AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರೊಂದಿಗೆ ಜನ್ಮದಿನ ಆಚರಿಸಿಕೊಂಡಿದ್ದ ಯುವತಿ ಮರುದಿನ ಬೆಡ್​ ರೂಮ್​ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

ಗೆಳೆಯರೊಂದಿಗೆ ಸಂತೋಷದಿಂದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾಳೆ. ಅಲದೇ ಸ್ನೇಹಿತರೊಂದಿಗೆ ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾಳೆ. ಆದ್ರೆ, ತಂದೆ-ತಾಯಿ ಬಂದು ನೋಡಿದಾಗ ಆಕೆ ಬೆಡ್​ ರೂಮ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸ್ನೇಹಿತರೊಂದಿಗೆ ಜನ್ಮದಿನ ಆಚರಿಸಿಕೊಂಡಿದ್ದ ಯುವತಿ ಮರುದಿನ ಬೆಡ್​ ರೂಮ್​ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಹರ್ಷಿತಾ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 21, 2023 | 8:11 PM

Share

ಹೈದರಾಬಾದ್​: 20 ವರ್ಷದ ಯುವತಿಯೊಬ್ಬಳು ತನ್ನ ಹುಟ್ಟುಹಬ್ಬದ ದಿನವೇ ಸಾವಿನ ಹಾದಿ ಹಿಡಿದಿದ್ದಾಳೆ. ಸ್ನೇಹಿತರೊಂದಿಗೆ ಸೇರಿ ಜನ್ಮದಿನ ಆಚರಿಸಿಕೊಂಡಿದ್ದ ಯುವತಿ ಅದೇ ದಿನ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ. ಈ ಘಟನೆ ಹೈದರಾಬಾದ್​ನ ಕುಕ್ಕಟಪಲ್ಲಿಯ ಬಾಲಾಜಿ ನಗರದಲ್ಲಿ ನಡೆದಿದ್ದು, ಮೃತಳನ್ನು ಹರ್ಷಿತಾ (20) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ದುರ್ಜನರ ಸಂಗ ಮಾಡಿ ಮಾಡದ ತಪ್ಪಿಗೆ ಜೀವ ತೆತ್ತ ಮೈಸೂರಿನ ಯುವಕ, ಸಜ್ಜನರ ಸಂಗ ಹೆಜ್ಜೇನ ಸವಿದಂತೆ ಎಂದು ಹೇಳಿದ್ದು ಇದಕ್ಕೆ

ಆಂಧ್ರ ಪ್ರದೇಶದ ಗುಂಟೂರು ಮೂಲದ ಸಾಯಿಕಿರಣ್​ ಮತ್ತು ನರ್ಮದಾ ದಂಪತಿಯ ಏಕೈಕ ಪುತ್ರಿಯಾಗಿದ್ದ ಹರ್ಷಿತಾ, ಸಿಎ ಅಧ್ಯಯನ ಮಾಡುತ್ತಿದ್ದಳು. ಹರ್ಷಿತಾ ಗುರುವಾರ ತನ್ನ ಜನ್ಮದಿನವನ್ನು ಫ್ರೆಂಡ್ಸ್​ ಜೊತೆ ಆಚರಿಸಿಕೊಂಡಿದ್ದಾಳೆ. ಅಲ್ಲದೇ ಸಿನಿಮಾಗೆ ಹೋಗಿದ್ದಳು. ಬಳಿಕ ಅಂದು ಮಧ್ಯರಾತ್ರಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ತನ್ನ ಬೆಡ್​ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ.

ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ತಂದೆ ಸಾಯಿಕಿರಣ್​ ಮತ್ತು ತಾಯಿ ನರ್ಮದಾ ನೆಲ್ಲೂರಿಗೆ ತೆರಳಿದ್ದರು. ಶುಕ್ರವಾರ ಬೆಳಗ್ಗೆ ವಾಪಸ್ ಮನೆಗೆ ಬಂದು ಬಾಗಿಲು ಬಡಿದಿದ್ದಾರೆ. ಎಷ್ಟೇ ಬಡಿದರು ಮಗಳು ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಸಾಯಿಕುಮಾರ್​ ಮನೆಯ ಮಾಲೀಕನ ಸಹಾಯದಿಂದ ಬಾಗಿಲು ಮುರಿದು ಬೆಡ್​ರೂಮ್​ಗೆ ಹೋಗಿ ನೋಡಿದಾಗ ಮಗಳು ಹರ್ಷಿತಾ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನು ಪೋಷಕರು ನೋಡಿ ಆಘಾತಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಕುಕ್ಕಟಪಲ್ಲಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓದಿನ ಒತ್ತಡದಿಂದ ಈ ರೀತಿ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ತನಿಖೆ ಕೈಗೊಂಡಿದ್ದಾರೆ.

Published On - 6:57 pm, Sat, 21 January 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್