Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವೀಡಿಯೊ ನೋಡಿ 8ರ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಮೂವರು ಬಾಲಕರು

ಫೋನ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ನೋಡಿದ್ದ ಮೂವರು ಬಾಲಕರು, ಅದರಲ್ಲಿರುವಂತೆ ಮಾಡಲು ಪಕ್ಕದ ಮನೆಯ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾರೆ. ಬಾಲಕಿ ಒಪ್ಪಿಕೊಳ್ಳದಿದ್ದಾಗ ಮೂವರು ಸೇರಿ ಬಾಲಕಿ ಕತ್ತು ಹಿಸುಕಿ ಕೊಂದಿದ್ದಾರೆ. ಬಳಿಕ ಬಾಲಕಿಯ ಶವವನ್ನು ತೆಗೆದುಕೊಂಡು ಹೋಗಿ ಬಂಡೆಗೆ ಕಟ್ಟಿ ಕೃಷ್ಣಾ ನದಿಗೆ ಎಸೆಯಲಾಗಿದೆ.

ಅಶ್ಲೀಲ ವೀಡಿಯೊ ನೋಡಿ 8ರ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ  ಮೂವರು ಬಾಲಕರು
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on: Jul 17, 2024 | 5:21 PM

ಆಂಧ್ರಪ್ರದೇಶ: ನಂದ್ಯಾಲ್ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 12 ಮತ್ತು 13 ವರ್ಷದ ಮೂವರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಾಲಕರು ಫೋನ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ನೋಡಿದ್ದು, ಅದರಲ್ಲಿರುವ ದೃಶ್ಯಗಳನ್ನು ಮರುಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ಸ್ಥಳೀಯ ದೇವಸ್ಥಾನದ ಅವರಣದಲ್ಲಿ ಈ ಹೀನಕೃತ್ಯ ನಡೆದಿದ್ದು, ಒಪ್ಪದ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಘೋರ ಕೃತ್ಯ ಎಸಗಿದ ಬಳಿಕ ಆರೋಪಿಯ ತಂದೆ ಮತ್ತು ಚಿಕ್ಕಪ್ಪ ಸಾಕ್ಷ್ಯ ಮರೆಮಾಚಲು ಅಪ್ರಾಪ್ತ ಬಾಲಕಿಯ ಶವವನ್ನು ತೆಗೆದುಕೊಂಡು ಹೋಗಿ ಬಂಡೆಗೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಚಿಕ್ಕಪ್ಪನನ್ನು ಪೊಲೀಸರು ಬಂಧಿಸಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಬಾಲಕರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಸ್ತುತ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ನದಿಯಿಂದ ಬಾಲಕಿಯ ಶವವನ್ನು ಹೊರತೆಗೆಯಲು ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದ್ದಾರೆ ಎಂದು ಆಂಧ್ರಪ್ರದೇಶದ ಗೃಹ ಸಚಿವ ವಿ ಅನಿತಾ ಘೋಷಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ