AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ರಸ್ತೆ ಮಧ್ಯೆ ಮಿತಿ ಮೀರಿದ ಜಗಳ; 25 ವರ್ಷದ ಮಹಿಳೆಗೆ ಗುಂಡು ಹಾರಿಸಿ ಹತ್ಯೆ

ದೆಹಲಿಯಲ್ಲಿ ರಸ್ತೆ ನಡುವೆ ಇಬ್ಬರು ವಾಹನ ಸವಾರರ ನಡುವೆ ಜಗಳ ನಡೆದು, ಅದು ದುರಂತವಾಗಿ ಅಂತ್ಯವಾಗಿದೆ. ಈ ಜಗಳದ ಭರದಲ್ಲಿ 25 ವರ್ಷದ ಮಹಿಳೆಯನ್ನು ಗೋಕಲ್ಪುರಿಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ದುಷ್ಕರ್ಮಿಯೊಬ್ಬ ಮಹಿಳೆಯ ಜೊತೆ ತೀವ್ರ ವಾಗ್ವಾದದ ವೇಳೆ ಗುಂಡು ಹಾರಿಸಿದ್ದಾನೆ. ಈ ಘಟನೆ ಸ್ಥಳೀಯ ಸಮುದಾಯದಲ್ಲಿ ವ್ಯಾಪಕ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ರಸ್ತೆ ಮಧ್ಯೆ ಮಿತಿ ಮೀರಿದ ಜಗಳ; 25 ವರ್ಷದ ಮಹಿಳೆಗೆ ಗುಂಡು ಹಾರಿಸಿ ಹತ್ಯೆ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 31, 2024 | 8:12 PM

Share

ನವದೆಹಲಿ: ಈಶಾನ್ಯ ದೆಹಲಿಯ ಗೋಕಲ್ಪುರಿ ಮೇಲ್ಸೇತುವೆಯ ಕೆಳಗೆ ನಡೆದ ಬೈಕ್ ಸವಾರ ಮತ್ತು ಸ್ಕೂಟರ್ ಚಲಾಯಿಸುತ್ತಿದ್ದ ವ್ಯಕ್ತಿಯ ನಡುವೆ ಜಗಳ ನಡೆದು, ಹಿಂದೆ ಕುಳಿತಿದ್ದ ಮಹಿಳೆಯನ್ನು ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಆ ಮಹಿಳೆಯ ಗಂಡ ಹಾಗೂ ಇಬ್ಬರು ಮಕ್ಕಳ ಎದುರೇ ಆಕೆ ಗುಂಡೇಟಿಗೆ ಬಲಿಯಾಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ರಸ್ತೆ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಇಂದು 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಿಮ್ರಂಜೀತ್ ಕೌರ್ ಎಂಬ 25 ವರ್ಷದ ಮಹಿಳೆಯ ಮೇಲೆ ಗುಂಡು ಹಾರಿಸಲಾಗಿದೆ. ಆಕೆಯ ಗಂಡ ಹೀರಾ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ನನ್ನ ಪತ್ನಿ ಸಿಮ್ರಂಜೀತ್ ಕೌರ್ ಮತ್ತು ಇಬ್ಬರು ಮಕ್ಕಳೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಂದಿಗೆ ಮಾತಿನ ಚಕಮಕಿ ಉಂಟಾಗಿತ್ತು. ಗೋಕಲ್ಪುರಿ ಮೇಲ್ಸೇತುವೆ ಬಳಿ ಗಲಾಟೆ ಸಂಭವಿಸಿದ್ದು, ದುಷ್ಕರ್ಮಿಗಳು ಫ್ಲೈಓವರ್‌ನಿಂದ ಗುಂಡು ಹಾರಿಸಿ ನನ್ನ ಪತ್ನಿಯನ್ನು ಕೊಂದಿದ್ದಾರೆ. ಆಕೆಯ ಎದೆಗೆ ಗುಂಡು ಬಿದ್ದು ಆಕೆ ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಕೋರಮಂಗಲದ ಪಿಜಿಯಲ್ಲಿ ಯುವತಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಅರೆಸ್ಟ್

“ಗೋಕುಲ್‌ಪುರಿ ಪ್ರದೇಶದಲ್ಲಿ ಪತಿಯೊಂದಿಗೆ ಮೋಟಾರ್‌ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಪ್ರಸ್ತುತ ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ದೆಹಲಿ ಪೊಲೀಸರು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ