AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ. ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. […]

ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಆಟೋ ಚಾಲಕನಿಗೆ ಡಿಸಿಪಿಯಿಂದ ಬಹುಮಾನ
ಸಾಧು ಶ್ರೀನಾಥ್​
|

Updated on:Dec 11, 2019 | 2:53 PM

Share

ಬೆಂಗಳೂರು: ಬೈಕ್​ನಲ್ಲಿ ಬಂದವ ಮಹಿಳೆಯ ಕತ್ತಿನಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ಆಟೋ ಚಾಲಕ ಹಿಡಿದಿದ್ದಾರೆ. ನಗರದ ಮಾರತಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ಈ ಘಟನೆ ನಡೆದಿದೆ.

ಡಿಸೆಂಬರ್ 8 ರಂದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಿನ್ನದ ಸರ ಎಗರಿಸಿದ್ದ ಖತರ್ನಾಕ್ ಕಳ್ಳನನ್ನು ಸ್ಥಳದಲ್ಲಿದ್ದ ಆಟೋ ಚಾಲಕ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್​ಗೆ ಆಟೋ ಡಿಕ್ಕಿ ಹೊಡೆದು ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಟೋಚಾಲಕ ಹನುಮಂತನ ಈ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸರಗಳ್ಳತನ ಮಾಡಿದ ಕೆಜಿ ಹಳ್ಳಿ ನಿವಾಸಿ ವಿಘ್ನೇಶ್​ನನ್ನು ಹಿಡಿದುಕೊಟ್ಟಿದ್ದಕ್ಕೆ ವೈಲ್ಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿದ್ದಾರೆ. ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:39 pm, Wed, 11 December 19

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!