AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್​ ರೇಪ್​​ ಆಗಿದೆ ಎಂದು ದೂರು ಕೊಡಲು ಹೋದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪೊಲೀಸ್​ ಅಧಿಕಾರಿ

ಹುಡುಗಿಯನ್ನು ಮೊದಲು ನಾಲ್ವರು ಸೇರಿ ಅಪಹರಣ ಮಾಡಿ, ಭೋಪಾಲ್​​ಗೆ ಕರೆದುಕೊಂಡು ಹೋದರು. ನಾಲ್ಕು ದಿನ ಅಲ್ಲಿಟ್ಟುಕೊಂಡು ಆಕೆಯ ಮೇಲೆ ರೇಪ್​ ಮಾಡಿದ್ದಾರೆ. ಅದಾದ ಮೇಲೆ ವಾಪಸ್ ಊರಿಗೆ ಕರೆದುಕೊಂಡು ಬಂದು, ಅಲ್ಲಿನ ಪೊಲೀಸ್ ಸ್ಟೇಶನ್​ ಎದುರೇ ಬಿಟ್ಟು ಹೋಗಿದ್ದರು.

ಗ್ಯಾಂಗ್​ ರೇಪ್​​ ಆಗಿದೆ ಎಂದು ದೂರು ಕೊಡಲು ಹೋದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪೊಲೀಸ್​ ಅಧಿಕಾರಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:May 04, 2022 | 10:25 AM

Share

ಲಖನೌ: ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ದೂರು ನೀಡಲು ಹೋದ 13ವರ್ಷದ ಬಾಲಕಿಯ ಮೇಲೆ ಪೊಲೀಸ್​ ಠಾಣೆಯ ಮುಖ್ಯ ಅಧಿಕಾರಿ ಮತ್ತೊಮ್ಮೆ ರೇಪ್​ ಮಾಡಿರುವ ಕ್ರೂರ ಘಟನೆ ಉತ್ತರ ಪ್ರದೇಶದ ಲಲಿತ್​ ಪುರದಲ್ಲಿ ನಡೆದಿದೆ. ತನ್ನ ಮೇಲೆ ನಾಲ್ವರು ಅತ್ಯಾಚಾರ ಮಾಡಿದ್ದಾರೆ ಎಂದು ಬಾಲಕಿ ಪೊಲೀಸರಿಗೆ ದೂರು ನೀಡಲು ತನ್ನ ಸಂಬಂಧಿಯೊಬ್ಬರ ಜತೆ  ಹೋಗಿದ್ದಳು.  ಈ ವೇಳೆ ಠಾಣೆಯಲ್ಲಿದ್ದ ಅಧಿಕಾರಿ (SHO) ತಿಲಕ್​ಧಾರಿ ಸರೋಜ್​ ಬಾಲಕಿಯ ಮೇಲೆ ಮತ್ತೆ ಅತ್ಯಾಚಾರ ಮಾಡಿದ್ದಾನೆ. ಈಗ ಆತನನ್ನು ಅಮಾನತು ಮಾಡಲಾಗಿದ್ದು, ಕ್ರಿಮಿನಲ್ ಕೇಸ್​ ದಾಖಲಾಗಿದೆ.  ಪೊಲೀಸ್ ಅಧಿಕಾರಿ ಬಾಲಕಿಯ ಮೇಲೆ ರೇಪ್​ ಮಾಡಿ ಪರಾರಿಯಾಗಿದ್ದಾನೆ. ಹಾಗೇ, ಅದಕ್ಕೂ ಮೊದಲು ಹುಡುಗಿಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರಲ್ಲಿ ಮೂವರು ಅರೆಸ್ಟ್ ಆಗಿದ್ದಾರೆ. 

ಹುಡುಗಿಯನ್ನು ಮೊದಲು ನಾಲ್ವರು ಸೇರಿ ಅಪಹರಣ ಮಾಡಿ, ಭೋಪಾಲ್​​ಗೆ ಕರೆದುಕೊಂಡು ಹೋದರು. ನಾಲ್ಕು ದಿನ ಅಲ್ಲಿಟ್ಟುಕೊಂಡು ಆಕೆಯ ಮೇಲೆ ರೇಪ್​ ಮಾಡಿದ್ದಾರೆ. ಅದಾದ ಮೇಲೆ ವಾಪಸ್ ಊರಿಗೆ ಕರೆದುಕೊಂಡು ಬಂದು, ಅಲ್ಲಿನ ಪೊಲೀಸ್ ಸ್ಟೇಶನ್​ ಎದುರೇ ಬಿಟ್ಟು ಹೋಗಿದ್ದರು. ಆಗ ಇದೇ ಪೊಲೀಸ್ ಅಧಿಕಾರಿ, ಬಾಲಕಿಯ ಬಳಿ ಎಲ್ಲವನ್ನೂ ವಿಚಾರಿಸಿ, ಅವಳ ಅತ್ತೆಯನ್ನು ಸ್ಟೇಶನ್​ಗೆ ಕರೆಸಿದ್ದ. ಹಾಗೇ, ಬಾಲಕಿಯನ್ನು ಆ ಮಹಿಳೆಯೊಂದಿಗೆ ಕಳಿಸಿದ್ದಲ್ಲದೆ, ‘ಮರುದಿನ ಬಾ ನಿನ್ನ ಹೇಳಿಕೆ ದಾಖಲಿಸಿಕೊಳ್ಳಬೇಕು’ ಎಂದು ಹೇಳಿದ್ದ. ಅದರಂತೆ ಮರುದಿನ ಬಾಲಕಿ ತನ್ನ ಅತ್ತೆಯೊಂದಿಗೆ ಪೊಲೀಸ್ ಠಾಣೆಗೆ ಹೋದಾಗ ಈ ಪೊಲೀಸ್​ ರಾಕ್ಷಸನಾಗಿದ್ದ. ಬಾಲಕಿಯನ್ನು ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ದುರದೃಷ್ಟಕ್ಕೆ ಆ ಅತ್ತೆಯ ಎದುರಿಗೇ ಇದೆಲ್ಲ ನಡೆದರೂ ಅವಳು ಬಾಯಿಮುಚ್ಚಿಕೊಂಡೇ ಇದ್ದಳು. ಹೀಗಾಗಿ ಆಕೆಯ ವಿರುದ್ಧವೂ ಕೇಸ್​ ದಾಖಲಾಗಿದೆ.

ಪೊಲೀಸ್ ಅಧಿಕಾರಿ ಸೇರಿ, ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಎಲ್ಲರ ವಿರುದ್ಧವೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಠಾಣಾಧಿಕಾರಿಯನ್ನು ಅಮಾನತು ಮಾಡಿದ್ದೇವೆ. ಹಾಗೇ, ನಾಪತ್ತೆಯಾಗಿರುವ ಆತನನ್ನು ಬಂಧಿಸಲು ತಂಡವನ್ನೂ ರಚಿಸಲಾಗಿದೆ. ಹಾಗೇ, ಹುಡುಗಿಯನ್ನು  ವೈದ್ಯಕೀಯ ತಪಾಸಣೆಗೆ ಕಳಿಸಲಾಗಿದೆ ಎಂದು ಲಲಿತ್​ಪುರ ಪೊಲೀಸ್ ಮುಖ್ಯಸ್ಥ ನಿಖಿಲ್​ ಪಾಠಕ್​ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಕಮಿಷನರ್ ಕಮಲ್ ಪಂತ್ ವಿರುದ್ಧ ಬಿಜೆಪಿಯವರು ಮಾತಾಡಿದ್ದರಿಂದ ಪಿಎಸ್ಐ ಅಕ್ರಮ ಹೊರಬಂದಿದೆ -ಹೆಚ್ಡಿ ಕುಮಾರಸ್ವಾಮಿ

Published On - 10:25 am, Wed, 4 May 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ