AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜತೆಗೂಡಿ ಪತಿಯ ಹತ್ಯೆಗೈದು ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟ ಮಹಿಳೆ

ಈ ಘಟನೆ ನಡೆದು ಸುಮಾರು 12 ದಿನಗಳು ನಡೆದಿವೆ ಎಂದು ಅಂದಾಜಿಸಲಾಗಿದ್ದು,  ಮಗಳ ಕಣ್ಮುಂದೆಯೇ ಪತಿ ರಯೀಸ್ ಶೇಖ್​ನ ಕತ್ತನ್ನು ಮೊನಚಾದ ಆಯುಧದಿಂದ ಕೊಯ್ದು ಕೊಲೆ ಮಾಡಿದ್ದಾರೆ ಎಂದು ಎಂದು ರಶೀದಾ ಶೇಖ್ ಮತ್ತು ಆಕೆಯ ಪ್ರಿಯಕರ ಅಮಿತ್ ಮಿಶ್ರಾರ ಮೇಲೆ ಆರೋಪಿಸಲಾಗಿದೆ.

ಪ್ರಿಯಕರನ ಜತೆಗೂಡಿ ಪತಿಯ ಹತ್ಯೆಗೈದು ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟ ಮಹಿಳೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: Jun 01, 2021 | 11:22 PM

Share

ಮುಂಬೈ: 28 ವರ್ಷದ ಮಹಿಳೆಯೋರ್ವಳು ತನ್ನ ಪ್ರಿಯಕರನ ಜತೆಗೂಡಿ ಗಂಡನನ್ನು ಹತ್ಯಗೈದು ತನ್ನ ಮನೆಯಲ್ಲೇ ಹೂತಿಟ್ಟ ಘಟನೆಯೊಂದು ಪಶ್ಚಿಮ ಮುಂಬೈನ ಉಪನಗರವೊಂದರಲ್ಲಿ ನಡೆದಿದೆ. ಮಹಿಳೆಯನ್ನು ರಶೀದಾ ಶೇಖ್ ಎಂದು ಗುರುತಿಸಲಾಗಿದ್ದು, ಪ್ರಿಯಕರ ಅಮಿತ್ ಮಿಶ್ರಾ ಎಂಬಾತನ ಜತೆ ಸೇರಿ ಈ ಕೃತ್ಯ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ರಶೀದಾ ಶೇಖ್​ಳನ್ನು ಬಂಧಿಸಲಾಗಿದ್ದು, ಆಕೆಯ ಪ್ರಿಯಕರ ಅಮಿತ್ ಮಿಶ್ರಾ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆ ನಡೆದು ಸುಮಾರು 12 ದಿನಗಳು ನಡೆದಿವೆ ಎಂದು ಅಂದಾಜಿಸಲಾಗಿದ್ದು,  ಮಗಳ ಕಣ್ಮುಂದೆಯೇ ಪತಿ ರಯೀಸ್ ಶೇಖ್​ನ ಕತ್ತನ್ನು ಮೊನಚಾದ ಆಯುಧದಿಂದ ಕೊಯ್ದು ಕೊಲೆ ಮಾಡಿದ್ದಾರೆ ಎಂದು ಎಂದು ರಶೀದಾ ಶೇಖ್ ಮತ್ತು ಆಕೆಯ ಪ್ರಿಯಕರ ಅಮಿತ್ ಮಿಶ್ರಾರ ಮೇಲೆ ಆರೋಪಿಸಲಾಗಿದೆ. ಜತೆಗೆ ರಶೀದಾ ಶೇಖ್ ಗಂಡನ ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟುಹಾಕಿದ್ದಾಳೆ ಎಂದೂ ಹೇಳಲಾಗಿದೆ.

ಹತ್ಯೆಗೊಳಗಾದ ರಯೀಸ್ ಶೇಖ್ ಬಟ್ಟೆ ಅಂಗಡಿ ಒಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಒಂದು ವಾರಗಳಿಂದ ಆತ ಕಾಣದೇ ಇದ್ದಾಗ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ಬೆಡ್​ರೂಂನಲ್ಲಿ ಸುಡಲ್ಪಟ್ಟ ದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ದೇಶ ಮತ್ತು ರಾಜ್ಯದಲ್ಲಿ ಕೊವಿಡ್​ನಿಂದ ಅನಾಥರಾದ ಮಕ್ಕಳೆಷ್ಟು ಗೊತ್ತೆ? ಇಲ್ಲಿದೆ ಅಂಕಿ ಅಂಶ

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​

(28 year old woman kills husband with her lover in Mumbai)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ