AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿವರ್ಸ್ ಬಂದ ನೆರೆಮನೆಯ ಕಾರು: 2 ವರ್ಷದ ಕಂದಮ್ಮ ಸಾವು

ರು ರಿವರ್ಸ್ ತೆಗೆಯುವ ವೇಳೆ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಕಂದ ಸಾವೀಗೀಡಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ರಿವರ್ಸ್ ಬಂದ ನೆರೆಮನೆಯ ಕಾರು: 2 ವರ್ಷದ ಕಂದಮ್ಮ ಸಾವು
Car
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 09, 2022 | 8:46 PM

Share

ನವದೆಹಲಿ: ಯಾವುದೇ ಒಂದು ವಾಹನ ಚಾಲಾಯಿಸುವಾಗ ಮೈಯಲ್ಲ ಕಣ್ಣಾಗಿರಬೇಕು ಎಂದು ಹೇಳುವುದು ಸುಳ್ಳಲ್ಲ. ವಾಹನ ಚಲಾಯಿಸಬೇಕಾದರೆ ಸ್ವಲ್ಪ ಯಾಮಾರಿದ್ರು ಏನೆಲ್ಲಾ ಅನಾಹುತಗಳು ಆಗುತ್ತವೆ ಎನ್ನುವುದಕ್ಕೆ ಈ ಸುದ್ದಿ ಸಾಕ್ಷಿ.

ಹೌದು…ಕಾರು ರಿವರ್ಸ್ ತೆಗೆಯುವ ವೇಳೆ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಕಂದಮ್ಮ ಸಾವೀಗೀಡಾದ ಹೃದಯ ವಿದ್ರಾವಕ ಘಟನೆ ನವದೆಹಲಿಯಲ್ಲಿ ನಡೆದಿದೆ.

ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಾವು

ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು(ಅಕ್ಟೋಬರ್. 09) ಮಧ್ಯಾಹ್ನ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ.

ಎರಡು ವರ್ಷದ ಮಗು ತನ್ನ ಮನೆಯ ಮುಂದೆ ಗೇಟ್‌ನ ಹೊರಭಾಗದ ರಸ್ತೆಯಲ್ಲಿ ಆಟವಾಡುತ್ತಿತ್ತು. ಈ ವೇಳೆ ನೆರೆ ಮನೆಯವರು ಮಗುವನ್ನು ನೋಡದೇ ಏಕಾಏಕಿ ಕಾರನ್ನು ರಿವರ್ಸ್‌ ತೆಗೆದುಕೊಂಡಿದ್ದಾರೆ. ಪರಿಣಾಮ ಮಗು ಕಾರಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ಬಳಿಕ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಹನ ಚಾಲಾಯಿಸುವಾಗ ಮೈಯಲ್ಲ ಕಣ್ಣಾಗಿರಬೇಕು. ಅದರಲ್ಲೂ ರಿವರ್ಸ್ ತೆಗೆದುಕೊಳ್ಳುವಾಗಂತೂ ಎಚ್ಚರ ವಹಿಸಲೇಬೇಕು. ಅಲ್ಲದೇ ಒಮ್ಮೆ ಗಾಡಿ ಮೂವ್ ಮಾಡುವ ಮೊದಲು ಒಂದು ಸಲ ಕೆಳಗೆ ಇಣುಕಿ ಸಹ ನೋಡಬೇಕು. ಯಾಕಂದ್ರೆ, ವಾಹನದ ಕೆಳಗಡೆ ನಾಯಿ ಮಲಗಿಕೊಂಡಿರುತ್ತವೆ.

Published On - 8:31 pm, Sun, 9 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ