AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zomato Controversial Advertisement: ವಿವಾದ ಹುಟ್ಟುಹಾಕಿದ್ದ ‘ಮಹಾಕಾಲ್’ ಜಾಹೀರಾತು ಹಿಂಪಡೆದ ಝೊಮೊಟೊ

ಬಾಲಿವುಡ್ ನಟ ಹೃತಿಕ್ ರೋಷನ್ ಅವರು ನಟಿಸಿದ್ದ ಝೊಮೊಟೊ ಆಹಾರ ವಿತರಣಾ ವೇದಿಕೆಯ 'ಮಹಾಕಾಲ್' ಜಾಹೀರಾತಿಗೆ ಭಾರೀ ಟೀಕಿ ವ್ಯಕ್ತವಾಗುತ್ತಿದ್ದಂತೆ, ವೇದಿಕೆಯು ಜಾಹೀರಾತನ್ನು ಸ್ಥಗಿತಗೊಳಿಸಿ ಜನರ ಭಾವನೆಯನ್ನು ನೋಯಿಸಿದ್ದಕ್ಕಾಗಿ ಕ್ಷಮೆಯಾಚಿಸಿದೆ.

Zomato Controversial Advertisement: ವಿವಾದ ಹುಟ್ಟುಹಾಕಿದ್ದ 'ಮಹಾಕಾಲ್' ಜಾಹೀರಾತು ಹಿಂಪಡೆದ ಝೊಮೊಟೊ
ಜಾಹೀರಾತು
TV9 Web
| Edited By: Rakesh Nayak Manchi|

Updated on: Aug 22, 2022 | 12:24 PM

Share

ಬಾಲಿವುಡ್ ನಟ ಹೃತಿಕ್ ರೋಷನ್ ಅವರು ನಟಿಸಿದ್ದ ಝೊಮೊಟೊ ಆಹಾರ ವಿತರಣಾ ವೇದಿಕೆಯ ‘ಮಹಾಕಾಲ್’ ಜಾಹೀರಾತಿಗೆ ಭಾರೀ ಟೀಕಿ ವ್ಯಕ್ತವಾಗುತ್ತಿದ್ದಂತೆ, ವೇದಿಕೆಯು ಜಾಹೀರಾತನ್ನು ಸ್ಥಗಿತಗೊಳಿಸಿ ಜನರ ಭಾವನೆಯನ್ನು ನೋಯಿಸಿದ್ದಕ್ಕಾಗಿ ಕ್ಷಮೆಯಾಚಿಸಿದೆ. ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನದ ಅರ್ಚಕರು ಮತ್ತು ಭಕ್ತರು ನಟ ಹೃತಿಕ್ ಅವರು ನಟಿಸಿದ್ದ ‘ಮಹಾಕಾಲ್’ ಜಾಹೀರಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ, ಕೂಡಲೇ ಈ ಜಾಹೀರಾತನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೆ ಝೊಮೊಟೊ ಈ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಜಾಹೀರಾತಿನಲ್ಲಿ, ಹೃತಿಕ್ ರೋಷನ್ ಅವರು ಉಜ್ಜಯಿನಿಯಲ್ಲಿ “ಥಾಲಿ” ಸೇವನೆ ಮಾಡಬೇಕು ಎಂದು ಭಾವಿಸುತ್ತಾರೆ. ಇದಕ್ಕಾಗಿ ಅವರು ಮಹಾಕಾಲ್​ನಿಂದ ಆರ್ಡರ್ ಮಾಡುತ್ತಾರೆ. ಈ ಜಾಹೀರಾತನ್ನು ಗಮನಿಸಿದ ಮಹಾಕಾಲ್ ದೇವಸ್ಥಾನದ ಅರ್ಚಕರು ಮತ್ತು ಭಕ್ತರು ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು. ಉಜ್ಜಯಿನಿಯಲ್ಲಿರುವ ಮಹಾಕಾಲ್ ಶಿವನ ದೇವಾಲಯವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ.

“ಮಹಾಕಲ್ ದೇವಸ್ಥಾನವು ಯಾವುದೇ ಥಾಲಿಯನ್ನು ನೀಡುವುದಿಲ್ಲ. ಈ ಜಾಹೀರಾತಿಗಾಗಿ ಜೊಮಾಟೋ ಮತ್ತು ಹೃತಿಕ್ ರೋಷನ್ ಕ್ಷಮೆಯಾಚಿಸಬೇಕು. ಕಂಪೆನಿಯು ತನ್ನ ಜಾಹೀರಾತಿನಲ್ಲಿ ಮಹಾಕಾಲ್ ದೇವಾಲಯದ ಬಗ್ಗೆ ತಪ್ಪು ಪ್ರಚಾರವನ್ನು ಮಾಡಿದೆ. ಕಂಪನಿಯು ಅಂತಹ ಜಾಹೀರಾತುಗಳನ್ನು ನೀಡುವ ಮೊದಲು ಯೋಚಿಸಬೇಕು” ಎಂದು ಮಹಾಕಾಲ್ ದೇವಾಯಲದ ಅರ್ಚಕ ಮಹೇಶ್ ಶರ್ಮಾ ಹೇಳಿದ್ದಾರೆ. ಅಷ್ಟೇ ಅಲ್ಲದೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ವಿವಾದವನ್ನು ಪರಿಶೀಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಜಾಹೀರಾತಿಗೆ ಟೀಕೆ ಹಾಗೂ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಝೊಮೊಟೊ, ಜನರ ಭಾವನೆಗೆ ಧಕ್ಕೆ ತಂದಿರುವುದಕ್ಕೆ ಕ್ಷಮೆಯಾಚಿಸಿ ಹೇಳಿಕೆ ಬಿಡುಗಡೆ ಮಾಡಿದೆ. “ವೀಡಿಯೊವು ಪ್ಯಾನ್ ಇಂಡಿಯಾ ಅಭಿಯಾನದ ಭಾಗವಾಗಿದೆ, ಇದಕ್ಕಾಗಿ ನಾವು ಪ್ರತಿ ನಗರದಲ್ಲಿನ ಜನಪ್ರಿಯತೆಯ ಆಧಾರದ ಮೇಲೆ ಉನ್ನತ ಸ್ಥಳೀಯ ರೆಸ್ಟೋರೆಂಟ್‌ಗಳು ಮತ್ತು ಅವುಗಳ ಉನ್ನತ ಭಕ್ಷ್ಯಗಳನ್ನು ಗುರುತಿಸಿದ್ದೇವೆ. ಉಜ್ಜಯಿನಿಯಲ್ಲಿ ಪ್ರಚಾರಕ್ಕಾಗಿ ಆಯ್ಕೆಮಾಡಿದ ರೆಸ್ಟೋರೆಂಟ್‌ಗಳಲ್ಲಿ ಮಹಾಕಾಲ್ ರೆಸ್ಟೋರೆಂಟ್ (ಮಹಾಕಾಲ್ ಎಂದು ಸರಳೀಕರಿಸಲಾಗಿದೆ) ಒಂದಾಗಿದೆ. ಈ ಜಾಹೀರಾತು ಪೂಜ್ಯ ಮಹಾಕಾಳೇಶ್ವರ ದೇವಸ್ಥಾನದ್ದಲ್ಲ. ಮಹಾಕಾಲ್ ರೆಸ್ಟೋರೆಂಟ್ ಉಜ್ಜಯಿನಿಯಲ್ಲಿ ನಮ್ಮ ಉನ್ನತ ಪ್ರಮಾಣದ ರೆಸ್ಟೋರೆಂಟ್ ಪಾಲುದಾರರಲ್ಲಿ ಒಂದಾಗಿದೆ. ನಾವು ಅವರ ಭಾವನೆಗಳನ್ನು ಆಳವಾಗಿ ಗೌರವಿಸುತ್ತೇವೆ. ಉಜ್ಜಯಿನಿಯ ಜನರು ಮತ್ತು ಪ್ರಶ್ನೆಯಲ್ಲಿರುವ ಜಾಹೀರಾತು ಇನ್ನು ಮುಂದೆ ಚಾಲ್ತಿಯಲ್ಲಿರುವುದಿಲ್ಲ. ಯಾರ ನಂಬಿಕೆ ಮತ್ತು ಭಾವನೆಗಳನ್ನು ಎಂದಿಗೂ ನೋಯಿಸಬಾರದು ಎಂಬ ಉದ್ದೇಶಕ್ಕಾಗಿ ನಾವು ನಮ್ಮ ಪ್ರಾಮಾಣಿಕ ಕ್ಷಮೆಯನ್ನು ಯಾಚಿಸುತ್ತಿದ್ದೇವೆ”ಎಂದು ಟ್ವಿಟರ್​ನಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು