AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿಗೆ ಹೃದಯಾಘಾತ; ಶಾಕಿಂಗ್ ವಿಡಿಯೋ ವೈರಲ್

ರಾಜಸ್ಥಾನ ಶಾಲೆಯೊಂದರಲ್ಲಿ 16 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಭಯಾನಕ ಘಟನೆಯನ್ನು ಸಿಸಿಟಿವಿ ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ. ಬಾಲಕ ತನ್ನ ಚೀಲವನ್ನು ಭುಜದ ಮೇಲೆ ತೂಗುಹಾಕಿಕೊಂಡು ಶಾಲೆಯ ಆವರಣದೊಳಗೆ ನಡೆಯುತ್ತಿದ್ದಾಗ ಆತ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ.

Shocking News: ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿಗೆ ಹೃದಯಾಘಾತ; ಶಾಕಿಂಗ್ ವಿಡಿಯೋ ವೈರಲ್
ಹೃದಯಾಘಾತ
Follow us
ಸುಷ್ಮಾ ಚಕ್ರೆ
|

Updated on: Jul 12, 2024 | 9:26 PM

ಜೈಪುರ: ರಾಜಸ್ಥಾನದ ದೌಸಾದ ಖಾಸಗಿ ಶಾಲೆಯೊಂದರಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬ ಶಾಲೆಯ ಕಾರಿಡಾರ್‌ನಲ್ಲಿ ಹಠಾತ್ ಆಗಿ ಕುಸಿದು ಬಿದ್ದ ದುರಂತ ಸಂಭವಿಸಿದೆ. ಆ ಬಾಲಕ ತನ್ನ ಶಾಲಾ ಬ್ಯಾಗನ್ನು ಹೊತ್ತೊಯ್ಯುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದು ದುರಂತ ಸಾವನ್ನಪ್ಪಿದ್ದಾನೆ. ಅವನು ಮಾರಣಾಂತಿಕ ಹೃದಯಾಘಾತದಿಂದ ಬಳಲುತ್ತಿದ್ದ ಎಂದು ವರದಿಗಳು ತಿಳಿಸಿವೆ. ಈ ಘಟನೆ ಶಾಲೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಆ ಹುಡುಗನು ತನ್ನ ಬ್ಯಾಗ್ ಅನ್ನು ಭುಜದ ಮೇಲೆ ತೂಗುಹಾಕಿಕೊಂಡು ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ, ಆತ ಕುಸಿದುಬಿದ್ದಿದ್ದಾನೆ. ಆಗ ಅಕ್ಕಪಕ್ಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಓಡಿಹೋಗಿ ಆತನ ಸಹಾಯಕ್ಕೆ ಧಾವಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆತನ ಪ್ರಾಣ ಹೋಗಿತ್ತು.

ಇದನ್ನೂ ಓದಿ: Crime News: ಪ್ರೇಮಿಯ ಮೇಲಿನ ಕೋಪಕ್ಕೆ 7 ವರ್ಷದ ಮಗುವನ್ನು ಗೋಡೆಗೆ ಬಡಿದು ಕೊಲೆ

ವಿದ್ಯಾರ್ಥಿಯ ಅಕಾಲಿಕ ಮರಣದ ಸುದ್ದಿ ಸಮುದಾಯವನ್ನು ಬೆಚ್ಚಿಬೀಳಿಸಿದೆ. ಅಷ್ಟು ಚಿಕ್ಕ ವಯಸ್ಸಿನಲ್ಲೇ ಬಾಲಕ ಸಾವನ್ನಪ್ಪಿರುವುದು ಆಘಾತ ಮೂಡಿಸಿದೆ. ಅವನ ಕುಟುಂಬವು ಮರಣೋತ್ತರ ಪರೀಕ್ಷೆಯನ್ನು ನಿರಾಕರಿಸಿದೆ ಎಂದು ವರದಿಯಾಗಿದೆ.

ಶಾಲೆಯ ಆಡಳಿತ ಮಂಡಳಿ ಆ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಈ ಘಟನೆಯ ತನಿಖೆಗೆ ಅಧಿಕಾರಿಗಳೊಂದಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ