AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್​ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆ

ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ಹರ್ಯಾಣದ ಫರೀದಾಬಾದ್​ನಲ್ಲಿ ನಡೆದಿದೆ. ಅತ್ಯಾಚಾರ ಯತ್ನ ವಿಫಲವಾದ ನಂತರ ಮಗುವನ್ನು ಕೊಂದಿರುವ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಬಾಲಕಿ ನಾಪತ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಕಾಟದ ವೇಳೆ ಪಕ್ಕದ ಮನೆಯ ಬಾತ್ ರೂಂನಲ್ಲಿ ಆಕೆಯ ಶವ ಪ್ಲಾಸ್ಟಿಕ್ ಚೀಲದಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಮನೆಯು ಆರೋಪಿಗೆ ಸೇರಿದ್ದಾಗಿದೆ.

ಹರ್ಯಾಣ: ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್​ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆ
ಮಗು
ನಯನಾ ರಾಜೀವ್
|

Updated on: Nov 16, 2023 | 9:02 AM

Share

ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ಹರ್ಯಾಣದ ಫರೀದಾಬಾದ್​ನಲ್ಲಿ ನಡೆದಿದೆ. ಅತ್ಯಾಚಾರ ಯತ್ನ ವಿಫಲವಾದ ನಂತರ ಮಗುವನ್ನು ಕೊಂದಿರುವ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಬಾಲಕಿ ನಾಪತ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಕಾಟದ ವೇಳೆ ಪಕ್ಕದ ಮನೆಯ ಬಾತ್ ರೂಂನಲ್ಲಿ ಆಕೆಯ ಶವ ಪ್ಲಾಸ್ಟಿಕ್ ಚೀಲದಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಮನೆಯು ಆರೋಪಿಗೆ ಸೇರಿದ್ದಾಗಿದೆ.

ಮಾಹಿತಿ ಪಡೆದ ಪೊಲೀಸರು ಆರೋಪಿಯ ಮನೆಗೆ ತಲುಪಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿ ಮಾಳಿಗೆಯಿಂದ ಜಿಗಿದಿದ್ದಾನೆ. ನಂತರ ಆತನನ್ನು ಹಿಡಿದು ಬಂಧಿಸಲಾಯಿತು. ಬಾಲಕಿಯನ್ನು ಹರಿತವಾದ ಆಯುಧ ಬಳಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಯತ್ನ ವಿಫಲವಾದ ಬಳಿಕ ಆರೋಪಿ ಆಕೆಯನ್ನು ಕೊಂದಿದ್ದಾನೆ ಎಂದು ಹೇಳಲಾಗಿದೆ.ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ನೀನು ನನಗೆ ಬೇಕು ಅಷ್ಟೇ, ನೆಲಮಂಗಲದ ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ

ಮರಣೋತ್ತರ ಪರೀಕ್ಷೆಯ ನಂತರ ಮಗುವಿನ ದೇಹವನ್ನು ಕುಟುಂಬಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನನ್ನು ಪೊಲೀಸರು ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ