ವಿರೋಧದ ಬಳಿಕ ಪ್ಯೂರ್ ವೆಜ್ ಡೆಲಿವರಿ ಹಿಂಪಡೆಯಲು ಜೊಮಾಟೋ ನಿರ್ಧಾರ; ಪ್ರತ್ಯೇಕ ಹಸಿರು ಸಮವಸ್ತ್ರವೂ ಇಲ್ಲ

Zomato Rolls Back 2 Pure Veg Services: ಜೊಮಾಟೊ ತನ್ನ ಎರಡು ಪ್ಯೂರ್ ವೆಜ್ ಸೇವೆಗಳನ್ನು ಹಿಂಪಡೆದುಕೊಂಡಿದೆ. ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಹೆಜ್ಜೆ ಹಿಂದಿರಿಸಿದೆ. ಪ್ಯೂರ್ ವೆಜ್ ಮೋಡ್ ಮತ್ತು ಪ್ಯೂರ್ ವೆಜ್ ಫ್ಲೀಟ್ ಸೇವೆಗಳನ್ನು ಆರಂಭಿಸಿರುವುದಾಗಿ ಜೊಮಾಟೊ ಸಿಇಒ ದೀಪಿಂದರ್ ಗೋಯಲ್ ನಿನ್ನೆ ಮಂಗಳವಾರ ಹೇಳಿದ್ದರು. ಪ್ಯೂರ್ ವೆಜ್ ಎಂದರೆ ಅದು ಜಾತೀಯತೆ ಆಗುತ್ತದೆ ಎಂದು ವಿರೋಧ ಬಂದಿತ್ತು. ಪ್ಯೂರ್ ವೆಜ್ ಫ್ಲೀಟ್​ನಲ್ಲಿ ಸಸ್ಯಾಹಾರಗಳನ್ನು ಡೆಲಿವರಿ ಕೊಡಲೇ ಪ್ರತ್ಯೇಕ ತಂಡವನ್ನು ಇಡುವ ಪ್ರಸ್ತಾಪ ಇತ್ತು.

ವಿರೋಧದ ಬಳಿಕ ಪ್ಯೂರ್ ವೆಜ್ ಡೆಲಿವರಿ ಹಿಂಪಡೆಯಲು ಜೊಮಾಟೋ ನಿರ್ಧಾರ; ಪ್ರತ್ಯೇಕ ಹಸಿರು ಸಮವಸ್ತ್ರವೂ ಇಲ್ಲ
ಜೊಮಾಟೊ ಸಿಇಒ ದೀಪಿಂದರ್ ಗೋಯಲ್ (ಎಡಗಡೆ ಇರುವವರು).
Follow us
|

Updated on: Mar 20, 2024 | 10:26 AM

ನವದೆಹಲಿ, ಮಾರ್ಚ್ 20: ಜೊಮಾಟೋ ಆಫರ್ ಮಾಡಿರುವ ಪ್ಯೂರ್ ವೆಜ್ ಮೋಡ್ ಮತ್ತು ಪ್ಯೂರ್ ವೆಜ್ ಫ್ಲೀಟ್ ಸರ್ವಿಸ್​​ಗೆ (Zomato Pure Veg services) ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ. ಇದರ ಬೆನ್ನಲ್ಲೇ ಈ ಸೇವೆಗಳನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಜೊಮಾಟೋ ಸಿಇಒ ದೀಪಿಂದರ್ ಗೋಯಲ್ (Deepinder Goyal) ನಿನ್ನೆ ಮಂಗಳವಾರ ರಾತ್ರಿ ಹೇಳಿದ್ದಾರೆ. ದೀಪಿಂದರ್ ಗೋಯಲ್ ನಿನ್ನೆ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಪ್ಯೂರ್ ವೆಜ್ ಮೋಡ್ ಮತ್ತು ಪ್ಯೂರ್ ವೆಜ್ ಫ್ಲೀಟ್ ಸರ್ವಿಸ್ ಆರಂಭಿಸುತ್ತಿರುವುದಾಗಿ ತಿಳಿಸಿದ್ದರು. ಜೊಮಾಟೊದ ಈ ಸೇವೆಯು ಜಾತೀಯತೆಯನ್ನು (castiesm) ಸೃಷ್ಟಿಸುತ್ತದೆ ಎಂಬುದು ಹೆಚ್ಚಿನ ಆಕ್ಷೇಪ. ಹೀಗಾಗಿ, ಜೊಮಾಟೊ ಈ ಎರಡು ಸೇವೆಗಳನ್ನು ಸದ್ಯಕ್ಕೆ ಹಿಂತೆಗೆದುಕೊಂಡಿದೆ.

ಏನಿದು ಪ್ಯೂರ್ ವೆಜ್ ಮೋಡ್ ಮತ್ತು ಫ್ಲೀಟ್?

ಪರಿಪೂರ್ಣ ಸಸ್ಯಾಹಾರಿಗಳಿಗಾಗಿ ಜೊಮಾಟೊ ಈ ಎರಡು ಸೇವೆ ಆರಂಭಿಸಿತ್ತು. ಪ್ಯೂರ್ ವೆಜ್ ಮೋಡ್​ನಲ್ಲಿ ಬುಕ್ ಮಾಡಲಾಗುವ ಆಹಾರವನ್ನು ವೆಜ್ ಹೋಟೆಲ್​ಗಳಿಂದ ಮಾತ್ರವೇ ಪಿಕಪ್ ಮಾಡಿ, ಗ್ರಾಹಕರಿಗೆ ಡೆಲಿವರಿ ಕೊಡಲಾಗುತ್ತದೆ.

ಇದನ್ನೂ ಓದಿ: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ

ಪ್ಯೂರ್ ವೆಜ್ ಫ್ಲೀಟ್​ನಲ್ಲಿ, ಸಸ್ಯಾಹಾರದ ಡೆಲಿವರಿಗೆ ಪ್ರತ್ಯೇಕ ತಂಡವನ್ನು ಇಡಲಾಗುತ್ತದೆ. ಮಾಮೂಲಿಯ ಜೊಮಾಟೋ ಡೆಲಿವರಿ ಬಾಯ್ಸ್ ಕೆಂಪು ಸಮವಸ್ತ್ರ ಧರಿಸಿದರೆ, ಪ್ಯೂರ್ ವೆಜ್ ಫ್ಲೀಟ್​ನ ತಂಡದವರ ಯೂನಿಫಾರ್ಮ್ ಹಸಿರು ಬಣ್ಣದ್ದಾಗಿರುತ್ತದೆ. ಅಲ್ಲದೇ ಈ ತಂಡ ಕೇವಲ ಪ್ಯೂರ್ ವೆಜ್ ಆಹಾರವನ್ನು ಮಾತ್ರ ಡೆಲಿವರಿ ಮಾಡುತ್ತದೆ.

ಯಾಕೆ ಬೇಕಿತ್ತು ಪ್ಯೂರ್ ವೆಜ್ ಫ್ಲೀಟ್?

ಜೊಮಾಟೊ ಸಿಇಒ ದೀಪಿಂದರ್ ಗೋಯಲ್ ನೀಡಿರುವ ಸ್ಪಷ್ಟನೆ ಪ್ರಕಾರ, ಆಹಾರ ಡೆಲಿವರಿಗೆ ಹೋಗುವಾಗ ಪ್ಯಾಕ್​ನಿಂದ ಆಹಾರ ಚೆಲ್ಲುವ ಸಾಧ್ಯತೆ ಇರುತ್ತದೆ. ಒಂದೇ ಡೆಲವರಿ ವೇಳೆ ಮಾಂಸಾಹಾರ ಮತ್ತು ಸಸ್ಯಾಹಾರ ಎರಡೂ ಇದ್ದರೆ ಒಂದರ ಮೇಲೊಂದು ಚೆಲ್ಲುವ ಸಾಧ್ಯತೆ ಇರುತ್ತದೆ. ಸಂಪೂರ್ಣ ಸಸ್ಯಾಹಾರಿಗಳಾದವರಿಗೆ ಇದರಿಂದ ಮುಜುಗರ ಆಗಬಹುದು. ಈ ಬಗ್ಗೆ ಬಹಳಷ್ಟು ಜನರ ಸಲಹೆ ಮೇರೆಗೆ ಪ್ಯೂರ್ ವೆಜ್ ಫ್ಲೀಟ್ ಆರಂಭಿಸಿದ್ದಾಗಿ ಗೋಯಲ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಉಜ್ಜೀವನ್ ಬ್ಯಾಂಕ್​ನಲ್ಲಿ ಎಫ್​ಡಿಗೆ ಬಡ್ಡಿದರ ಬರೋಬ್ಬರಿ ಶೇ. 9; ಉಳಿತಾಯ ಹಣದ ಹೂಡಿಕೆಗೆ ಒಳ್ಳೆಯ ಪ್ಲಾನ್

ಈಗ ಸೋಷಿಯಲ್ ಮೀಡಿಯಾದಲ್ಲಿ ಈ ಎರಡು ಸೇವೆಯನ್ನು ಜಾತೀಯತೆ ಎಂದು ಟ್ರೋಲ್ ಮಾಡಲಾಗುತ್ತಿದೆ. ಇವನ್ನು ಸದ್ಯಕ್ಕೆ ಹಿಂಪಡೆಯಲಾಗಿದೆ. ಎಲ್ಲಾ ಜೊಮಾಟೊ ಡೆಲಿವರಿ ಬಾಯ್​ಗಳೂ ಕೆಂಪು ಬಣ್ಣದ ಸಮವಸ್ತ್ರವನ್ನೇ ಧರಿಸಲಿದ್ದಾರೆ. ಪ್ರತ್ಯೇಕ ಹಸಿರು ಸಮವಸ್ತ್ರ ಇರುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್