AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್​ ರೇಪ್​​ ಆಗಿದೆ ಎಂದು ದೂರು ಕೊಡಲು ಹೋದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪೊಲೀಸ್​ ಅಧಿಕಾರಿ

ಹುಡುಗಿಯನ್ನು ಮೊದಲು ನಾಲ್ವರು ಸೇರಿ ಅಪಹರಣ ಮಾಡಿ, ಭೋಪಾಲ್​​ಗೆ ಕರೆದುಕೊಂಡು ಹೋದರು. ನಾಲ್ಕು ದಿನ ಅಲ್ಲಿಟ್ಟುಕೊಂಡು ಆಕೆಯ ಮೇಲೆ ರೇಪ್​ ಮಾಡಿದ್ದಾರೆ. ಅದಾದ ಮೇಲೆ ವಾಪಸ್ ಊರಿಗೆ ಕರೆದುಕೊಂಡು ಬಂದು, ಅಲ್ಲಿನ ಪೊಲೀಸ್ ಸ್ಟೇಶನ್​ ಎದುರೇ ಬಿಟ್ಟು ಹೋಗಿದ್ದರು.

ಗ್ಯಾಂಗ್​ ರೇಪ್​​ ಆಗಿದೆ ಎಂದು ದೂರು ಕೊಡಲು ಹೋದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪೊಲೀಸ್​ ಅಧಿಕಾರಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:May 04, 2022 | 10:25 AM

Share

ಲಖನೌ: ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ದೂರು ನೀಡಲು ಹೋದ 13ವರ್ಷದ ಬಾಲಕಿಯ ಮೇಲೆ ಪೊಲೀಸ್​ ಠಾಣೆಯ ಮುಖ್ಯ ಅಧಿಕಾರಿ ಮತ್ತೊಮ್ಮೆ ರೇಪ್​ ಮಾಡಿರುವ ಕ್ರೂರ ಘಟನೆ ಉತ್ತರ ಪ್ರದೇಶದ ಲಲಿತ್​ ಪುರದಲ್ಲಿ ನಡೆದಿದೆ. ತನ್ನ ಮೇಲೆ ನಾಲ್ವರು ಅತ್ಯಾಚಾರ ಮಾಡಿದ್ದಾರೆ ಎಂದು ಬಾಲಕಿ ಪೊಲೀಸರಿಗೆ ದೂರು ನೀಡಲು ತನ್ನ ಸಂಬಂಧಿಯೊಬ್ಬರ ಜತೆ  ಹೋಗಿದ್ದಳು.  ಈ ವೇಳೆ ಠಾಣೆಯಲ್ಲಿದ್ದ ಅಧಿಕಾರಿ (SHO) ತಿಲಕ್​ಧಾರಿ ಸರೋಜ್​ ಬಾಲಕಿಯ ಮೇಲೆ ಮತ್ತೆ ಅತ್ಯಾಚಾರ ಮಾಡಿದ್ದಾನೆ. ಈಗ ಆತನನ್ನು ಅಮಾನತು ಮಾಡಲಾಗಿದ್ದು, ಕ್ರಿಮಿನಲ್ ಕೇಸ್​ ದಾಖಲಾಗಿದೆ.  ಪೊಲೀಸ್ ಅಧಿಕಾರಿ ಬಾಲಕಿಯ ಮೇಲೆ ರೇಪ್​ ಮಾಡಿ ಪರಾರಿಯಾಗಿದ್ದಾನೆ. ಹಾಗೇ, ಅದಕ್ಕೂ ಮೊದಲು ಹುಡುಗಿಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರಲ್ಲಿ ಮೂವರು ಅರೆಸ್ಟ್ ಆಗಿದ್ದಾರೆ. 

ಹುಡುಗಿಯನ್ನು ಮೊದಲು ನಾಲ್ವರು ಸೇರಿ ಅಪಹರಣ ಮಾಡಿ, ಭೋಪಾಲ್​​ಗೆ ಕರೆದುಕೊಂಡು ಹೋದರು. ನಾಲ್ಕು ದಿನ ಅಲ್ಲಿಟ್ಟುಕೊಂಡು ಆಕೆಯ ಮೇಲೆ ರೇಪ್​ ಮಾಡಿದ್ದಾರೆ. ಅದಾದ ಮೇಲೆ ವಾಪಸ್ ಊರಿಗೆ ಕರೆದುಕೊಂಡು ಬಂದು, ಅಲ್ಲಿನ ಪೊಲೀಸ್ ಸ್ಟೇಶನ್​ ಎದುರೇ ಬಿಟ್ಟು ಹೋಗಿದ್ದರು. ಆಗ ಇದೇ ಪೊಲೀಸ್ ಅಧಿಕಾರಿ, ಬಾಲಕಿಯ ಬಳಿ ಎಲ್ಲವನ್ನೂ ವಿಚಾರಿಸಿ, ಅವಳ ಅತ್ತೆಯನ್ನು ಸ್ಟೇಶನ್​ಗೆ ಕರೆಸಿದ್ದ. ಹಾಗೇ, ಬಾಲಕಿಯನ್ನು ಆ ಮಹಿಳೆಯೊಂದಿಗೆ ಕಳಿಸಿದ್ದಲ್ಲದೆ, ‘ಮರುದಿನ ಬಾ ನಿನ್ನ ಹೇಳಿಕೆ ದಾಖಲಿಸಿಕೊಳ್ಳಬೇಕು’ ಎಂದು ಹೇಳಿದ್ದ. ಅದರಂತೆ ಮರುದಿನ ಬಾಲಕಿ ತನ್ನ ಅತ್ತೆಯೊಂದಿಗೆ ಪೊಲೀಸ್ ಠಾಣೆಗೆ ಹೋದಾಗ ಈ ಪೊಲೀಸ್​ ರಾಕ್ಷಸನಾಗಿದ್ದ. ಬಾಲಕಿಯನ್ನು ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ದುರದೃಷ್ಟಕ್ಕೆ ಆ ಅತ್ತೆಯ ಎದುರಿಗೇ ಇದೆಲ್ಲ ನಡೆದರೂ ಅವಳು ಬಾಯಿಮುಚ್ಚಿಕೊಂಡೇ ಇದ್ದಳು. ಹೀಗಾಗಿ ಆಕೆಯ ವಿರುದ್ಧವೂ ಕೇಸ್​ ದಾಖಲಾಗಿದೆ.

ಪೊಲೀಸ್ ಅಧಿಕಾರಿ ಸೇರಿ, ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಎಲ್ಲರ ವಿರುದ್ಧವೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಠಾಣಾಧಿಕಾರಿಯನ್ನು ಅಮಾನತು ಮಾಡಿದ್ದೇವೆ. ಹಾಗೇ, ನಾಪತ್ತೆಯಾಗಿರುವ ಆತನನ್ನು ಬಂಧಿಸಲು ತಂಡವನ್ನೂ ರಚಿಸಲಾಗಿದೆ. ಹಾಗೇ, ಹುಡುಗಿಯನ್ನು  ವೈದ್ಯಕೀಯ ತಪಾಸಣೆಗೆ ಕಳಿಸಲಾಗಿದೆ ಎಂದು ಲಲಿತ್​ಪುರ ಪೊಲೀಸ್ ಮುಖ್ಯಸ್ಥ ನಿಖಿಲ್​ ಪಾಠಕ್​ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಕಮಿಷನರ್ ಕಮಲ್ ಪಂತ್ ವಿರುದ್ಧ ಬಿಜೆಪಿಯವರು ಮಾತಾಡಿದ್ದರಿಂದ ಪಿಎಸ್ಐ ಅಕ್ರಮ ಹೊರಬಂದಿದೆ -ಹೆಚ್ಡಿ ಕುಮಾರಸ್ವಾಮಿ

Published On - 10:25 am, Wed, 4 May 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ