AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ. ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. […]

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 11, 2019 | 2:53 PM

Share

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ.

ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸರಗಳ್ಳತನ ಮಾಡಿದ ಕೆಜಿ ಹಳ್ಳಿ ನಿವಾಸಿ ವಿಘ್ನೇಶ್​ನನ್ನು ಹಿಡಿದುಕೊಟ್ಟಿದ್ದಕ್ಕೆ ವೈಲ್ಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿದ್ದಾರೆ. ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:39 pm, Wed, 11 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು