Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷ ಬಾಲಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ 10 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ತಿರುವು ಲಭ್ಯವಾಗಿದೆ. ತನ್ನ ತಾಯಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿ ಸೇರಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

10 ವರ್ಷ ಬಾಲಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿಯನ್ನು ಬಂಧಿಸಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Sep 10, 2021 | 1:24 PM

ಚಿತ್ರಹಿಂಸೆ ನೀಡಿ 10 ವರ್ಷದ ಬಾಲಕನ ಕೊಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ತಾಯಿ ಹಾಗೂ ರೌಡಿ ಶೀಟರ್ ಜೊತೆಗಿನ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಚಿತ್ರಹಿಂಸೆ ನೀಡಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಮೈಕೋಲೇಔಟ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕನ ತಾಯಿ, ರೌಡಿಶೀಟರ್ ಹಾಗೂ ಆತನ ಪ್ರೇಯಸಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಬಾಲಕನ ತಾಯಿಯೊಂದಿಗೆ ರೌಡಿಶೀಟರ್ ಅಕ್ರಮ ಸಂಬಂಧ ಹೊಂದಿದ್ದ. ಅದನ್ನು ಪ್ರಶ್ನಿಸಿದ್ದಕ್ಕೆ ಪೈಪ್​ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ತಾಯಿ, ರೌಡಿಶೀಟರ್, ಆತನ ಪ್ರೇಯಸಿ ಸೇರಿ ಬಾಲಕನ ಹತ್ಯೆ ನಡೆಸಿದ್ದು, ಶವವನ್ನು ರೌಡಿಶೀಟರ್ ಹಾಗೂ ಆತನ ಪ್ರೇಯಸಿ ಕಾರಿನಲ್ಲಿ ಕೊಂಡೊಯ್ದು ತಮಿಳುನಾಡಿನ ನಿರ್ಜನ ಪ್ರದೇಶದಲ್ಲಿ ಎಸೆದಿದ್ದರು. ಪುತ್ರನ ಹತ್ಯೆಯಾಗಿದ್ದರೂ ಬೆಂಗಳೂರಿನಲ್ಲಿ ತಾಯಿ ಆರಾಮವಾಗಿದ್ದಳು. ಫೆಬ್ರವರಿಯಲ್ಲಿ ಹತ್ಯೆಯಾಗಿದ್ದರಿಂದ ಯಾರಿಗೂ ಸುಳಿವು ಸಿಗುವುದಿಲ್ಲ ಎಂದು ಆಕೆ ಭಾವಿಸಿದ್ದಳು. ಮಗು ಕಾಣದ ಹಿನ್ನೆಲೆಯಲ್ಲಿ ಸಂಬಂಧಿಕರು ತಾಯಿಯನ್ನು ಪ್ರಶ್ನಿಸಿದಾಗ, ತಾನು ಒಳ್ಳೆಯವಳೆಂದು ಬಿಂಬಿಸಿಕೊಳ್ಳಲು ಮೈಕೋಲೇಔಟ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಳು.

ಪೊಲೀಸರಿಗೆ ಅನುಮಾನ ಬಂದು ತಾಯಿಯನ್ನೇ ವಿಚಾರಣೆಗೆ ಒಳಪಡಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ತಮಿಳುನಾಡಿನಲ್ಲಿ ಎಸೆದಿದ್ದ ಶವದ ಮರಣೋತ್ತರ ಪರೀಕ್ಷೆ ಮಾಡಿಸಿದ್ದ ಅಲ್ಲಿನ ಪೊಲೀಸರಿಗೆ ಬಾಲಕನ ಗುರುತು ಪತ್ತೆಯಾಗಿರಲಿಲ್ಲ. ಅವರು ಕೊಲೆ ಪ್ರಕರಣ​ವನ್ನು ದಾಖಲಿಸಿದ್ದರು. 7 ತಿಂಗಳ ನಂತರ ಬಾಲಕನ ತಾಯಿ ಮೈಕೋಲೇಔಟ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಳು. ಸದ್ಯ ಕೊಲೆ ಪ್ರಕರಣ​ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್, ಪ್ರೇಯಸಿ​ ಹಾಗೂ ತಾಯಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ:

ಬೆಂಗಳೂರು: ಚಿತ್ರಹಿಂಸೆ ನೀಡಿ 10 ವರ್ಷ ಬಾಲಕನ ಹತ್ಯೆ; ತಾಯಿ ಹಾಗೂ ರೌಡಿ ಶೀಟರ್ ಬಂಧನ

ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಮಂತ್ರಿಗಳಾಗುವಂತಿಲ್ಲ; ಮಕ್ಕಳು ಹೆರುವುದಷ್ಟೇ ಅವರ ಕೆಲಸ: ತಾಲಿಬಾನ್

(10 year old boy murder case got big twist and boy’s mother rowdy sheeter and his lover are arrested)

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್