AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zomato: ‘ರಾಷ್ಟ್ರ ಭಾಷೆ’ ಹಿಂದಿ ಬರಲೇಬೇಕೆಂದ ಝೊಮ್ಯಾಟೊ ಎಕ್ಸ್​ಕ್ಯೂಟಿವ್; ಕಂಪೆನಿಗೆ ತಗುಲಿಕೊಂಡ ನೆಟ್ಟಿಗರು

ಝೊಮ್ಯಾಟೊದ ಚಾಟ್ ಎಕ್ಸ್​ಕ್ಯೂಟಿವ್​ ತಮಿಳುನಾಡಿನ ಗ್ರಾಹಕರಿಗೆ "ರಾಷ್ಷ್ರ ಭಾಷೆ" ಹಿಂದಿ ಕಲಿಯುವಂತೆ ಹೇಳಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಏನಿದು ವಿವಾದ ಹಾಗೂ ಏನಾಯಿತು ಎಂಬುದರ ವಿವರ ಈ ಲೇಖನದಲ್ಲಿದೆ.

Zomato: 'ರಾಷ್ಟ್ರ ಭಾಷೆ' ಹಿಂದಿ ಬರಲೇಬೇಕೆಂದ ಝೊಮ್ಯಾಟೊ ಎಕ್ಸ್​ಕ್ಯೂಟಿವ್; ಕಂಪೆನಿಗೆ ತಗುಲಿಕೊಂಡ ನೆಟ್ಟಿಗರು
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on:Oct 19, 2021 | 1:51 PM

Share

ಚೆನ್ನೈ: ಹಿಂದಿ ಭಾಷೆ ಗೊತ್ತಿಲ್ಲ ಎಂಬ ಕಾರಣಕ್ಕೆ ಆಹಾರ ವಿತರಣೆ (ಫುಡ್​ ಡೆಲಿವರಿ) ದಿಗ್ಗಜ ಝೊಮ್ಯಾಟೊ ತನ್ನನ್ನು “ಸುಳ್ಳುಗಾರ” ಎಂದು ಕರೆದಿದೆ ಎಂಬುದಾಗಿ ಗ್ರಾಹರೊಬ್ಬರು ಆರೋಪಿಸಿದ್ದಾರೆ. ಕಂಪೆನಿಯಲ್ಲಿ ಕೆಲಸ ಮಾಡುವ ಆಹಾರ ಡೆಲಿವರಿ ಎಕ್ಸ್​ಕ್ಯೂಟಿವ್, “ರಾಷ್ಟ್ರೀಯ ಭಾಷೆ”ಯಾದ್ದರಿಂದ ಹಿಂದಿ ಕಲಿಯುವಂತೆ ತನಗೆ ಹೇಳಿದ್ದಾಗಿ ಗ್ರಾಹಕರು ಆರೋಪಿಸಿದ್ದಾರೆ. ಅಂದಹಾಗೆ ವಿಕಾಶ್ ಎಂದು ನೊಂದ ಗ್ರಾಹಕರು. ಅವರು ತಮ್ಮ ಟ್ವಿಟರ್ ಹ್ಯಾಂಡಲ್​ನಲ್ಲಿ ಡೆಲಿವರಿ ಎಕ್ಸ್​ಕ್ಯೂಟಿವ್ ಜತೆಗೆ ನಡೆಸಿದ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ.

ಹಿಂದಿ ನಮ್ಮ ರಾಷ್ಟ್ರೀಯ ಭಾಷೆ ಸ್ಕ್ರೀನ್‌ಶಾಟ್‌ಗಳ ಮೂಲಕವಾಗಿ ಗೊತ್ತಾಗುವುದೇನೆಂದರೆ, ವಿಕಾಶ್ ಮಾಡಿದ ಆರ್ಡರ್​ನಲ್ಲಿ ಸಮಸ್ಯೆಗಳು ಕಂಡುಬರುತ್ತವೆ. ಝೊಮ್ಯಾಟೊ ಚಾಟ್ ಸಪೋರ್ಟ್ ಎಕ್ಸ್​ಕ್ಯೂಟಿವ್ ಅವರು ಗ್ರಾಹಕರಿಗೆ ತಿಳಿಸಿರುವಂತೆ, ಐದು ಬಾರಿ ರೆಸ್ಟೋರೆಂಟ್ ಜೊತೆ ಮಾತನಾಡಿದ್ದಾರೆ. ಆದರೆ “ಭಾಷೆ ತೊಡಕು” ಇದೆ ಎಂದು ಹೇಳುತ್ತಾರೆ. ಇದಕ್ಕೆ ಗ್ರಾಹಕರು, “ಅದು ನನ್ನ ಚಿಂತೆಯ ವಿಷಯವಲ್ಲ” ಎಂದು ಉತ್ತರಿಸುತ್ತಾರೆ. ಝೊಮ್ಯಾಟೊದಿಂದ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದ ನಂತರ, ವಿಕಾಶ್ ಮರುಪಾವತಿಯನ್ನು ಕೇಳುತ್ತಾರೆ ಮತ್ತು “ತಮಿಳುನಾಡಿನಲ್ಲಿ ಝೊಮ್ಯಾಟೊ ಲಭ್ಯವಿದ್ದರೆ ಅವರು ಭಾಷೆಯನ್ನು ಅರ್ಥ ಮಾಡಿಕೊಳ್ಳುವ ಜನರನ್ನು ನೇಮಿಸಿಕೊಳ್ಳಬೇಕು,” ಎಂದು ಹೇಳಿದ್ದಾರೆ. ಆಗ ಎಕ್ಸ್​ಕ್ಯೂಟಿವ್ ಮಾತನಾಡಿ, ಹಿಂದಿ ನಮ್ಮ ರಾಷ್ಟ್ರಭಾಷೆ. ಹಾಗಾಗಿ ಎಲ್ಲರೂ ಹಿಂದಿಯನ್ನು ಸ್ವಲ್ಪವಾದರೂ ತಿಳಿದುಕೊಳ್ಳುವುದು ಸಾಮಾನ್ಯ ಎಂದಿದ್ದಾರೆ.

ಈ ಘಟನೆಯನ್ನು ‘ಒಪ್ಪಲಾಗದು’ ಎಂದ ಝೊಮ್ಯಾಟೊ ವಿಕಾಶ್ ಅವರ ಸಂಭಾಷಣೆಯ ಸ್ಕ್ರೀನ್ ಪೋಸ್ಟ್ ಮಾಡಿದ ತಕ್ಷಣ ವೈರಲ್ ಆಗಿತ್ತು. ಮತ್ತು ಜನರು ಝೊಮ್ಯಾಟೊ ಡೆಲಿವರಿ ಎಕ್ಸ್​ಕ್ಯೂಟಿವ್​ ಸಂವೇದನಾರಹಿತ ನಡವಳಿಕೆಗಾಗಿ ಟೀಕಿಸಿದ್ದಾರೆ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಕಂಪೆನಿಯ ಕಸ್ಟಮರ್ ಸಪೋರ್ಟ್ ಪುಟವಾಗಿರುವ ಝೊಮ್ಯಾಟೊ ಕೇರ್, ಟ್ವೀಟ್‌ಗೆ ಪ್ರತಿಕ್ರಿಯಿಸಿದೆ. ಮತ್ತು ಈ ಘಟನೆಯನ್ನು “ಸ್ವೀಕಾರಾರ್ಹವಲ್ಲ” ಎಂದು ಬಣ್ಣಿಸಿದೆ. ಆ ನಂತರ, ಸಾರ್ವಜನಿಕ ಕ್ಷಮೆಯಾಚನೆಗಾಗಿ ವಿಕಾಶ್‌ನ ಬೇಡಿಕೆಗೆ ಉತ್ತರಿಸಿದ್ದು, “ವಿಕಾಶ್, ನಮ್ಮ ದೂರವಾಣಿ ಸಂಭಾಷಣೆಯ ಪ್ರಕಾರ ನಿಮ್ಮ ಸಮಸ್ಯೆಯನ್ನು ಪರಿಹರಿಸಲಾಗಿದೆ. ಯಾವುದೇ ಹೆಚ್ಚಿನ ಸಹಾಯಕ್ಕಾಗಿ ನಮ್ಮನ್ನು ಸಂಪರ್ಕಿಸಿ,” ಎಂದು ಪ್ರತಿಕ್ರಿಯಿಸಲಾಗಿದೆ.

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದ ಸೆಂಥಿಲ್ ಕುಮಾರ್ ತಮ್ಮ ಹ್ಯಾಂಡಲ್‌ನಲ್ಲಿ ವಿಕಾಶ್ ಅವರ ಟ್ವೀಟ್ ಅನ್ನು ಹಂಚಿಕೊಂಡಿದ್ದು, ಝೊಮ್ಯಾಟೊ ಉತ್ತರದಾಯಿತ್ವವನ್ನು ಪ್ರಶ್ನಿಸಿದ್ದಾರೆ. “ತಮಿಳುನಾಡಿನಲ್ಲಿರುವ ಗ್ರಾಹಕರು ಹಿಂದಿಯನ್ನು ಏಕೆ ತಿಳಿದುಕೊಳ್ಳಬೇಕು ಮತ್ತು ಅವರು ಸ್ವಲ್ಪ ಹಿಂದಿಯನ್ನು ತಿಳಿದಿರಬೇಕು ಎಂದು ನಿಮ್ಮ ಗ್ರಾಹಕರಿಗೆ ಯಾವ ಆಧಾರದ ಮೇಲೆ ಸಲಹೆ ನೀಡಿದ್ದೀರಿ?” ಎಂದು ಕೇಳಲಾಗಿದೆ. ಝೊಮ್ಯಾಟೊದ ಪ್ರಕಾರ ಸಮಸ್ಯೆಯನ್ನು ಪರಿಹರಿಸಲಾಗಿದೆ.

ಇದನ್ನೂ ಓದಿ: ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ ಆದರೆ ಯಾವುದೇ ಹೇರಿಕೆ ಸಲ್ಲದು: ಹಿಂದಿ ಹೇರಿಕೆಯ ವಿರುದ್ಧ ನಟ ಧನಂಜಯ ಕಿಡಿ

Published On - 1:50 pm, Tue, 19 October 21

ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ