AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರೊಂದಿಗೆ ಜನ್ಮದಿನ ಆಚರಿಸಿಕೊಂಡಿದ್ದ ಯುವತಿ ಮರುದಿನ ಬೆಡ್​ ರೂಮ್​ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

ಗೆಳೆಯರೊಂದಿಗೆ ಸಂತೋಷದಿಂದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾಳೆ. ಅಲದೇ ಸ್ನೇಹಿತರೊಂದಿಗೆ ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾಳೆ. ಆದ್ರೆ, ತಂದೆ-ತಾಯಿ ಬಂದು ನೋಡಿದಾಗ ಆಕೆ ಬೆಡ್​ ರೂಮ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸ್ನೇಹಿತರೊಂದಿಗೆ ಜನ್ಮದಿನ ಆಚರಿಸಿಕೊಂಡಿದ್ದ ಯುವತಿ ಮರುದಿನ ಬೆಡ್​ ರೂಮ್​ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಹರ್ಷಿತಾ
TV9 Web
| Edited By: |

Updated on:Jan 21, 2023 | 8:11 PM

Share

ಹೈದರಾಬಾದ್​: 20 ವರ್ಷದ ಯುವತಿಯೊಬ್ಬಳು ತನ್ನ ಹುಟ್ಟುಹಬ್ಬದ ದಿನವೇ ಸಾವಿನ ಹಾದಿ ಹಿಡಿದಿದ್ದಾಳೆ. ಸ್ನೇಹಿತರೊಂದಿಗೆ ಸೇರಿ ಜನ್ಮದಿನ ಆಚರಿಸಿಕೊಂಡಿದ್ದ ಯುವತಿ ಅದೇ ದಿನ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ. ಈ ಘಟನೆ ಹೈದರಾಬಾದ್​ನ ಕುಕ್ಕಟಪಲ್ಲಿಯ ಬಾಲಾಜಿ ನಗರದಲ್ಲಿ ನಡೆದಿದ್ದು, ಮೃತಳನ್ನು ಹರ್ಷಿತಾ (20) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ದುರ್ಜನರ ಸಂಗ ಮಾಡಿ ಮಾಡದ ತಪ್ಪಿಗೆ ಜೀವ ತೆತ್ತ ಮೈಸೂರಿನ ಯುವಕ, ಸಜ್ಜನರ ಸಂಗ ಹೆಜ್ಜೇನ ಸವಿದಂತೆ ಎಂದು ಹೇಳಿದ್ದು ಇದಕ್ಕೆ

ಆಂಧ್ರ ಪ್ರದೇಶದ ಗುಂಟೂರು ಮೂಲದ ಸಾಯಿಕಿರಣ್​ ಮತ್ತು ನರ್ಮದಾ ದಂಪತಿಯ ಏಕೈಕ ಪುತ್ರಿಯಾಗಿದ್ದ ಹರ್ಷಿತಾ, ಸಿಎ ಅಧ್ಯಯನ ಮಾಡುತ್ತಿದ್ದಳು. ಹರ್ಷಿತಾ ಗುರುವಾರ ತನ್ನ ಜನ್ಮದಿನವನ್ನು ಫ್ರೆಂಡ್ಸ್​ ಜೊತೆ ಆಚರಿಸಿಕೊಂಡಿದ್ದಾಳೆ. ಅಲ್ಲದೇ ಸಿನಿಮಾಗೆ ಹೋಗಿದ್ದಳು. ಬಳಿಕ ಅಂದು ಮಧ್ಯರಾತ್ರಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ತನ್ನ ಬೆಡ್​ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ.

ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ತಂದೆ ಸಾಯಿಕಿರಣ್​ ಮತ್ತು ತಾಯಿ ನರ್ಮದಾ ನೆಲ್ಲೂರಿಗೆ ತೆರಳಿದ್ದರು. ಶುಕ್ರವಾರ ಬೆಳಗ್ಗೆ ವಾಪಸ್ ಮನೆಗೆ ಬಂದು ಬಾಗಿಲು ಬಡಿದಿದ್ದಾರೆ. ಎಷ್ಟೇ ಬಡಿದರು ಮಗಳು ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಸಾಯಿಕುಮಾರ್​ ಮನೆಯ ಮಾಲೀಕನ ಸಹಾಯದಿಂದ ಬಾಗಿಲು ಮುರಿದು ಬೆಡ್​ರೂಮ್​ಗೆ ಹೋಗಿ ನೋಡಿದಾಗ ಮಗಳು ಹರ್ಷಿತಾ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನು ಪೋಷಕರು ನೋಡಿ ಆಘಾತಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಕುಕ್ಕಟಪಲ್ಲಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓದಿನ ಒತ್ತಡದಿಂದ ಈ ರೀತಿ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ತನಿಖೆ ಕೈಗೊಂಡಿದ್ದಾರೆ.

Published On - 6:57 pm, Sat, 21 January 23

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’