AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hathras Accident: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಿನಿ ಟ್ರಕ್‌ಗೆ ಬಸ್ ಡಿಕ್ಕಿ; 12 ಜನ ಸಾವು, 16 ಮಂದಿಗೆ ಗಾಯ

ಉತ್ತರ ಪ್ರದೇಶ ರಾಜ್ಯದ ಹತ್ರಾಸ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಮಿನಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ. ಅಪಘಾತ ಬಹಳ ಭೀಕರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Hathras Accident: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಿನಿ ಟ್ರಕ್‌ಗೆ ಬಸ್ ಡಿಕ್ಕಿ; 12 ಜನ ಸಾವು, 16 ಮಂದಿಗೆ ಗಾಯ
ಹತ್ರಾಸ್‌ನಲ್ಲಿ ಮಿನಿ ಟ್ರಕ್‌ಗೆ ಬಸ್ ಡಿಕ್ಕಿ
ಸುಷ್ಮಾ ಚಕ್ರೆ
|

Updated on: Sep 06, 2024 | 9:09 PM

Share

ಹತ್ರಾಸ್: ಇಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಿನಿ ಟ್ರಕ್‌ಗೆ ರಸ್ತೆಮಾರ್ಗದ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರು ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಮಿನಿ ಲಾರಿಯಲ್ಲಿದ್ದವರು ಊಟ ಮುಗಿಸಿ ಸೇವಾಲ ಗ್ರಾಮಕ್ಕೆ ಹಿಂತಿರುಗುತ್ತಿದ್ದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ತಿಳಿದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಪುನ್ ಅಗರ್ವಾಲ್ ಅವರು, “ಆಗ್ರಾ-ಅಲಿಘರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಅನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ಬಸ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಸರಣಿ ಅಪಘಾತ, ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮಾಹಿತಿಯ ಪ್ರಕಾರ, ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮಾಹಿತಿ ಪಡೆದ ಕೂಡಲೇ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ತಲುಪಿದರು. ಮೃತರನ್ನು ಮತ್ತು ಅಪಘಾತಕ್ಕೆ ಕಾರಣರಾದವರನ್ನು ಗುರುತಿಸುತ್ತಿದ್ದೇವೆ ಎಂದು ಹತ್ರಾಸ್ ಎಸ್ಪಿ ನಿಪುನ್ ಅಗರ್ವಾಲ್ ಹೇಳಿದ್ದಾರೆ. ಪ್ರಾಣ ಕಳೆದುಕೊಂಡವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದು, ಈ ಘಟನೆಗೆ ಕಾರಣರಾದವರನ್ನು ಬಿಡುವುದಿಲ್ಲ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ನಾಲ್ವರು ಮಕ್ಕಳೂ ಸೇರಿದ್ದಾರೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ