AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಪ್ರೇಮಿ ಬೇರೊಬ್ಬಳನ್ನು ಮದುವೆಯಾಗಿದ್ದಕ್ಕೆ ನೇಣು ಹಾಕಿಕೊಂಡು 22 ವರ್ಷದ ಯುವತಿ ಆತ್ಮಹತ್ಯೆ

ಮುಂಬೈನಲ್ಲಿ ತನ್ನ ಪ್ರೇಮಿ ಬೇರೊಬ್ಬಳನ್ನು ಮದುವೆಯಾದ ಕಾರಣದಿಂದ ಬೇಸತ್ತ ಮಲಾಡ್‌ನ 22 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪ್ರಿಯಕರನ ವಿರುದ್ಧ ಕೇಸ್ ದಾಖಲಾಗಿದೆ. ಜನವರಿಯಲ್ಲಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಿ ವಂಚಿಸಿದ ಜಿತೇಶ್ ಎಂಬಾತನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ 4 ವರ್ಷಗಳ ಕಾಲ ಸಂಬಂಧ ಹೊಂದಿದ್ದಳು ಎಂದು ತನಿಖೆಯಿಂದ ತಿಳಿದುಬಂದಿದೆ. ವಂಚನೆಯಿಂದ ಮನನೊಂದ ಆಕೆ ಫೆಬ್ರವರಿ 10ರಂದು ತನ್ನ ಅಜ್ಜಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತನ್ನ ಪ್ರೇಮಿ ಬೇರೊಬ್ಬಳನ್ನು ಮದುವೆಯಾಗಿದ್ದಕ್ಕೆ ನೇಣು ಹಾಕಿಕೊಂಡು 22 ವರ್ಷದ ಯುವತಿ ಆತ್ಮಹತ್ಯೆ
Hanging
ಸುಷ್ಮಾ ಚಕ್ರೆ
|

Updated on: Feb 19, 2025 | 4:42 PM

Share

ಮುಂಬೈ: ಮಲಾಡ್‌ನ 22 ವರ್ಷದ ಯುವತಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾಲ್ವಾನಿ ಪೊಲೀಸರು ಜಿತೇಶ್ ಗಾಡೆ ಎಂಬ 28 ವರ್ಷದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜನವರಿಯಲ್ಲಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಿ ವಂಚಿಸಿದ ಜಿತೇಶ್ ಎಂಬಾತನೊಂದಿಗೆ ಈ ಯುವತಿ ನಾಲ್ಕು ವರ್ಷಗಳ ಕಾಲ ಸಂಬಂಧ ಹೊಂದಿದ್ದಳು ಎಂದು ತನಿಖೆಯಿಂದ ತಿಳಿದುಬಂದಿದೆ. ವಂಚನೆಯಿಂದ ಕೋಪಗೊಂಡ ಆಕೆ ಫೆಬ್ರವರಿ 10ರಂದು ತನ್ನ ಅಜ್ಜಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೂಸೈಡ್ ನೋಟ್​ನಲ್ಲಿ ತನ್ನ ಪ್ರಿಯಕರನ ಹೆಸರು ಬರೆದಿಟ್ಟಿದ್ದಾಳೆ.

ಈ ಘಟನೆ ಫೆ. 10ರಂದು ರಾತ್ರಿ 9 ಗಂಟೆ ಸುಮಾರಿಗೆ ಮಾಲ್ವಾನಿಯ ಮಾರ್ವ್ ರಸ್ತೆ ಪ್ರದೇಶದಲ್ಲಿ ನಡೆದಿದೆ. ಮೃತ ಮಹಿಳೆ ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದಳು. 3 ವರ್ಷಗಳಿಂದ ಆಮಂತ್ರಣ ವಿನ್ಯಾಸಕರಾಗಿ ಕೆಲಸ ಮಾಡುತ್ತಿದ್ದಳು. ಜಿತೇಶ್ ಜೊತೆ ಸಂಬಂಧ ಹೊಂದಿದ್ದರೂ ಆಕೆ ತಮ್ಮ ಕುಟುಂಬದವರಿಗೆ ಅದನ್ನು ಎಂದಿಗೂ ಬಹಿರಂಗಪಡಿಸಿರಲಿಲ್ಲ. ಇತ್ತೀಚೆಗೆ, ಆಕೆಯ ತಾಯಿ ಪರಿಚಯಸ್ಥರ ಮೂಲಕ ಈ ಬಗ್ಗೆ ತಿಳಿದುಕೊಂಡರು.

ಇದನ್ನೂ ಓದಿ: ಚಿಕ್ಕಮಗಳೂರು: ನೇಣು ಬಿಗಿದುಕೊಂಡು‌ ಸರ್ವೆ ಅಧಿಕಾರಿ ಆತ್ಮಹತ್ಯೆಗೆ ಶರಣು

ಜಿತೇಶ್ ಜನವರಿ 26ರಂದು ತನ್ನ ತವರು ಗ್ರಾಮದಲ್ಲಿ ಬೇರೆ ಮಹಿಳೆಯೊಂದಿಗೆ ವಿವಾಹವಾದರು. ಆತನ ಪ್ರೇಯಸಿಗೆ ಈ ವಿಷಯ ತಿಳಿದಾಗ, ಆಕೆ ಆಘಾತಗೊಂಡಳು. ಫೆಬ್ರವರಿ 9ರ ಬೆಳಗಿನ ಜಾವ 1.30ರ ಸುಮಾರಿಗೆ ಆಕೆ ಮನೆಗೆ ಬಂದಾಗ ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿತ್ತು. ಏನಾಯಿತೆಂದು ಆಕೆಯ ತಾಯಿ ವಿಚಾರಿಸಿದಾಗ, ತಾನು ಕೆಳಗೆ ಬಿದ್ದೆ ಎಂದು ಹೇಳಿಕೊಂಡಿದ್ದಳು. ಮರುದಿನ ಬೆಳಿಗ್ಗೆ ಆಕೆ ಕೆಲಸಕ್ಕೆ ಹೋದವಳು ವಾಪಾಸ್ ಬರಲೇ ಇಲ್ಲ.

ಅದಾದ ನಂತರ ಆಕೆಯ ತಾಯಿ ಮತ್ತು ಸಹೋದರ ಆಕೆಗೆ ಹಲವು ಬಾರಿ ಫೋನ್ ಮಾಡಲು ಪ್ರಯತ್ನಿಸಿದರು. ಆದರೆ ಆಕೆ ಪ್ರತಿಕ್ರಿಯಿಸಲಿಲ್ಲ. ಆ ರಾತ್ರಿಯ ನಂತರ, ಆಕೆಯ ಸಹೋದರ ವಾಕಿಂಗ್‌ಗೆ ಹೋದಾಗ, ಆಕೆ ತನ್ನ ಅಜ್ಜಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆಂದು ತಿಳಿದುಬಂದಿದೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಮನನೊಂದ ಪತಿ ಆತ್ಮಹತ್ಯೆಗೆ ಶರಣು

ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆಕೆ ಬರುವಷ್ಟರಲ್ಲಿ ಮೃತಪಟ್ಟಿದ್ದಾಳೆಂದು ಘೋಷಿಸಿದರು. ಜಿತೇಶ್ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಆದರೆ ನಂತರ ಬೇರೊಬ್ಬರನ್ನು ಮದುವೆಯಾಗಿದ್ದ ಎಂದು ತನಿಖೆಗಳು ದೃಢಪಡಿಸಿದೆ. ಈ ದ್ರೋಹವನ್ನು ಸಹಿಸಲಾಗದೆ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತ ಯುವತಿಯ ತಾಯಿಯ ದೂರಿನ ಮೇರೆಗೆ, ಮಾಲ್ವಾನಿ ಪೊಲೀಸರು ಜಿತೇಶ್ ಗಾಡೆ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಜಿತೇಶ್‌ನನ್ನು ವಿಚಾರಣೆಗೆ ಒಳಪಡಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ