AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಹಣಕೀಳಲು ವ್ಯಕ್ತಿಯೊಬ್ಬರ ಬ್ಯಾಗ್​ನಲ್ಲಿ ಗಾಂಜಾ ಇಟ್ಟ ಇಬ್ಬರು ಕಾನ್ಸ್​ಟೆಬಲ್​ಗಳು ಅಮಾನತು

ಅವರು ತಾವೇ ನನ್ನ ಬ್ಯಾಗ್​ನಲ್ಲಿ ಗಾಂಜಾ ಪೊಟ್ಟಣ ಇರಿಸಿ, ಅದನ್ನು ಬ್ಯಾಗ್​ನಿಂದ ಹೊರಗೆ ತೆಗೆದಂತೆ ನಾಟಕವಾಡಿದರು. ಗಾಂಜಾ ಸೇದುವುದಾಗಿ ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು ಎಂದು ಯುವಕ ದೂರಿದ್ದಾನೆ.

Bengaluru News: ಹಣಕೀಳಲು ವ್ಯಕ್ತಿಯೊಬ್ಬರ ಬ್ಯಾಗ್​ನಲ್ಲಿ ಗಾಂಜಾ ಇಟ್ಟ ಇಬ್ಬರು ಕಾನ್ಸ್​ಟೆಬಲ್​ಗಳು ಅಮಾನತು
ಪ್ರಾತಿನಿಧಿಕ ಚಿತ್ರ
Prajwal D'Souza
| Edited By: |

Updated on:Apr 20, 2023 | 12:11 PM

Share

ಬೆಂಗಳೂರು: ಯುವಕನೊಬ್ಬನ ಬ್ಯಾಗ್​ನಲ್ಲಿ ಗಾಂಜಾ (ಮಾರಿಯೋನಾ) ಇರಿಸಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಇಬ್ಬರು ಪೊಲೀಸ್ ಕಾನ್ಸ್​ಟೆಬಲ್​ಗಳನ್ನು (Police Constables) ಸೋಮವಾರ ಮುಂಜಾನೆ ಅಮಾನತು ಮಾಡಲಾಗಿದೆ. ಇಬ್ಬರು ಕಾನ್ಸ್​ಟೆಬಲ್​ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿರುವುದನ್ನು ಡಿಸಿಪಿ ಸಿ.ಕೆ.ಬಾವಾ ದೃಢಪಡಿಸಿದ್ದಾರೆ. ‘ವಿಚಾರಣೆಯು ಮುಕ್ತಾಯಗೊಂಡಿದ್ದು, ವಿಚಾರಣಾಧಿಕಾರಿ ನೀಡಿದ ವರದಿ ಆಧರಿಸಿ ಶಿಸ್ತುಕ್ರಮ ಜರುಗಿಸಲಾಗಿದೆ. ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ’ ಎಂದು ಬಾವಾ ಹೇಳಿದ್ದಾರೆ.

ಕಳೆದ ವಾರ ಈ ಸಂಬಂಧ ಸರಣಿ ಟ್ವೀಟ್ ಮಾಡಿದ್ದ ವೈಭವ್ ಪಾಟೀಲ್ ಎನ್ನುವವರು ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್​ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯಿಂದ ಕಿರುಕುಳಕ್ಕೆ ಒಳಗಾಗಿದ್ದ ಬಗ್ಗೆ ನೋವಿನಿಂದ ಬರೆದುಕೊಂಡಿದ್ದರು. ಅನಗತ್ಯವಾಗಿ ನನ್ನನ್ನು ಮಾದಕ ವಸ್ತು ಕಾಯ್ದೆ ಪ್ರಕರಣಕ್ಕೆ ಸಿಲುಕಿಸಲಾಗುತ್ತಿದೆ ಎಂದು ಅವರು ದೂರಿದ್ದರು.

ಈ ಕುರಿತು ನ್ಯೂಸ್​9 ಜೊತೆಗೆ ಮಾತನಾಡಿದ ಸಂತ್ರಸ್ತ ಪಾಟೀಲ್, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ನನ್ನ ಹೇಳಿಕೆ ದಾಖಲಿಸಿದೆ. ಇಬ್ಬರು ಪೊಲೀಸ್ ಕಾನ್ಸ್​ಟೆಬಲ್​ಗಳನ್ನು ಗುರುತಿಸಿದೆ. ನನ್ನ ಲಿಖಿತ ಮತ್ತು ಮೌಖಿಕ ಹೇಳಿಕೆಯನ್ನು ನೀಡಿದ್ದೇನೆ. ಶನಿವಾರವೂ ಪೊಲೀಸ್ ಠಾಣೆಗೆ ಭೇಟಿ ನೀಡಿ ನನ್ನ ಕಾಯಂ ವಿಳಾಸ ಮತ್ತಿತರ ವಿವರಗಳನ್ನು ಕೊಟ್ಟೆ’ ಎಂದು ವಿವರಿಸಿದರು.

ನನ್ನ ದೂರು ನಿರಾಕರಿಸಿದ್ದ ಕಾನ್ಸ್​ಟೆಬಲ್​ಗಳು, ‘ನಾನು ತಪಾಸಣೆಗೆ ಒಳಪಡಲು ನಿರಾಕರಿಸಿದ್ದಾಗಿ ಹಾಗೂ ನನ್ನಿಂದ ಹಣ ಪಡೆಯಲಿಲ್ಲ’ ಎಂದು ಹೇಳಿದರು. ಇದನ್ನು ನಾನು ಇದನ್ನು ಒಪ್ಪಲಿಲ್ಲ. ಈಗಲೂ ನನ್ನನ್ನು ತಪಾಸಣೆಗೆ ಒಳಪಡಿಸಬಹುದು. ಒಂದು ವೇಳೆ ನನ್ನ ಬಳಿ ಮಾದಕವಸ್ತು ಇದ್ದಿದ್ದೇ ಆದರೆ ನನ್ನನ್ನು ಇವರು ಮುಂದೆ ಹೋಗಲು ಬಿಟ್ಟಿದ್ದಾದರೂ ಹೇಗೆ ಎಂದು ಪ್ರಶ್ನಿಸಿದೆ’ ಎಂದು ಹೇಳಿದರು.

ಆರು ತಿಂಗಳ ಹಿಂದೆ ಹಿಮಾಚಲ ಪ್ರದೇಶದಿಂದ ಬೆಂಗಳೂರಿಗೆ ಪಾಟೀಲ್ ಬಂದಿದ್ದಾರೆ. ಎಚ್​ಎಸ್​ಆರ್ ಲೇಔಟ್​ನ ಕಂಪನಿಯೊಂದರಲ್ಲಿ ಕೆಲಸ ಮಾಡುವ ಅವರು ತಿಂಗಳಿಗೆ ಸುಮಾರು ₹ 22,000 ಸ್ಟೇಫಂಡ್ ಪಡೆಯುತ್ತಿದ್ದಾರೆ. ‘ಈ ಘಟನೆಯಿಂದ ನನ್ನ ಪೋಷಕರು ಚಿಂತಿತರಾದರು. ವಾಪಸ್ ಬಂದುಬಿಡು ಎಂದು ಹೇಳಿದರು’ ಎಂದು ಅವರು ನೋವು ತೋಡಿಕೊಂಡರು.

ಎಚ್​ಎಸ್​ಆರ್​ ಲೇಔಟ್​ನಲ್ಲಿ ರಾಪಿಡೊ ಬೈಕ್ ಟ್ಯಾಕ್ಸಿಯಲ್ಲಿ ಹೋಗುತ್ತಿದ್ದಾಗ ಪೊಲೀಸರು ನನ್ನನ್ನು ತಡೆದರು. ಅವರ ಪ್ರಶ್ನೆಗಳಿಗೆ ನಾನು ಉತ್ತರಿಸಿದೆ. ಓರ್ವ ಕಾನ್ಸ್​ಟೆಬಲ್ ನನ್ನ ಬ್ಯಾಗ್ ತಪಾಸಣೆ ಮಾಡಬೇಕೆಂದರು. ನಾನು ಕೊಟ್ಟೆ. ಮತ್ತೊಬ್ಬರು ನನ್ನ ಬಳಿಗೆ ಬಂದು ಎಲ್ಲಿ ಕೆಲಸ ಮಾಡುತ್ತೀ ಎಂದು ಪ್ರಶ್ನೆಗಳನ್ನು ಕೇಳಿದರು. ‘ನೀನು ಗಾಂಜಾ ಸೇದ್ತೀ ಅಲ್ವಾ’ ಎಂದು ಕೇಳಿದಾಗ ನಾನು ನಿರಾಕರಿಸಿದೆ. ಅವರು ತಾವೇ ನನ್ನ ಬ್ಯಾಗ್​ನಲ್ಲಿ ಗಾಂಜಾ ಪೊಟ್ಟಣ ಇರಿಸಿ, ಅದನ್ನು ಬ್ಯಾಗ್​ನಿಂದ ಹೊರಗೆ ತೆಗೆದಂತೆ ನಾಟಕವಾಡಿದರು. ಗಾಂಜಾ ಸೇದುವುದಾಗಿ ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು.

ನನ್ನನ್ನು ಬಂಧಿಸುವ ನಾಟಕವಾಡಿ ನನ್ನ ಬಳಿಯಿದ್ದ ₹ 2,500 ಕಿತ್ತುಕೊಂಡರು. ಮನೆ ತಲುಪಲು ಕನಿಷ್ಠ ₹ 100 ಕೊಡಿ ಎಂದರೂ ಕೇಳಲಿಲ್ಲ. ನಾನು ಕೊನೆಗೆ ಊಬರ್ ಬುಕ್ ಮಾಡಿ ಮನೆ ಸೇರಿಕೊಂಡೆ. ನಂತರ ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದೆ. ಪೊಲೀಸ್ ಅಧಿಕಾರಿ ನನ್ನನ್ನು ಗುರುತಿಸಿ, ನೆರವಾದರು. ನನ್ನ ಅಧಿಕೃತ ಹೇಳಿಕೆ ದಾಖಲಿಸಿದ ನಂತರ ಈ ಟ್ವೀಟ್​ಗಳನ್ನು ಡಿಲೀಟ್ ಮಾಡಿದೆ ಎಂದು ಪಾಟೀಲ್ ವಿವರಿಸಿದರು.

ವರದಿ: ಪ್ರಜ್ವಲ್ ಡಿ ಸೋಜ, ನ್ಯೂಸ್ 9

ಈ ಸುದ್ದಿಯಲ್ಲಿ ಇಂಗ್ಲಿಷ್​ನಲ್ಲಿ ಓದಲು ಲಿಂಕ್: 2 Bengaluru police constables suspended for ‘planting ganja’ in man’s bag, extorting money

ಇದನ್ನೂ ಓದಿ: Crime News: ದೆಹಲಿಯ ಬುರಾರಿ ರೀತಿಯಲ್ಲೇ ಪುಣೆಯಲ್ಲಿ ನಿಗೂಢ ಸಾವು; ಮನೆಯೊಳಗೆ ನಾಲ್ವರು ಶವವಾಗಿ ಪತ್ತೆ

Published On - 9:17 am, Mon, 16 January 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು