AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಹೈದರಾಬಾದ್​ ಏರ್​ಪೋರ್ಟ್​ಗಳಲ್ಲಿ 13 ಕೋಟಿ ರೂ. ಮೌಲ್ಯದ ವಜ್ರ, ವಿದೇಶಿ ಕರೆನ್ಸಿ ಜಪ್ತಿ: ನಾಲ್ವರು ವಶಕ್ಕೆ

ಕೆಐಎಬಿನಲ್ಲಿ​ 7.77 ಕೋಟಿ ರೂ. ಮೌಲ್ಯದ ವಜ್ರ, 4.62 ಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆ‌ಯಾಗಿದ್ದರೆ, ಹೈದರಾಬಾದ್​ ಏರ್​ಪೋರ್ಟ್​ನಲ್ಲಿ 6.03 ಕೋಟಿ ರೂ. ಮೌಲ್ಯದ ವಜ್ರಗಳು, 9.83 ಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಸದ್ಯ ವಶಕ್ಕೆ ಪಡೆದ ನಾಲ್ವರನ್ನು ಡಿಆರ್​​ಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. 

ಬೆಂಗಳೂರು, ಹೈದರಾಬಾದ್​ ಏರ್​ಪೋರ್ಟ್​ಗಳಲ್ಲಿ 13 ಕೋಟಿ ರೂ. ಮೌಲ್ಯದ ವಜ್ರ, ವಿದೇಶಿ ಕರೆನ್ಸಿ ಜಪ್ತಿ: ನಾಲ್ವರು ವಶಕ್ಕೆ
ವಜ್ರ, ವಿದೇಶಿ ಕರೆನ್ಸಿ ಜಪ್ತಿ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 13, 2024 | 8:42 PM

ದೇವನಹಳ್ಳಿ, ಜನವರಿ 13: ಬೆಂಗಳೂರು, ಹೈದರಾಬಾದ್​ನಲ್ಲಿ ಡಿಆರ್​ಐ ಅಧಿಕಾರಿಗಳ ಕಾರ್ಯಾಚರಣೆ ವೇಳೆ 2 ಏರ್​ಪೋರ್ಟ್​ಗಳಲ್ಲಿ 13 ಕೋಟಿ ರೂ. ಮೌಲ್ಯದ ವಜ್ರ (Diamond) ಮತ್ತು ವಿದೇಶಿ ಕರೆನ್ಸಿ ಪತ್ತೆ ಆಗಿದೆ. ದುಬೈಗೆ ಹೊರಟಿದ್ದ ನಾಲ್ವರು ಪ್ರಯಾಣಿಕರ ತಪಾಸಣೆ ವೇಳೆ ಪತ್ತೆ ಆಗಿದ್ದು, ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರು, ಹೈದರಾಬಾದ್ ಏರ್‌ಪೋರ್ಟ್​ನಿಂದ ವಿಮಾನದಲ್ಲಿ ದುಬೈಗೆ ಸಾಗಿಸಲು ಯತ್ನಿಸಿದ್ದ ನಾಲ್ವರು ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದೆ.

ಕೆಐಎಬಿನಲ್ಲಿ​ 7.77 ಕೋಟಿ ರೂ. ಮೌಲ್ಯದ ವಜ್ರ, 4.62 ಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆ‌ಯಾಗಿದ್ದರೆ, ಹೈದರಾಬಾದ್​ ಏರ್​ಪೋರ್ಟ್​ನಲ್ಲಿ 6.03 ಕೋಟಿ ರೂ. ಮೌಲ್ಯದ ವಜ್ರಗಳು, 9.83 ಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಚಾಕೊಲೇಟ್‌ ಮತ್ತು ವೈಪರ್‌ಗಳ ರೂಪದಲ್ಲಿ ವಜ್ರಗಳನ್ನು ಇಟ್ಟು ಸೀಲ್ ಮಾಡಿ ಸಾಗಿಸುತ್ತಿದ್ದರು. ಸದ್ಯ ವಶಕ್ಕೆ ಪಡೆದ ನಾಲ್ವರನ್ನು ಡಿಆರ್​​ಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಅಧಿಕಾರಿಗಳ ಕಣ್ತಪ್ಪಿಸಿ ಚಾಕು ಮತ್ತು ಟ್ರೇ ನಲ್ಲಿ ಗೋಲ್ಡ್ ಸಾಗಾಟ

ಪೇಸ್ಟ್ ಹಾಗೂ ಕಟ್ ಪೀಸ್ ಮಾದರಿಯಲ್ಲಿ ಚಿನ್ನವನ್ನ ವುಡ್ ಟ್ರೇ ಹಾಗೂ ಚಾಕುವಿನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 19 ಲಕ್ಷಕ್ಕೂ ಅಧಿಕ ಬೆಲೆ ಬಾಳುವ 298 ಗ್ರಾಂ ಚಿನ್ನ ಸಿಕ್ಕಿದ್ದು ಚಿನ್ನವನ್ನು ಇತ್ತೀಚಿಗೆ ಜಪ್ತಿ ಮಾಡಿದ್ದರು. ದುಬೈನಿಂದ ವಿಮಾನದಲ್ಲಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ಥಾಣಕ್ಕೆ ಇಬ್ಬರು ಪ್ರಯಾಣಿಕರು ಆಗಮಿಸಿದ್ದರು.

ಇದನ್ನೂ ಓದಿ: ಸ್ನೇಹಿತನಿಗೆ ಡ್ರಾಪ್ ಕೊಡಲು ನಕಲಿ ಟಿಕೆಟ್​​ ಬಳಕೆ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ

ಲಗೇಜ್​ ಬ್ಯಾಗ್​ನಲ್ಲಿ ವುಡ್ ಟ್ರೇ ಹಾಗೂ ಸಿಲ್ವರ್ ಕೋಟ್ ಚಾಕುವನ್ನಿಟ್ಟುಕೊಂಡು ಬಂದಿರುವುದು ಅನುಮಾನ ಮೂಡಿಸಿತ್ತು. ಹೀಗಾಗಿ ಚಾಕು ಹಾಗೂ ವುಡ್ ಟ್ರೇ ಪರಿಶೀಲನೆ ನಡೆಸಿದಾಗ ವುಡ್ ಟ್ರೆಗೆ ಪೇಪರ್ ಸ್ಟಿಕರ್​ ಹಿಂಬಾಗದಲ್ಲಿ ಚಿನ್ನವನ್ನ ಪೇಸ್ಟ್ ರೂಪದಲ್ಲಿ ಮಾಡಿ ಅಂಟಿಸಿರುವುದು ಬೆಳಕಿಗೆ ಬಂದಿತ್ತು. ಜೊತೆಗೆ ಸಿಲ್ವರ್ ಕೋಟೆಡ್ ಚಾಕುವಿನ ಹ್ಯಾಂಡಲ್​ನಲ್ಲಿ ಕಟ್ ಪೀಸ್ ಚಿನ್ನಕ್ಕೂ ಸಿಲ್ವರ್ ಕೋಟ್ ಮಾಡಿ ತಂದಿದ್ದು ಎರಡನ್ನು ಕಸ್ಟಮ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:42 pm, Sat, 13 January 24

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ