AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವಂತೆ ಒತ್ತಾಯ; 19 ವರ್ಷದ ಗರ್ಭಿಣಿಯನ್ನು ಕೊಂದು ಹೂತಿಟ್ಟ ಪ್ರಿಯಕರ

ಮೃತ ಯುವತಿ ಸೋನಿ 7 ತಿಂಗಳ ಗರ್ಭಿಣಿಯಾಗಿದ್ದು, ಗರ್ಭಪಾತಕ್ಕೆ ಒಪ್ಪದ ಆಕೆ ತನ್ನ ಪ್ರಿಯಕರನಾಗಿದ್ದ ಸಲೀಂ ತನ್ನನ್ನು ಮದುವೆಯಾಗಬೇಕೆಂದು ಒತ್ತಾಯಿಸುತ್ತಿದ್ದಳು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಸಲೀಂಗೆ ಆಕೆಯನ್ನು ಮದುವೆಯಾಗಲು ಇಷ್ಟವಿರಲಿಲ್ಲ. ಹಾಗೇ, ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯಿಸುತ್ತಿದ್ದ. ಇದರಿಂದ ಇಬ್ಬರ ನಡುವೆ ಜಗಳವಾಗುತ್ತಿತ್ತು.

ಮದುವೆಯಾಗುವಂತೆ ಒತ್ತಾಯ; 19 ವರ್ಷದ ಗರ್ಭಿಣಿಯನ್ನು ಕೊಂದು ಹೂತಿಟ್ಟ ಪ್ರಿಯಕರ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Oct 26, 2024 | 8:57 PM

Share

ನವದೆಹಲಿ: ದೆಹಲಿಯ ಸೋನಿ ಎಂಬ 19 ವರ್ಷದ ಯುವತಿಯನ್ನು ಆಕೆಯ ಪ್ರಿಯಕರ ಸಲೀಂ ಮತ್ತು ಆತನ ಇಬ್ಬರು ಸಹಚರರು ಕೊಂದು ಹೂತು ಹಾಕಿದ್ದಾರೆ. ಆಕೆ ಆತನಿಂದ ಗರ್ಭಿಣಿಯಾದ ನಂತರ ಮದುವೆಯಾಗಲು ಒತ್ತಾಯಿಸಿದ್ದಳು. ಆದರೆ, ಆತನಿಗೆ ಆಕೆಯನ್ನು ಮದುವೆಯಾಗಲು ಇಷ್ಟವಿರಲಿಲ್ಲ. ಆಕೆಗೆ ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯಿಸಿದ್ದ.

ಪಶ್ಚಿಮ ದೆಹಲಿಯ ನಂಗ್ಲೋಯ್ ನಿವಾಸಿಯಾಗಿರುವ ಸೋನಿ ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯರಾಗಿದ್ದರು. ಆಗಾಗ ಆಕೆ ಮತ್ತು ಸಲೀಂ ಇಬ್ಬರೂ ಇದ್ದ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದರು. ಎನ್‌ಡಿಟಿವಿ ವರದಿಯ ಪ್ರಕಾರ, ಸಂಜು ಎಂದು ಹೇಳಿಕೊಂಡಿದ್ದ ಸಲೀಂ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದ.

ಇದನ್ನೂ ಓದಿ: ಪನ್ನುನ್ ಕೊಲೆ ಸಂಚು ರೂಪಿಸಿದ ಮಾಜಿ ಭಾರತೀಯ ಅಧಿಕಾರಿ ವಿಕಾಸ್ ಯಾದವ್ ಯಾರು?

ಸೋನಿಯ ಕುಟುಂಬದವರ ಪ್ರಕಾರ, ಆಕೆಗೆ ಪ್ರಿಯಕರ ಇದ್ದಾನೆ ಎಂಬುದು ಅವರಿಗೆ ತಿಳಿದಿತ್ತು ಆದರೆ, ಆಕೆ ಯಾರೊಂದಿಗೆ ಮಾತನಾಡುತ್ತಿದ್ದಾಳೆ ಎಂದು ಕೇಳಿದಾಗ, ಸೋನಿ ಆಗಾಗ ತಮಾಷೆ ಮಾಡುತ್ತಿದ್ದಳು, ತಾನು ದೆವ್ವದೊಂದಿಗೆ ಮಾತನಾಡುತ್ತಿದ್ದೇನೆ ಎಂದು ಹೇಳುತ್ತಿದ್ದಳು. ಸೋನಿ 7 ತಿಂಗಳ ಗರ್ಭಿಣಿಯಾಗಿದ್ದಳು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆದರೆ, ಈ ವಿಷಯ ಆಕೆಯ ಮನೆಯವರಿಗೆ ಗೊತ್ತಿರಲಿಲ್ಲ ಎನ್ನಲಾಗಿದೆ.

ಸಲೀಂ ತನ್ನನ್ನು ಮದುವೆಯಾಗುವಂತೆ ಸೋನಿ ಒತ್ತಾಯಿಸುತ್ತಿದ್ದಳು. ಆಕೆಗೆ ಗರ್ಭಪಾತ ಮಾಡಿಸಿಕೊಳ್ಳಲು ಇಷ್ಟವಿರಲಿಲ್ಲ. ಆದರೆ ಸಲೀಮ್ ಒಪ್ಪಿಗೆ ನೀಡಿರಲಿಲ್ಲ ಮತ್ತು ಆಕೆಯು ಗರ್ಭಪಾತ ಮಾಡಿಕೊಳ್ಳಬೇಕೆಂದು ಬಯಸಿದ್ದರು. ಇದು ಇಬ್ಬರ ನಡುವೆ ಆಗಾಗ ವಾದಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: ತೆಲಂಗಾಣದಲ್ಲಿ ಕೊಲೆ, ಮಡಿಕೇರಿಯಲ್ಲಿ‌ ಸಾಕ್ಷ್ಯ ನಾಶ: ಕೊಡಗು ಪೊಲೀಸರ ಚಾಣಾಕ್ಷ್ಯ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಹೈಟೆಕ್ ಕೊಲೆಗಾರರು

ಕೊಲೆಯಾದ ದಿನ, ಸೋನಿ ಸಲೀಂನನ್ನು ಭೇಟಿಯಾಗಲು ಕೆಲವು ಸಾಮಾನುಗಳೊಂದಿಗೆ ತನ್ನ ಮನೆಯಿಂದ ಹೊರಟು ಹೋಗಿದ್ದಳು. ಅವನು ತನ್ನ ಇಬ್ಬರು ಸಹಚರರೊಂದಿಗೆ ಅವಳನ್ನು ಹರಿಯಾಣದ ರೋಹ್ಟಕ್‌ಗೆ ಕರೆದೊಯ್ದನು. ಅಲ್ಲಿ ಅವರೆಲ್ಲ ಸೇರಿ ಅವಳನ್ನು ಕೊಂದು ಶವವನ್ನು ಹೂತು ಹಾಕಿದರು ಎಂದು ವರದಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್