AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: 6 ಸ್ನೇಹಿತರಿಂದ ಅಪ್ರಾಪ್ತ ಬಾಲಕನ ಕೊಲೆ

ಆರು ಮಂದಿ ಸ್ನೇಹಿತರು ಸೇರಿ ಅಪ್ರಾಪ್ತ ಬಾಲಕನ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತನನ್ನು 17 ವರ್ಷದ ವಿವೇಕ್ ಎಂದು ಗುರುತಿಸಲಾಗಿದೆ. ಸ್ನೇಹಿತರಲ್ಲಿ ಒಬ್ಬಾತ ಮದ್ಯಪಾನ ಮಾಡಲೆಂದು ಆತನನ್ನು ಆಹ್ವಾನಿಸಿದ್ದ ಬಳಿಕ ಆರು ಮಂದಿ ಸ್ನೇಹಿತರು ಸೇರಿ ಚಾಕು ಬಳಸಿ, ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ.

ದೆಹಲಿ: 6 ಸ್ನೇಹಿತರಿಂದ ಅಪ್ರಾಪ್ತ ಬಾಲಕನ ಕೊಲೆ
ಪೊಲೀಸ್
ನಯನಾ ರಾಜೀವ್
|

Updated on:Dec 16, 2023 | 3:39 PM

Share

ಆರು ಮಂದಿ ಸ್ನೇಹಿತರು ಸೇರಿ ಅಪ್ರಾಪ್ತ ಬಾಲಕನ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತನನ್ನು 17 ವರ್ಷದ ವಿವೇಕ್ ಎಂದು ಗುರುತಿಸಲಾಗಿದೆ. ಸ್ನೇಹಿತರಲ್ಲಿ ಒಬ್ಬಾತ ಮದ್ಯಪಾನ ಮಾಡಲೆಂದು ಆತನನ್ನು ಆಹ್ವಾನಿಸಿದ್ದ ಬಳಿಕ ಆರು ಮಂದಿ ಸ್ನೇಹಿತರು ಸೇರಿ ಚಾಕುವಿನಿಂದ ತಿವಿದು, ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ.

ಸತ್ಪುಲಾ ಪಾರ್ಕ್​ಗೆ ಕರೆದೊಯ್ದು ಹತ್ಯೆ ಮಾಡಲಾಗಿದೆ. ಐವರು ಆರೋಪಿಗಳು ಉದ್ಯಾನದಲ್ಲಿ ಕಾದು ಕುಳಿತಿದ್ದು, ವಿವೇಕ್ ಒಳಗೆ ಬಂದ ತಕ್ಷಣ  ಚಾಕು ಮತ್ತು ಇಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ.

ದೇಹದ ಮುಖ, ಕುತ್ತಿಗೆ, ಎದೆ ಮತ್ತು ಹೊಟ್ಟೆಯ ಮೇಲೆ ಚಾಕು ಗಾಯಗಳಿವೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ಹೇಳಿದ್ದಾರೆ. ಶುಕ್ರವಾರ ಬೆಳಗ್ಗೆ 7.30ರ ಸುಮಾರಿಗೆ ಸತ್ಪುಲಾ ಪಾರ್ಕ್‌ನಲ್ಲಿ ಪತ್ತೆಯಾದ ಮೃತದೇಹದ ಕುರಿತು ಪಿಸಿಆರ್ ಕರೆ ಬಂದಿತ್ತು. ಖಿರ್ಕಿ ಗ್ರಾಮದ ಬಳಿ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಹೊಟ್ಟೆ, ಎದೆ, ಕುತ್ತಿಗೆ ಮತ್ತು ಮುಖದ ಮೇಲೆ ಗಾಯದ ಗುರುತುಗಳನ್ನು ಹೊತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ಜಗಳ ಅತಿರೇಕಕ್ಕೇರಿ ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ ಪ್ರಿಯಕರ

ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿವೇಕ್​ ವಿರುದ್ಧ ಹಗೆ ಸಾಧಿಸಲು ಈ ಸಂಚು ರೂಪಿಸಿದ್ದರು. ಬಾಲಕ ಮನೆಯಿಂದ ಹೊರಹೋಗುವಾಗ ತಂದೆಯನ್ನು ಭೇಟಿಯಾಗಲು ಹೋಗುವುದಾಗಿ ಸುಳ್ಳು ಹೇಳಿದ್ದ, ಹಿಂದಿರುಗದಿದ್ದಾಗ ಹಲವು ಬಾರಿ ಕರೆ ಮಾಡಿದ್ದಾರೆ ಆದರೆ ಮೊಬೈಲ್ ಸ್ವಿಚ್ಡ್​ ಆಫ್ ಆಗಿತ್ತು ಎಂದು ಪೋಷಕರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

Published On - 3:34 pm, Sat, 16 December 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ