AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮನೆಗೆ ಹೋಗಿದ್ದ 13 ಮಹಿಳೆಯರು ಬಾವಿಗೆ ಬಿದ್ದು ಸಾವು; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮುಖ್ಯಮಂತ್ರಿ

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಸಂತಾಪ  ವ್ಯಕ್ತಪಡಿಸಿದ್ದಾರೆ.  ಕುಶಿನಗರದಲ್ಲಿ ನಡೆದ ದುರ್ಘಟನೆ ನಿಜಕ್ಕೂ ಹೃದಯ ಕಲುಕುವಂತಿದೆ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಇದರಲ್ಲಿ ಗಾಯಗೊಂಡವರೂ ಇದ್ದು, ಅವರೆಲ್ಲ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಮದುವೆ ಮನೆಗೆ ಹೋಗಿದ್ದ 13 ಮಹಿಳೆಯರು ಬಾವಿಗೆ ಬಿದ್ದು ಸಾವು; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮುಖ್ಯಮಂತ್ರಿ
ಬಾವಿ
TV9 Web
| Edited By: |

Updated on:Feb 17, 2022 | 10:35 AM

Share

ಮದುವೆ ಮನೆಯಲ್ಲಿ ಒಂದು ಭೀಕರ ದುರಂತ ಸಂಭವಿಸಿದೆ. ಮದುವೆಗೆಂದು ಹೋಗಿದ್ದ 13 ಮಹಿಳೆಯರು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಬುಧವಾರ (ಫೆ.16) ರಾತ್ರಿ 8.30ರ ಹೊತ್ತಿಗೆ ಉತ್ತರ ಪ್ರದೇಶದ ಕುಶಿನಗರದ ನೆಬುವಾ ನೌರಂಗಿಯಾದಲ್ಲಿ ಮದುವೆ ನಡೆಯುತ್ತಿದ್ದ ಮನೆಯೊಂದರಲ್ಲಿ ಈ ಅವಘಡ ನಡೆದಿದೆ ಎಂದು ಗೋರಖ್​​ಪುರ ವಲಯದ ಎಡಿಜಿ ಅಖಿಲ್​ ಕುಮಾರ್ ತಿಳಿಸಿದ್ದಾರೆ. ಅಷ್ಟಕ್ಕೂ ಈ ಮಹಿಳೆಯರೆಲ್ಲ ಒಟ್ಟಿಗೆ ಬಾವಿಗೆ ಬೀಳಲು ಕಾರಣ ತುಂಬ ಭಯಾನಕ.

ಮದುವೆ ನಡೆಯುತ್ತಿದ್ದ ಈ ಸ್ಥಳದಲ್ಲಿ ಒಂದು ದೊಡ್ಡದಾದ ಬಾವಿಯಿದ್ದು, ಅದರ ಮೇಲಿಂದ ಸ್ಲ್ಯಾಬ್​ ಹಾಕಿ, ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿತ್ತು. ವಿವಾಹ ಸಮಾರಂಭ ಇದ್ದುದರಿಂದ ಅನೇಕರು ಬಂದು ಅಲ್ಲಿಯೇ ಕುಳಿತಿದ್ದರು. ಬಾವಿಯ ಮೇಲಿನ ಸ್ಲ್ಯಾಬ್​​​ಗೆ ಭಾರ ಹೆಚ್ಚಿ, ಅದು ಮುರಿದುಬಿದ್ದಿದೆ. ಆಗ ಅದರ ಮೇಲೆ ಕುಳಿತಿದ್ದ ಮಹಿಳೆಯರೆಲ್ಲ ಬಾವಿಗೆ ಬಿದ್ದಿದ್ದಾರೆ.  ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕುಶಿನಗರ ಜಿಲ್ಲಾಧಿಕಾರಿ ಎಸ್​.ರಾಜಲಿಂಗಮ್​ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ: ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಸಂತಾಪ  ವ್ಯಕ್ತಪಡಿಸಿದ್ದಾರೆ.  ಕುಶಿನಗರದಲ್ಲಿ ನಡೆದ ದುರ್ಘಟನೆ ನಿಜಕ್ಕೂ ಹೃದಯ ಕಲುಕುವಂತಿದೆ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಇದರಲ್ಲಿ ಗಾಯಗೊಂಡವರೂ ಇದ್ದು, ಅವರೆಲ್ಲ ಆದಷ್ಟು ಬೇಗ ಗುಣಮುಖರಾಗಲಿ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ಸಾಧ್ಯವಿರುವ ಎಲ್ಲ ಸಹಾಯಗಳನ್ನೂ ನೀಡಬೇಕು ಎಂದು ಹೇಳಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಹಾಗೇ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​  ಕಾರ್ಯಾಲಯ ಟ್ವೀಟ್ ಮಾಡಿ, ಸಂತಾಪ ಸೂಚಿಸಿದೆ. ಮೃತದೇಹಗಳನ್ನು ಹೊರತೆಗೆಯುವ ಕೆಲಸ, ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸುವ ಕೆಲಸವನ್ನು ಸೂಕ್ತವಾಗಿ ಮಾಡಿ ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ಈ ಘಟನೆ ಸಂಬಂಧ ತನಿಖೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: Mohammed Nalapad: ಈಶ್ವರಪ್ಪ ವಿರುದ್ಧ ರಾಷ್ಟ್ರಧ್ವಜ ಗಲಾಟೆ ಜೋರು, ನಲಪಾಡ್​ ನೇತೃತ್ವದ ಯುವ ಕಾಂಗ್ರೆಸ್ ಪಡೆ ಫುಲ್​ ಆಕ್ಟೀವ್!

Published On - 7:42 am, Thu, 17 February 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ