AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮನೆಗೆ ಹೋಗಿದ್ದ 13 ಮಹಿಳೆಯರು ಬಾವಿಗೆ ಬಿದ್ದು ಸಾವು; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮುಖ್ಯಮಂತ್ರಿ

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಸಂತಾಪ  ವ್ಯಕ್ತಪಡಿಸಿದ್ದಾರೆ.  ಕುಶಿನಗರದಲ್ಲಿ ನಡೆದ ದುರ್ಘಟನೆ ನಿಜಕ್ಕೂ ಹೃದಯ ಕಲುಕುವಂತಿದೆ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಇದರಲ್ಲಿ ಗಾಯಗೊಂಡವರೂ ಇದ್ದು, ಅವರೆಲ್ಲ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಮದುವೆ ಮನೆಗೆ ಹೋಗಿದ್ದ 13 ಮಹಿಳೆಯರು ಬಾವಿಗೆ ಬಿದ್ದು ಸಾವು; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮುಖ್ಯಮಂತ್ರಿ
ಬಾವಿ
TV9 Web
| Edited By: |

Updated on:Feb 17, 2022 | 10:35 AM

Share

ಮದುವೆ ಮನೆಯಲ್ಲಿ ಒಂದು ಭೀಕರ ದುರಂತ ಸಂಭವಿಸಿದೆ. ಮದುವೆಗೆಂದು ಹೋಗಿದ್ದ 13 ಮಹಿಳೆಯರು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಬುಧವಾರ (ಫೆ.16) ರಾತ್ರಿ 8.30ರ ಹೊತ್ತಿಗೆ ಉತ್ತರ ಪ್ರದೇಶದ ಕುಶಿನಗರದ ನೆಬುವಾ ನೌರಂಗಿಯಾದಲ್ಲಿ ಮದುವೆ ನಡೆಯುತ್ತಿದ್ದ ಮನೆಯೊಂದರಲ್ಲಿ ಈ ಅವಘಡ ನಡೆದಿದೆ ಎಂದು ಗೋರಖ್​​ಪುರ ವಲಯದ ಎಡಿಜಿ ಅಖಿಲ್​ ಕುಮಾರ್ ತಿಳಿಸಿದ್ದಾರೆ. ಅಷ್ಟಕ್ಕೂ ಈ ಮಹಿಳೆಯರೆಲ್ಲ ಒಟ್ಟಿಗೆ ಬಾವಿಗೆ ಬೀಳಲು ಕಾರಣ ತುಂಬ ಭಯಾನಕ.

ಮದುವೆ ನಡೆಯುತ್ತಿದ್ದ ಈ ಸ್ಥಳದಲ್ಲಿ ಒಂದು ದೊಡ್ಡದಾದ ಬಾವಿಯಿದ್ದು, ಅದರ ಮೇಲಿಂದ ಸ್ಲ್ಯಾಬ್​ ಹಾಕಿ, ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿತ್ತು. ವಿವಾಹ ಸಮಾರಂಭ ಇದ್ದುದರಿಂದ ಅನೇಕರು ಬಂದು ಅಲ್ಲಿಯೇ ಕುಳಿತಿದ್ದರು. ಬಾವಿಯ ಮೇಲಿನ ಸ್ಲ್ಯಾಬ್​​​ಗೆ ಭಾರ ಹೆಚ್ಚಿ, ಅದು ಮುರಿದುಬಿದ್ದಿದೆ. ಆಗ ಅದರ ಮೇಲೆ ಕುಳಿತಿದ್ದ ಮಹಿಳೆಯರೆಲ್ಲ ಬಾವಿಗೆ ಬಿದ್ದಿದ್ದಾರೆ.  ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕುಶಿನಗರ ಜಿಲ್ಲಾಧಿಕಾರಿ ಎಸ್​.ರಾಜಲಿಂಗಮ್​ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ: ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಸಂತಾಪ  ವ್ಯಕ್ತಪಡಿಸಿದ್ದಾರೆ.  ಕುಶಿನಗರದಲ್ಲಿ ನಡೆದ ದುರ್ಘಟನೆ ನಿಜಕ್ಕೂ ಹೃದಯ ಕಲುಕುವಂತಿದೆ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಇದರಲ್ಲಿ ಗಾಯಗೊಂಡವರೂ ಇದ್ದು, ಅವರೆಲ್ಲ ಆದಷ್ಟು ಬೇಗ ಗುಣಮುಖರಾಗಲಿ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ಸಾಧ್ಯವಿರುವ ಎಲ್ಲ ಸಹಾಯಗಳನ್ನೂ ನೀಡಬೇಕು ಎಂದು ಹೇಳಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಹಾಗೇ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​  ಕಾರ್ಯಾಲಯ ಟ್ವೀಟ್ ಮಾಡಿ, ಸಂತಾಪ ಸೂಚಿಸಿದೆ. ಮೃತದೇಹಗಳನ್ನು ಹೊರತೆಗೆಯುವ ಕೆಲಸ, ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸುವ ಕೆಲಸವನ್ನು ಸೂಕ್ತವಾಗಿ ಮಾಡಿ ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ಈ ಘಟನೆ ಸಂಬಂಧ ತನಿಖೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: Mohammed Nalapad: ಈಶ್ವರಪ್ಪ ವಿರುದ್ಧ ರಾಷ್ಟ್ರಧ್ವಜ ಗಲಾಟೆ ಜೋರು, ನಲಪಾಡ್​ ನೇತೃತ್ವದ ಯುವ ಕಾಂಗ್ರೆಸ್ ಪಡೆ ಫುಲ್​ ಆಕ್ಟೀವ್!

Published On - 7:42 am, Thu, 17 February 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್