AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲೂ ಭ್ರಷ್ಟಾಚಾರ: ಮೂವರು ಸಬ್ ರಿಜಿಸ್ಟ್ರಾರ್ಸ್​ ಸಸ್ಪೆಂಡ್​

ಬೆಂಗಳೂರು: ಕೊರೊನಾ ಲಾಕ್​ಡೌನ್ ನಡುವೆಯೂ ಭ್ರಷ್ಟಾಚಾರ ಎಸಗಿ ಸಿಕ್ಕಿಬಿದ್ರಾ ಸಬ್ ರಿಜಿಸ್ಟ್ರಾರ್​ಗಳು? ಬೆಂಗಳೂರಿನಲ್ಲಿ ಮೂವರು ಸಿನಿಯರ್ ಸಬ್ ರಿಜಿಸ್ಟ್ರಾರ್​​ಗಳನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧವೂ ಇಲಾಖಾ ತನಿಖೆಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಐಜಿಆರ್ ಕೆ.ಪಿ.ಮೋಹನ್ ರಾಜ್ ಆದೇಶ ಮಾಡಿದ್ದಾರೆ. ಮಾದನಾಯಕನಹಳ್ಳಿ ಹಿರಿಯ ಉಪನೋಂದಣಾಧಿಕಾರಿ ಲಲಿತಾ ಅಮೃತೇಶ್, ಜಾಲ ಹಿರಿಯ ಉಪನೋಂದಣಾಧಿಕಾರಿ ರಾಮಪ್ರಸಾದ್, ದಾಸನಪುರ ಹಿರಿಯ ಉಪನೋಂದಣಾಧಿಕಾರಿ ಮಧುಕುಮಾರ ಅಮಾನತಾದವರು. ಅಧಿಕಾರಿಗಳ ಮೇಲಿರುವ ಆರೋಪಗಳು: ಕಂಪ್ಯೂಟರ್ ಫಾರಂ 9 ಮತ್ತು 11ಎ, 11ಬಿಯನ್ನು ಪಡೆಯದೆ ನೋಂದಣಿ ಮಾಡಿದ್ದಾರೆ. […]

ಕೊರೊನಾ ಸಂಕಷ್ಟದಲ್ಲೂ ಭ್ರಷ್ಟಾಚಾರ: ಮೂವರು ಸಬ್ ರಿಜಿಸ್ಟ್ರಾರ್ಸ್​ ಸಸ್ಪೆಂಡ್​
ಸಾಧು ಶ್ರೀನಾಥ್​
| Edited By: |

Updated on: May 29, 2020 | 1:19 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ನಡುವೆಯೂ ಭ್ರಷ್ಟಾಚಾರ ಎಸಗಿ ಸಿಕ್ಕಿಬಿದ್ರಾ ಸಬ್ ರಿಜಿಸ್ಟ್ರಾರ್​ಗಳು? ಬೆಂಗಳೂರಿನಲ್ಲಿ ಮೂವರು ಸಿನಿಯರ್ ಸಬ್ ರಿಜಿಸ್ಟ್ರಾರ್​​ಗಳನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧವೂ ಇಲಾಖಾ ತನಿಖೆಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಐಜಿಆರ್ ಕೆ.ಪಿ.ಮೋಹನ್ ರಾಜ್ ಆದೇಶ ಮಾಡಿದ್ದಾರೆ.

ಮಾದನಾಯಕನಹಳ್ಳಿ ಹಿರಿಯ ಉಪನೋಂದಣಾಧಿಕಾರಿ ಲಲಿತಾ ಅಮೃತೇಶ್, ಜಾಲ ಹಿರಿಯ ಉಪನೋಂದಣಾಧಿಕಾರಿ ರಾಮಪ್ರಸಾದ್, ದಾಸನಪುರ ಹಿರಿಯ ಉಪನೋಂದಣಾಧಿಕಾರಿ ಮಧುಕುಮಾರ ಅಮಾನತಾದವರು.

ಅಧಿಕಾರಿಗಳ ಮೇಲಿರುವ ಆರೋಪಗಳು: ಕಂಪ್ಯೂಟರ್ ಫಾರಂ 9 ಮತ್ತು 11ಎ, 11ಬಿಯನ್ನು ಪಡೆಯದೆ ನೋಂದಣಿ ಮಾಡಿದ್ದಾರೆ. ಅಲ್ಲದೇ ಕಾವೇರಿ ಇ-ಸ್ವತ್ತು ಪಡೆಯದೇ ಕೆಲ ಆಸ್ತಿಗಳ ರಿಜಿಸ್ಟರ್ ಮಾಡಿರುವ ಆರೋಪವಿದೆ. ಏಪ್ರಿಲ್ 24 ರಿಂದ ಮೇ 18ರ ವೇಳೆ ನಡೆದ ನೋಂದಣಿಯಲ್ಲಿ ಈ ಕೃತ್ಯ ಎಸಗಿದ್ದಾರೆ.

ಕೆಲವೊಂದು ಆಸ್ತಿಗಳಿಗೆ ಇ-ಖಾತೆ ಇಲ್ಲದಂತೆ ಆಸ್ತಿ ನೋಂದಣಿ ಮಾಡಿದ್ದಾರೆ. ಇದಕ್ಕಾಗಿ ಅವರು ಹಣ ಪಡೆದು ಭ್ರಷ್ಟಾಚಾರ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಕೆಲವೊಂದೆಡೆ ಕಾವೇರಿ ತಂತ್ರಜ್ಞಾನದಲ್ಲಿ ಸುಳ್ಳು ಮಾಹಿತಿ ಎಂಟ್ರಿ ಮಾಡಿದ್ದಾರೆ. ಕೆಲವೊಂದು ಗ್ರಾಮೀಣ ಪ್ರದೇಶ ಆಸ್ತಿಗಳಿಗೆ ಬಿಬಿಎಂಪಿ ವ್ಯಾಪ್ತಿ ಎಂದು ಉಲ್ಲೇಖಿಸಿದ್ದಾರೆ. ಅಂದ್ರೆ ಆ ಜಾಗದ ಮೌಲ್ಯ ಹೆಚ್ಚು ಮಾಡಲು ಸುಳ್ಳಿ ಎಂಟ್ರಿ ನೀಡಲಾಗಿದೆ.

ಆ ಜಾಗದ ಮಾಲೀಕರಿಗೆ ಮುಂದೆ ಮಾರಾಟ ಮಾಡಲು ಹೆಚ್ಚು ಲಾಭ ತರುವ ಉದ್ದೇಶದಿಂದ ಈ ರೀತಿಯಾಗಿ ಮಾಡಿದ್ದಾರೆ. ನಗರ ವ್ಯಾಪ್ತಿಯ ಆಸ್ತಿ ಅಂತಾ ತೋರಿಸಿ ಅದಕ್ಕೆ ಅವರಿಂದ ಕಿಕ್ ಬ್ಯಾಕ್ ಪಡೆದಿರುವ ಆರೋಪವಿದೆ. ಜಿಲ್ಲಾ ನೋಂದಣಾಧಿಕಾರಿಗಳು ತನಿಖೆ ಮಾಡಿದಾಗ ಈ ಅಂಶ ಬಯಲಾಗಿದೆ. ಅಲ್ಲದೆ ಈ ಅಧಿಕಾರಿಗಳು ಇನ್ನೂ ಲಕ್ಷಾಂತರ ರೂಪಾಯಿ ಹಣ ಪಡೆದಿರುವ ಅನುಮಾನ ವ್ಯಕ್ತವಾಗಿದೆ.

Follow Us
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ