂ ಜಾಹಿರಾತುಗಳ ಆಶಯ ಹೆಚ್ಚೂಕಡಿಮೆ ಒಂದೇ ರೀತಿಯಿದೆ. ಜೊಮೆಟೊ ವಿತರಕರೊಬ್ಬರು ಕಾಲಿಂಗ್ ಬೆಲ್ ಮಾಡಿದಾಗ ಹೃತಿಕ್ ರೋಶನ್ ಬಾಗಿಲು ತೆಗೆಯುತ್ತಾರೆ. ತನ್ನನ್ನು ನೋಡಿ ಖುಷಿಪಡುವ ಜೊಮೆಟೊ ಪ್ರತಿನಿಧಿಯೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಹೃತಿಕ್ ಬಯಸುತ್ತಾರೆ. ಆದರೆ ಅವರು ಮೊಬೈಲ್ ತೆಗೆದುಕೊಂಡು ಬರುವಷ್ಟರಲ್ಲಿ ಜೊಮೆಟೊ ಪ್ರತಿನಿಧಿಗೆ ಮತ್ತೊಂದು ಆರ್ಡರ್ ಬಂದಿರುತ್ತೆ. ಸೆಲ್ಫಿ ಆಸೆಯನ್ನು ಹತ್ತಿಕ್ಕಿ ಅವರು ಅಲ್ಲಿಂದ ಹೊರಡುತ್ತಾರೆ.

ಹೀಗೆ ಹೊರಡುವಾಗ ‘ಹೃತಿಕ್ ರೋಶನ್ ಹೊ ಯಾ ಆಪ್, ಅಪ್ನೆ ಲಿಯೆ ಹರ್ ಕಸ್ಟಮರ್ ಹೈ ಸ್ಟಾರ್’ (ಹೃತಿಕ ರೋಶನ್ ಅಥವಾ ನೀವು. ನಮಗಂತೂ ಪ್ರತಿ ಗ್ರಾಹಕರೂ ಸ್ಟಾರ್) ಎಂಬ ಮಾತು ಹಿನ್ನೆಲೆಯಲ್ಲಿ ಕೇಳಿ ಬರುತ್ತದೆ.

ಕತ್ರಿನಾ ಕೈಫ್ ಕಾಣಿಸಿಕೊಂಡಿರುವ ಜಾಹೀರಾತಿನಲ್ಲಿ ಸಣ್ಣ ವ್ಯತ್ಯಾಸವಿದೆ. ಜೊಮೆಟೊ ಪ್ರತಿನಿಧಿಗೆ ಹುಟ್ಟುಹಬ್ಬದ ಕೇಕ್ ತಂದುಕೊಡುವುದಾಗಿ ಕತ್ರಿನಾ ಒಳಗೆ ಹೋಗುತ್ತಾರೆ. ಅವರು ಹೊರಗೆ ಬರುವಷ್ಟರಲ್ಲಿ ಜೊಮೆಟೊ ಪ್ರತಿನಿಧಿ, ಮತ್ತೊಂದು ಆರ್ಡರ್ ಡೆಲಿವರಿ ಮಾಡಲೆಂದು ಅಲ್ಲಿಂದ ಹೊರಟುಹೋಗಿರುತ್ತಾರೆ.

ಕಾರ್ಮಿಕರ ಮೇಲೆ ಶೋಷಣೆಯ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಜಾಹೀರಾತುಗಳು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಆರ್ಡರ್​ನಿಂದ ಮತ್ತೊಂದು ಆರ್ಡರ್ ನಡುವೆ ವಿಶ್ರಾಂತಿಗೆ ಅವಕಾಶವೇ ಇಲ್ಲದಂತೆ ಜೊಮೆಟೊ ಡೆಲಿವರಿ ಪ್ರತಿನಿಧಿಗಳು ಹೈರಾಣಾಗುತ್ತಿದ್ದಾರೆ. ಈ ಜಾಹೀರಾತುಗಳು ಇದೇ ಧಾಟಿಯಲ್ಲಿವೆ ಎಂದು ಹಲವರು ಆಕ್ಷೇಪಿಸಿದ್ದಾರೆ.

ಸೆಲಬ್ರಿಟಿಗಳ ಜಾಹೀರಾತಿಗೆ ಹಣ ಖರ್ಚು ಮಾಡುವ ಕಂಪನಿಯು, ತನ್ನ ಪ್ರತಿನಿಧಿಗಳ ಯೋಗಕ್ಷೇಮಕ್ಕೆ ತಕ್ಕಷ್ಟು ಹಣ ವಿನಿಯೋಗ ಮಾಡುತ್ತಿಲ್ಲ ಎಂದು ಕೆಲವರು ಹೇಳಿದ್ದಾರೆ.

ಈ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿರುವ ಜೊಮೆಟೊ ಕಂಪನಿಯು, ಈ ಜಾಹೀರಾತುಗಳ ಪರಿಕಲ್ಪನೆಗಳು 6 ತಿಂಗಳ ಹಿಂದೆಯೇ ಅಂತಿಮಗೊಂಡಿತ್ತು. ಡೆಲಿವರಿ ಪ್ರತಿನಿಧಿಗಳನ್ನು ನಾಯಕರಾಗಿ ಬಿಂಬಿಸುವುದು ನಮ್ಮ ಉದ್ದೇಶವಾಗಿತ್ತು. ಅವರ ಕೆಲಸಕ್ಕೆ ಘನತೆ ತಂದುಕೊಡುವುದು ಮತ್ತು ಗ್ರಾಹಕರೇ ನಮ್ಮ ಹಿರೊಗಳು ಎಂದು ಬಿಂಬಿಸುವ ಉದ್ದೇಶದಿಂದ ಈ ಜಾಹಿರಾತುಗಳನ್ನು ರೂಪಿಸಲಾಗಿತ್ತು. ಆದರೆ ಕೆಲವರು ನಮ್ಮ ಜಾಹಿರಾತುಗಳನ್ನು ತಪ್ಪಾಗಿ ವ್ಯಾಖ್ಯಾನಿಸಿದ್ದಾರೆ ಎಂದು ವಿಷಾದಿಸಿದೆ.

(Zomato Ad controversy Company Responds To Backlash Against Ads Featuring Hrithik Roshan Katrina Kaif)

ಇದನ್ನೂ ಓದಿ: ಜೊಮ್ಯಾಟೊದ 1.5 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಕೊವಿಡ್​ ಲಸಿಕೆ ಉಚಿತ; ಸಿಇಒ ದೀಪಿಂದರ್​ ಗೋಯಲ್ ಘೋಷಣೆ

ಇದನ್ನೂ ಓದಿ: ‘ಅಫ್ಘಾನ್​ ಹಿಂದು-ಸಿಖ್ಖ​​ರು ಭಾರತಕ್ಕೆ ಹೋಗಿ-ಬರಲು ನಾವು ಅಡಚಣೆ ಮಾಡೋದಿಲ್ಲ’ -ತಾಲಿಬಾನ್​ ವಕ್ತಾರ

Published On - 4:06 pm, Tue, 31 August 21

ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?