AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

26 ವರ್ಷದ ಹಳೆ ಕೇಸ್​​​: 24ನೇ ವಯಸ್ಸಿನಲ್ಲಿ ಕಳತನ ಮಾಡಿದ್ದ ಆರೋಪಿ 50ನೇ ವಯಸ್ಸಿನಲ್ಲಿ ಅರೆಸ್ಟ್​

26 ವರ್ಷಗಳ ಹಿಂದೆ ಜಯನಗರದ 5ನೇ ಬ್ಲಾಕ್‌ನಲ್ಲಿ ಶ್ರೀಮತಿ ವಸಂತ ಎಂಬುವರ ಸರವನ್ನು ಕದ್ದು ಆರೋಪಿ ಗುಲಾಬ್​ ಖಾನ್ ಪರಾರಿಯಾಗಿದ್ದನು. ಆರೋಪಿ ಗುಲಾಬ್​ ಖಾನ್ ವೆಲ್ಡಿಂಗ್​ ಕೆಲಸ ಮಾಡುತ್ತಾ ರಾಮನಗರದಲ್ಲಿ ವಾಸವಾಗಿದ್ದನು. ಇದೀಗ ಜಯನಗರ ಪೊಲೀಸರು ಹಳೆ ಪ್ರಕರಣಗಳನ್ನು ಇತ್ಯರ್ಥಕ್ಕೆ ನಿಂತಾಗ, ಆರೋಪಿ ಸಿಕ್ಕಿಬಿದ್ದಿದ್ದಾನೆ.

26 ವರ್ಷದ ಹಳೆ ಕೇಸ್​​​: 24ನೇ ವಯಸ್ಸಿನಲ್ಲಿ ಕಳತನ ಮಾಡಿದ್ದ ಆರೋಪಿ 50ನೇ ವಯಸ್ಸಿನಲ್ಲಿ ಅರೆಸ್ಟ್​
ಗುಲಾಬ್‌ ಖಾನ್ ಬಂಧಿತ ಆರೋಪಿಗುಲಾಬ್‌ ಖಾನ್ ಬಂಧಿತ ಆರೋಪಿ
TV9 Web
| Edited By: |

Updated on: Feb 11, 2024 | 10:44 AM

Share

ಬೆಂಗಳೂರು, ಫೆಬ್ರವರಿ 11: ಸರಗಳ್ಳತನ (Chain snatching) ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಜಯನಗರ ಪೊಲೀಸರು (Police) 26 ವರ್ಷಗಳ ಬಳಿಕ ಬಂಧಿಸಿದ್ದಾರೆ. ಗುಲಾಬ್‌ ಖಾನ್ ಬಂಧಿತ ಆರೋಪಿ. ಆರೋಪಿ ಗುಲಾಬ್​ ಖಾನ್​ 1998ರ ಜನವರಿ 20 ರಂದು ಜಯನಗರದ 5ನೇ ಬ್ಲಾಕ್‌ನಲ್ಲಿ ಶ್ರೀಮತಿ ವಸಂತ ಎಂಬುವರ ಸರವನ್ನು ಕದ್ದು ಪರಾರಿಯಾಗಿದ್ದನು. ಜಯನಗರದಲ್ಲಿ ಕಳ್ಳತನ ಮಾಡಿದ‌ ನಂತರ ಆರೋಪಿ ಗುಲಾಬ್​ ಖಾನ್​ ಯಾವುದೆ ಪ್ರಕರಣದಲ್ಲಿ ಭಾಗಿಯಾಗಿರಲಿಲ್ಲ. ವೆಲ್ಡಿಂಗ್‌ ಕೆಲಸ ಮಾಡಿಕೊಂಡು ರಾಮನಗರದಲ್ಲಿ (Ramnagar) ನೆಲೆಸಿದ್ದನು. ಇದೀಗ ಪೊಲೀಸರು ದೂಳು ಹಿಡಿದಿರುವ ಹಳೆ ಪ್ರಕರಣಗಳಿಗೆ ಇತಿಶ್ರೀ ಹೇಳಲು ನಿಂತಾಗ, ಗುಲಾಬ್‌ ಖಾನ್ ಕೇಸ್​ ಆಚೆ ಬಂದಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಗುಲಾಬ್​ ಖಾನ್​ ರಾಮನಗರದಲ್ಲಿ ಇರುವುದು ತಿಳಿದಿದ್ದು, ಕೂಡಲೆ ಸ್ಥಳಕ್ಕೆ ತೆರಳಿ ಅರೆಸ್ಟ್ ಮಾಡಿದ್ದಾರೆ.

ಸದ್ಯ ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಇನ್ನು ಗುಲಾಬ್​ ಖಾನ್​ 24ನೇ ವಯಸ್ಸಿನಲ್ಲಿ ಸರಗಳ್ಳತನ ಮಾಡಿದ್ದು, 50ನೇ ವಯಸ್ಸಿನಲ್ಲಿ ಅರೆಸ್ಟ್​ ಆಗುತ್ತಿದ್ದಾನೆ.

ಇದನ್ನೂ ಓದಿ: ಕಳ್ಳತನದ ಆರೋಪಿಯನ್ನು ಅಕ್ರಮ ಬಂಧನದಲ್ಲಿಟ್ಟಿದ್ದ ಅಮೃತಹಳ್ಳಿ ಪೊಲೀಸರು, ಮಾನವ ಹಕ್ಕುಗಳ ಆಯೋಗ ದಾಳಿ 

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಆರೋಪಿಗಳ ಬಂಧನ

ಹುಬ್ಬಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಅಬ್ದುಲ್ ಖಾದರ್ ಬಿಜಾಪುರ, ನವಾಜ್​ಖಾನ್ ತರೀನ್ ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿ ಇದ್ದ 81,600 ರೂ. ಮೌಲ್ಯದ 24 ಕ್ವಿಂಟಾಲ್​ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿಗಳು ಫಲಾನುಭವಿಗಳ ಬಳಿ ಕಡಿಮೆ ದರಕ್ಕೆ ಪಡಿತರ ಅಕ್ಕಿ ಖರೀದಿ ಮಾಡಿ, ಬೇರೆ ಕಡೆ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ.

ಬಳಿಕ ಆಹಾರ ಇಲಾಖೆ ನಿರೀಕ್ಷಕ ಅಬ್ದುಲ್ ಖತೀಬ ಸಮ್ಮುಖದಲ್ಲಿ ಪೊಲೀಶರು ಪರಿಶೀಲನೆ ನಡೆಸಿದಾಗ ಪಡಿತರ ಅಕ್ಕಿ ಸಾಗಟ ಬಯಲಾಗಿದೆ. ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು