AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜತೆಗೂಡಿ ಪತಿಯ ಹತ್ಯೆಗೈದು ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟ ಮಹಿಳೆ

ಈ ಘಟನೆ ನಡೆದು ಸುಮಾರು 12 ದಿನಗಳು ನಡೆದಿವೆ ಎಂದು ಅಂದಾಜಿಸಲಾಗಿದ್ದು,  ಮಗಳ ಕಣ್ಮುಂದೆಯೇ ಪತಿ ರಯೀಸ್ ಶೇಖ್​ನ ಕತ್ತನ್ನು ಮೊನಚಾದ ಆಯುಧದಿಂದ ಕೊಯ್ದು ಕೊಲೆ ಮಾಡಿದ್ದಾರೆ ಎಂದು ಎಂದು ರಶೀದಾ ಶೇಖ್ ಮತ್ತು ಆಕೆಯ ಪ್ರಿಯಕರ ಅಮಿತ್ ಮಿಶ್ರಾರ ಮೇಲೆ ಆರೋಪಿಸಲಾಗಿದೆ.

ಪ್ರಿಯಕರನ ಜತೆಗೂಡಿ ಪತಿಯ ಹತ್ಯೆಗೈದು ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟ ಮಹಿಳೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: Jun 01, 2021 | 11:22 PM

Share

ಮುಂಬೈ: 28 ವರ್ಷದ ಮಹಿಳೆಯೋರ್ವಳು ತನ್ನ ಪ್ರಿಯಕರನ ಜತೆಗೂಡಿ ಗಂಡನನ್ನು ಹತ್ಯಗೈದು ತನ್ನ ಮನೆಯಲ್ಲೇ ಹೂತಿಟ್ಟ ಘಟನೆಯೊಂದು ಪಶ್ಚಿಮ ಮುಂಬೈನ ಉಪನಗರವೊಂದರಲ್ಲಿ ನಡೆದಿದೆ. ಮಹಿಳೆಯನ್ನು ರಶೀದಾ ಶೇಖ್ ಎಂದು ಗುರುತಿಸಲಾಗಿದ್ದು, ಪ್ರಿಯಕರ ಅಮಿತ್ ಮಿಶ್ರಾ ಎಂಬಾತನ ಜತೆ ಸೇರಿ ಈ ಕೃತ್ಯ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ರಶೀದಾ ಶೇಖ್​ಳನ್ನು ಬಂಧಿಸಲಾಗಿದ್ದು, ಆಕೆಯ ಪ್ರಿಯಕರ ಅಮಿತ್ ಮಿಶ್ರಾ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆ ನಡೆದು ಸುಮಾರು 12 ದಿನಗಳು ನಡೆದಿವೆ ಎಂದು ಅಂದಾಜಿಸಲಾಗಿದ್ದು,  ಮಗಳ ಕಣ್ಮುಂದೆಯೇ ಪತಿ ರಯೀಸ್ ಶೇಖ್​ನ ಕತ್ತನ್ನು ಮೊನಚಾದ ಆಯುಧದಿಂದ ಕೊಯ್ದು ಕೊಲೆ ಮಾಡಿದ್ದಾರೆ ಎಂದು ಎಂದು ರಶೀದಾ ಶೇಖ್ ಮತ್ತು ಆಕೆಯ ಪ್ರಿಯಕರ ಅಮಿತ್ ಮಿಶ್ರಾರ ಮೇಲೆ ಆರೋಪಿಸಲಾಗಿದೆ. ಜತೆಗೆ ರಶೀದಾ ಶೇಖ್ ಗಂಡನ ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟುಹಾಕಿದ್ದಾಳೆ ಎಂದೂ ಹೇಳಲಾಗಿದೆ.

ಹತ್ಯೆಗೊಳಗಾದ ರಯೀಸ್ ಶೇಖ್ ಬಟ್ಟೆ ಅಂಗಡಿ ಒಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಒಂದು ವಾರಗಳಿಂದ ಆತ ಕಾಣದೇ ಇದ್ದಾಗ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ಬೆಡ್​ರೂಂನಲ್ಲಿ ಸುಡಲ್ಪಟ್ಟ ದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ದೇಶ ಮತ್ತು ರಾಜ್ಯದಲ್ಲಿ ಕೊವಿಡ್​ನಿಂದ ಅನಾಥರಾದ ಮಕ್ಕಳೆಷ್ಟು ಗೊತ್ತೆ? ಇಲ್ಲಿದೆ ಅಂಕಿ ಅಂಶ

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​

(28 year old woman kills husband with her lover in Mumbai)

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ