AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮತ್ತು ಆಂಧ್ರಪ್ರದೇಶದಲ್ಲಿ ಬೈಕ್​​ ಕಳ್ಳತನ ಮಾಡುತ್ತಿದ್ದ ಬಾಲಕರ ಬಂಧನ

ಬೆಂಗಳೂರು ಮತ್ತು ಆಂಧ್ರಪ್ರದೇಶದ ವಿವಿಧ ನಗರಗಳಲ್ಲಿ ಬೈಕ್​​ ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ 16 ವರ್ಷದ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮತ್ತು ಆಂಧ್ರಪ್ರದೇಶದಲ್ಲಿ ಬೈಕ್​​ ಕಳ್ಳತನ ಮಾಡುತ್ತಿದ್ದ ಬಾಲಕರ ಬಂಧನ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jun 26, 2023 | 10:33 AM

Share

ಬೆಂಗಳೂರು: ಬೆಂಗಳೂರು (Bengaluru) ಮತ್ತು ಆಂಧ್ರಪ್ರದೇಶದ (Andhra Pradesh) ವಿವಿಧ ನಗರಗಳಲ್ಲಿ ಬೈಕ್​​ ಕಳ್ಳತನ (Bike Robbery) ಮಾಡುತ್ತಿದ್ದ ಆರೋಪದ ಮೇಲೆ 16 ವರ್ಷದ ಇಬ್ಬರು ಬಾಲಕರನ್ನು (Minors) ಪೊಲೀಸರು (Police) ಬಂಧಿಸಿದ್ದಾರೆ. ಇವರು ಒಂದೇ ವರ್ಷದಲ್ಲಿ ಬರೊಬ್ಬರಿ 44 ಬೈಕ್​ಗಳನ್ನು ಕಳ್ಳತ ಮಾಡಿದ್ದಾರೆ. ಅವುಗಳಲ್ಲಿ ಹೆಚ್ಚಿನವು ಗೇರ್‌ಲೆಸ್ ಸ್ಕೂಟರ್‌ಗಳಾಗಿವೆ. ಪೊಲೀಸರು ಬಾಲಕರನ್ನು ಬಾಲಾಪರಾಧಿಗೃಹಕ್ಕೆ ಒಪ್ಪಿಸಿದ್ದಾರೆ. ಇದಕ್ಕೂ ಮುನ್ನ ಪೊಲೀಸರು, ಪೋಷಕರು ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಸಿದಾಗ ಆಶ್ಚರ್ಯಕರ ಸಂಗತಿ ಬಾಯಿಬಿಟ್ಟಿದ್ದಾರೆ. ಬಾಲಕರು ಬೈಕ್​ ಕಳ್ಳತನದಲ್ಲಿ ನಿಪುಣರಾಗಿದ್ದು, ಬೈಕ್​​ನ ಹ್ಯಾಂಡಲ್​ ಲಾಕ್​ ಮುರಿದು ಕಳ್ಳತನ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಅಷ್ಟಕ್ಕೂ ಬಾಲಕರು ಈ ದುಷ್ಟ ಬುದ್ದಿ ಕಲಿತಿದ್ದು ಎಲ್ಲಿ

ಈ ಇಬ್ಬರು ಬಾಲ ಆರೋಪಿಗಳಲ್ಲಿ ಓರ್ವ ಬಾಲಕ ನಗರದಲ್ಲಿ ತಾಯಿ ಮತ್ತು ಸಹೋದರಿಯೊಂದಿಗೆ ವಾಸವಾಗಿದ್ದನು. ಈತ ತಾಯಿ ಮತ್ತು ಸಹೋದರಿಗೆ ಬಹಳ ಕಾಡುತ್ತಿದ್ದನು. ಪ್ರತಿನಿತ್ಯ ಜಗಳವಾಡುತ್ತಿದ್ದನು. ಅಲ್ಲದೆ ತಂಬಾಕು ಸೇವನೆಯ ಚಟವೂ ಇತ್ತು. ಹೀಗಾಗಿ ಈತನನ್ನು ಸರಿ ದಾರಿಗೆ ತರಬೇಕು, ಈತ ಶಿಸ್ತು ಕಲಿಯಲಿ ಎಂದು ಒಂದೆರಡು ವರ್ಷಗಳ ಹಿಂದೆ ತಾಯಿ ಮಗನನ್ನು ರಿಮ್ಯಾಂಡ್​ ಹೋಮ್​ಗೆ ಸೇರಿಸಿದ್ದಳು.

ರಿಮ್ಯಾಂಡ್ ಹೋಮ್‌ನಲ್ಲಿ ಇನ್ನೊಬ್ಬ ಹುಡುಗನೊಂದಿಗೆ ಸೇರಿ ದ್ವಿಚಕ್ರ ವಾಹನಗಳ ಹ್ಯಾಂಡಲ್​​ ಮುರಿದು ಬೈಕ್​​ ಹೇಗೆ ಖದೀಯುವುದು, ಮತ್ತು ಎಲೆಕ್ಟ್ರಿಕಲ್ ಸರ್ಕ್ಯೂಟ್ ಅನ್ನು ಟ್ಯಾಂಪರಿಂಗ್ ಮಾಡಿ ಕಳ್ಳತನ ಮಾಡಿ ಓಡಿಸುವುದನ್ನು ಕಲಿತನು. ಇನ್ನು ಇನ್ನೊಬ್ಬ ಹುಡುಗನ ತಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರೇ, ತಾಯಿ ಗೃಹಿಣಿ.

ಇದನ್ನೂ ಓದಿ: ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ; ದೇವಸ್ಥಾನ ಹಾಗೂ ಮನೆಗೆ ಕನ್ನ

ಈ ಇಬ್ಬರೂ ಹುಡುಗರು ಹೈಸ್ಕೂಲ್ ಡ್ರಾಪ್ಔಟ್ ಆಗಿದ್ದಾರೆ. ಒಬ್ಬನು ಏಳನೇ ತರಗತಿ ಇನ್ನೊಬ್ಬ ಎಂಟನೇ ತರಗತಿವರೆಗೆ ಮಾತ್ರ ಓದಿದ್ದಾನೆ. ಇವರಿಬ್ಬರೂ ಒಂದು ಪ್ರದೇಶದಲ್ಲಿ ವಾಸಿಸುತ್ತಿದ್ದರಿಂದ ನಿಕಟ ಸ್ನೇಹಿತರಾಗಿದ್ದಾರೆ. ಹಗಲು ರಾತ್ರಿ ಗೊತ್ತುಗುರಿಯಿಲ್ಲದೆ ತಿರುಗಾಡುತ್ತಾ, ಪ್ರತ್ಯೇಕ ಸ್ಥಳಗಳಲ್ಲಿ ಅಥವಾ ಮಂದ ಬೆಳಕಿನಲ್ಲಿರುವ ವಸತಿ ಪ್ರದೇಶಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಕದಿಯುತ್ತಿದ್ದರು.

ಕದ್ದ ಬೈಕ್​ಗಳಲ್ಲಿ 18 ಬೈಕ್​​ ಅನ್ನು ತಲಾ 5,000 ರೂ. ಗಳಿಗೆ ಮಾರಿದ್ದಾರೆ. ಬ್ಯಾಂಕ್‌ಗಳಿಗೆ ವಸೂಲಿ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದು, ಸಾಲವನ್ನು ಪಾವತಿಸದ ಕಾರಣ ಅವರ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಗ ಮಾರುತ್ತಿದ್ದೇವೆ ಎಂದು ಹೇಳಿಕೊಂಡು ಬೈಕ್​ಗಳನ್ನು ಮಾರುತ್ತಿದ್ದರು.

ಬಹುತೇಕ ಬೈಕ್​ಗಳನ್ನು ಗಾರ್ಮೆಂಟ್ಸ್, ಸೆಕ್ಯುರಿಟಿ ಏಜೆನ್ಸಿಗಳು ಅಥವಾ ಕಾರ್ಮಿಕರಾಗಿ ಕೆಲಸ ಮಾಡುವ ಪುರುಷರಿಗೆ ಮಾರಾಟ ಮಾಡಿದರು. ಮಾರಾಟವಾಗದ ವಾಹನಗಳಲ್ಲಿ ಜಾಲಿ ರೈಡ್‌ ಮತ್ತು ವೀಲಿಂಗ್​​ ಮಾಡುತ್ತಿದ್ದರು. ಕೆಲವೊಮ್ಮೆ, ಟೈರ್‌ ಹಾಗೂ ಇನ್ನೀತರ ಬಿಡಿಭಾಗಗಳನ್ನು ಮಾರಾಟ ಮಾಡುತ್ತಿದ್ದರು.

ಪೊಲೀಸರ ಪ್ರಕಾರ, ಅಪ್ರಾಪ್ತರಿಬ್ಬರೂ ಯಾವುದೇ ಅಪರಾಧದ ಹಿನ್ನೆಲೆ ಹೊಂದಿಲ್ಲ. ಅವರ ಕೆಲವು ಸ್ನೇಹಿತರು ದರೋಡೆ ಮತ್ತು ವಾಹನ-ಕಳ್ಳತನದ ಆರೋಪದ ಮೇಲೆ ಬಂಧಿತರಾಗಿದ್ದಾರೆ. ಬೆಂಗಳೂರಿನ ಜೆಪಿ ನಗರ, ಬನಶಂಕರಿ, ಜಯನಗರ, ತಿಲಕನಗರ, ಮೈಕೋ ಲೇಔಟ್, ಎಚ್‌ಎಎಲ್, ಕೆಆರ್ ಪುರಂ, ಬೆಳ್ಳಂದೂರು, ಎಚ್‌ಎಸ್‌ಆರ್ ಲೇಔಟ್ ಮತ್ತು ಕಾಡುಗೋಡಿಯಲ್ಲಿ ಇವರಿಬ್ಬರು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ