AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವೀಡಿಯೊ ನೋಡಿ 8ರ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಮೂವರು ಬಾಲಕರು

ಫೋನ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ನೋಡಿದ್ದ ಮೂವರು ಬಾಲಕರು, ಅದರಲ್ಲಿರುವಂತೆ ಮಾಡಲು ಪಕ್ಕದ ಮನೆಯ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾರೆ. ಬಾಲಕಿ ಒಪ್ಪಿಕೊಳ್ಳದಿದ್ದಾಗ ಮೂವರು ಸೇರಿ ಬಾಲಕಿ ಕತ್ತು ಹಿಸುಕಿ ಕೊಂದಿದ್ದಾರೆ. ಬಳಿಕ ಬಾಲಕಿಯ ಶವವನ್ನು ತೆಗೆದುಕೊಂಡು ಹೋಗಿ ಬಂಡೆಗೆ ಕಟ್ಟಿ ಕೃಷ್ಣಾ ನದಿಗೆ ಎಸೆಯಲಾಗಿದೆ.

ಅಶ್ಲೀಲ ವೀಡಿಯೊ ನೋಡಿ 8ರ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ  ಮೂವರು ಬಾಲಕರು
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Jul 17, 2024 | 5:21 PM

Share

ಆಂಧ್ರಪ್ರದೇಶ: ನಂದ್ಯಾಲ್ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 12 ಮತ್ತು 13 ವರ್ಷದ ಮೂವರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಾಲಕರು ಫೋನ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ನೋಡಿದ್ದು, ಅದರಲ್ಲಿರುವ ದೃಶ್ಯಗಳನ್ನು ಮರುಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ಸ್ಥಳೀಯ ದೇವಸ್ಥಾನದ ಅವರಣದಲ್ಲಿ ಈ ಹೀನಕೃತ್ಯ ನಡೆದಿದ್ದು, ಒಪ್ಪದ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಘೋರ ಕೃತ್ಯ ಎಸಗಿದ ಬಳಿಕ ಆರೋಪಿಯ ತಂದೆ ಮತ್ತು ಚಿಕ್ಕಪ್ಪ ಸಾಕ್ಷ್ಯ ಮರೆಮಾಚಲು ಅಪ್ರಾಪ್ತ ಬಾಲಕಿಯ ಶವವನ್ನು ತೆಗೆದುಕೊಂಡು ಹೋಗಿ ಬಂಡೆಗೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಚಿಕ್ಕಪ್ಪನನ್ನು ಪೊಲೀಸರು ಬಂಧಿಸಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಬಾಲಕರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಸ್ತುತ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ನದಿಯಿಂದ ಬಾಲಕಿಯ ಶವವನ್ನು ಹೊರತೆಗೆಯಲು ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದ್ದಾರೆ ಎಂದು ಆಂಧ್ರಪ್ರದೇಶದ ಗೃಹ ಸಚಿವ ವಿ ಅನಿತಾ ಘೋಷಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ