AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಹೈದರಾಬಾದ್​ ಏರ್​ಪೋರ್ಟ್​ಗಳಲ್ಲಿ 13 ಕೋಟಿ ರೂ. ಮೌಲ್ಯದ ವಜ್ರ, ವಿದೇಶಿ ಕರೆನ್ಸಿ ಜಪ್ತಿ: ನಾಲ್ವರು ವಶಕ್ಕೆ

ಕೆಐಎಬಿನಲ್ಲಿ​ 7.77 ಕೋಟಿ ರೂ. ಮೌಲ್ಯದ ವಜ್ರ, 4.62 ಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆ‌ಯಾಗಿದ್ದರೆ, ಹೈದರಾಬಾದ್​ ಏರ್​ಪೋರ್ಟ್​ನಲ್ಲಿ 6.03 ಕೋಟಿ ರೂ. ಮೌಲ್ಯದ ವಜ್ರಗಳು, 9.83 ಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಸದ್ಯ ವಶಕ್ಕೆ ಪಡೆದ ನಾಲ್ವರನ್ನು ಡಿಆರ್​​ಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. 

ಬೆಂಗಳೂರು, ಹೈದರಾಬಾದ್​ ಏರ್​ಪೋರ್ಟ್​ಗಳಲ್ಲಿ 13 ಕೋಟಿ ರೂ. ಮೌಲ್ಯದ ವಜ್ರ, ವಿದೇಶಿ ಕರೆನ್ಸಿ ಜಪ್ತಿ: ನಾಲ್ವರು ವಶಕ್ಕೆ
ವಜ್ರ, ವಿದೇಶಿ ಕರೆನ್ಸಿ ಜಪ್ತಿ
ನವೀನ್ ಕುಮಾರ್ ಟಿ
| Edited By: |

Updated on:Jan 13, 2024 | 8:42 PM

Share

ದೇವನಹಳ್ಳಿ, ಜನವರಿ 13: ಬೆಂಗಳೂರು, ಹೈದರಾಬಾದ್​ನಲ್ಲಿ ಡಿಆರ್​ಐ ಅಧಿಕಾರಿಗಳ ಕಾರ್ಯಾಚರಣೆ ವೇಳೆ 2 ಏರ್​ಪೋರ್ಟ್​ಗಳಲ್ಲಿ 13 ಕೋಟಿ ರೂ. ಮೌಲ್ಯದ ವಜ್ರ (Diamond) ಮತ್ತು ವಿದೇಶಿ ಕರೆನ್ಸಿ ಪತ್ತೆ ಆಗಿದೆ. ದುಬೈಗೆ ಹೊರಟಿದ್ದ ನಾಲ್ವರು ಪ್ರಯಾಣಿಕರ ತಪಾಸಣೆ ವೇಳೆ ಪತ್ತೆ ಆಗಿದ್ದು, ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರು, ಹೈದರಾಬಾದ್ ಏರ್‌ಪೋರ್ಟ್​ನಿಂದ ವಿಮಾನದಲ್ಲಿ ದುಬೈಗೆ ಸಾಗಿಸಲು ಯತ್ನಿಸಿದ್ದ ನಾಲ್ವರು ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದೆ.

ಕೆಐಎಬಿನಲ್ಲಿ​ 7.77 ಕೋಟಿ ರೂ. ಮೌಲ್ಯದ ವಜ್ರ, 4.62 ಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆ‌ಯಾಗಿದ್ದರೆ, ಹೈದರಾಬಾದ್​ ಏರ್​ಪೋರ್ಟ್​ನಲ್ಲಿ 6.03 ಕೋಟಿ ರೂ. ಮೌಲ್ಯದ ವಜ್ರಗಳು, 9.83 ಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಚಾಕೊಲೇಟ್‌ ಮತ್ತು ವೈಪರ್‌ಗಳ ರೂಪದಲ್ಲಿ ವಜ್ರಗಳನ್ನು ಇಟ್ಟು ಸೀಲ್ ಮಾಡಿ ಸಾಗಿಸುತ್ತಿದ್ದರು. ಸದ್ಯ ವಶಕ್ಕೆ ಪಡೆದ ನಾಲ್ವರನ್ನು ಡಿಆರ್​​ಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಅಧಿಕಾರಿಗಳ ಕಣ್ತಪ್ಪಿಸಿ ಚಾಕು ಮತ್ತು ಟ್ರೇ ನಲ್ಲಿ ಗೋಲ್ಡ್ ಸಾಗಾಟ

ಪೇಸ್ಟ್ ಹಾಗೂ ಕಟ್ ಪೀಸ್ ಮಾದರಿಯಲ್ಲಿ ಚಿನ್ನವನ್ನ ವುಡ್ ಟ್ರೇ ಹಾಗೂ ಚಾಕುವಿನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 19 ಲಕ್ಷಕ್ಕೂ ಅಧಿಕ ಬೆಲೆ ಬಾಳುವ 298 ಗ್ರಾಂ ಚಿನ್ನ ಸಿಕ್ಕಿದ್ದು ಚಿನ್ನವನ್ನು ಇತ್ತೀಚಿಗೆ ಜಪ್ತಿ ಮಾಡಿದ್ದರು. ದುಬೈನಿಂದ ವಿಮಾನದಲ್ಲಿ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ಥಾಣಕ್ಕೆ ಇಬ್ಬರು ಪ್ರಯಾಣಿಕರು ಆಗಮಿಸಿದ್ದರು.

ಇದನ್ನೂ ಓದಿ: ಸ್ನೇಹಿತನಿಗೆ ಡ್ರಾಪ್ ಕೊಡಲು ನಕಲಿ ಟಿಕೆಟ್​​ ಬಳಕೆ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ

ಲಗೇಜ್​ ಬ್ಯಾಗ್​ನಲ್ಲಿ ವುಡ್ ಟ್ರೇ ಹಾಗೂ ಸಿಲ್ವರ್ ಕೋಟ್ ಚಾಕುವನ್ನಿಟ್ಟುಕೊಂಡು ಬಂದಿರುವುದು ಅನುಮಾನ ಮೂಡಿಸಿತ್ತು. ಹೀಗಾಗಿ ಚಾಕು ಹಾಗೂ ವುಡ್ ಟ್ರೇ ಪರಿಶೀಲನೆ ನಡೆಸಿದಾಗ ವುಡ್ ಟ್ರೆಗೆ ಪೇಪರ್ ಸ್ಟಿಕರ್​ ಹಿಂಬಾಗದಲ್ಲಿ ಚಿನ್ನವನ್ನ ಪೇಸ್ಟ್ ರೂಪದಲ್ಲಿ ಮಾಡಿ ಅಂಟಿಸಿರುವುದು ಬೆಳಕಿಗೆ ಬಂದಿತ್ತು. ಜೊತೆಗೆ ಸಿಲ್ವರ್ ಕೋಟೆಡ್ ಚಾಕುವಿನ ಹ್ಯಾಂಡಲ್​ನಲ್ಲಿ ಕಟ್ ಪೀಸ್ ಚಿನ್ನಕ್ಕೂ ಸಿಲ್ವರ್ ಕೋಟ್ ಮಾಡಿ ತಂದಿದ್ದು ಎರಡನ್ನು ಕಸ್ಟಮ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:42 pm, Sat, 13 January 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ