AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ: ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 16 ವರ್ಷದ ಬಾಲಕರು!

ಹರಿಯಾಣದ ಫರಿದಾಬಾದ್​​ನಲ್ಲಿ (Faridabad) ಇಂದು (ಸೆ.25) ಬೆಳಿಗ್ಗೆ 16 ವರ್ಷದ ಬಾಲಕರಿಬ್ಬರು ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಆತ್ಮಹತ್ಯೆಯೇ ಅಥವಾ ಕೊಲೆಯೋ ಎಂಬುದು ಇನ್ನು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಇನ್ನು ಈ ಬಾಲಕರ ಮನೆಯವರು ಇದು ಕೊಲೆ ಎಂಬ ಬಗ್ಗೆ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ.

ಹರಿಯಾಣ: ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 16 ವರ್ಷದ ಬಾಲಕರು!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Sep 25, 2023 | 4:33 PM

Share

ಫರಿದಾಬಾದ್, ಸೆ.25: ಹರಿಯಾಣದ ಫರಿದಾಬಾದ್​​ನಲ್ಲಿ (Faridabad) ಇಂದು (ಸೆ.25) ಬೆಳಿಗ್ಗೆ 16 ವರ್ಷದ ಬಾಲಕರಿಬ್ಬರು ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಆತ್ಮಹತ್ಯೆಯೇ ಅಥವಾ ಕೊಲೆಯೋ ಎಂಬುದು ಇನ್ನು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಇನ್ನು ಈ ಬಾಲಕರ ಮನೆಯವರು ಇದು ಕೊಲೆ ಎಂಬ ಬಗ್ಗೆ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಅರಾವಳಿಯಲ್ಲಿರುವ ಸಿದ್ದತಾ ಆಶ್ರಮದ ಹಿಂದೆ ಈ ಇಬ್ಬರ ಬಾಲಕರ ಶವಗಳು ಪತ್ತೆಯಾಗಿದ್ದು, ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ಬಾದ್‌ಶಾ ಖಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಫರಿದಾಬಾದ್ ನಿವಾಸಿಗಳಾದ ಇಬ್ಬರು ಬಾಲಕರು 7ರಿಂದ 10ವರೆಗೆ ಜತೆಗೆಯಾಗಿ ಒಂದೇ ಶಾಲೆಯಲ್ಲಿ ಓದುತ್ತಿದ್ದರು. ಆದರೆ ಇದರಲ್ಲಿ ಒಬ್ಬ ಬಾಲಕ ಮತ್ತು ಆತನ ಕುಟುಂಬ ಬೇರೆ ಊರಿಗೆ ಹೋಗಬೇಕಾಗಿತ್ತು. ಜತೆಗೆ ಶಾಲೆಯನ್ನು ಬದಲಾಯಿಸುವುದು ಕೂಡ ಅನಿರ್ವಾಯವಾಗಿತ್ತು.

ಭಾನುವಾರ ಸಂಜೆ 3.00 ಗಂಟೆಗೆ ಇಬ್ಬರು ಜತೆಗೆಯಾಗಿ ವಾಕಿಂಗ್​​ ಹೋಗಿದ್ದರು. ಈ ಇಬ್ಬರು ಬಾಲಕರಲ್ಲಿ ಒಬ್ಬ ತನ್ನ ಅಣ್ಣನಿಗೆ ದಾರಿಯಲ್ಲಿ ಸಿಕ್ಕಿ ಮಾತನಾಡಿ, ನಾನು ಮತ್ತೆ ಬರುವೇ ಎಂದು ಹೇಳಿ ಅಲ್ಲಿಂದ ತನ್ನ ಸ್ನೇಹಿತನ ಜತೆಗೆ ಹೋಗಿದ್ದಾನೆ. ಇದರ ಜತೆಗೆ ಮತ್ತೊಬ್ಬ ಬಾಲಕ ಮೊಬೈಲ್​​​ನ್ನು ಕೂಡ ತೆಗೆದುಕೊಂಡ ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೊಬೈಲ್​​ನಿಂದ ಒಂದು ಬಾರಿ ಬಾಲಕನ ಮನೆಗೆ ಕಾಲ್​​​ ಮಾಡಿದ್ದಾನೆ. ಮತ್ತೊಮ್ಮೆ ಪ್ರಯತ್ನ ಮಾಡಿದಾಗ ಕರೆ ಹೋಗುತ್ತಿರಲಿಲ್ಲ.

ಇದನ್ನೂ ಓದಿ:ಹರಿಯಾಣ; 13 ಗಂಟೆಗಳ ಕ್ಯಾಬ್​ರೈಡ್​; ಚಾಲಕನಿಗೆ ಹಣ ಕೊಡಲು ನಿರಾಕರಿಸಿದ ಮಹಿಳೆ

ಇದರಿಂದ ಭಯಗೊಂಡ ಮನೆಯವರು ತಕ್ಷಣ ಪೊಲೀಸ್​​ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತಡರಾತ್ರಿ ಬಾಲಕ ತೆಗೆದುಕೊಂಡು ಹೋಗಿದ್ದ ಫೋನ್​​ಗೆ ಕರೆ ಮಾಡಿದರು, ಯಾರು ಕರೆ​​ ಸ್ವೀಕರಿಸಿಲ್ಲ, ಮಧ್ಯರಾತ್ರಿ ಊರೆಲ್ಲ ಹುಡುಕಾಟ ನಡೆಸಿದ್ದಾರೆ. ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಸಿದ್ದತಾ ಆಶ್ರಮದ ಹಿಂಭಾಗದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:32 pm, Mon, 25 September 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ