AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್​ ದರೋಡೆ: 3 ಕೋಟಿ 50 ಲಕ್ಷ ರೂ. ಮೌಲ್ಯದ 5 ಕೆ.ಜಿ ಚಿನ್ನ ಕಳವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್​ ದೊರೇಡೆಯಾಗಿದ್ದು, ಭಾರೀ ಪ್ರಮಾಣದ ಹಣ, ಚಿನ್ನ ದೋಚಿಕೊಂಡು ಪರಾರಿಯಾಗಿದ್ದಾರೆ.

ಹೊಸಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್​ ದರೋಡೆ: 3 ಕೋಟಿ 50 ಲಕ್ಷ ರೂ. ಮೌಲ್ಯದ 5 ಕೆ.ಜಿ ಚಿನ್ನ ಕಳವು
ಹೊಸಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ ದರೋಡೆ
TV9 Web
| Edited By: |

Updated on:Nov 27, 2022 | 12:31 AM

Share

ಹೊಸಹಳ್ಳಿ(ಬೆಂಗಳೂರು ಗ್ರಾಮಾಂತರ): ಮುಖವಾಡ ಧರಿಸಿ ಬ್ಯಾಂಕ್​ನೊಳಗೆ ನುಗ್ಗಿದ ಕಳ್ಳರು ಗ್ಯಾಸ್​ ಕಟರ್​ನಿಂದ ಲಾಕರ್ ಮುರಿದು ಬರೋಬ್ಬರಿ 3 ಕೋಟಿ 50 ಲಕ್ಷ ರೂ. ಮೌಲ್ಯದ 5 ಕೆ.ಜಿ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ (Karnataka Garmin bank )ನಡೆದಿದೆ.

ಶಿರಸಿ ಪೊಲೀಸರ ಭರ್ಜರಿ ಬೇಟೆ: 9 ಅಂತರ್​ ಜಿಲ್ಲಾ ಕಳ್ಳರ ಬಂಧನ, 13,80,000 ರೂ. ನಗದು, 2 ಕಾರು, 12 ಮೊಬೈಲ್​ ಜಪ್ತಿ

ಮುಖಕ್ಕೆ‌ ಮಂಕಿ ಕ್ಯಾಪ್ ಹಾಕಿಕೊಂಡು ಗ್ಯಾಸ್ ಕಟರ್ ಬಳಸಿ ಈ ಕೃತ್ಯ ಮಾಡಿದ್ದು, ಬ್ಯಾಂಕ್‌ನಲ್ಲಿದ್ದ 5 ಕೆ.ಜಿ ಚಿನ್ನ, 14 ಲಕ್ಷ ರೂಪಾಯಿ ನಗದು ದೋಚಿಕೊಂಡು ಹೋಗಿದ್ದಾರೆ. ಇಂದು(ನ.26) ಬ್ಯಾಂಕ್‌ಗೆ ರಜೆ ಇದ್ದ ಹಿನ್ನೆಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಂಕ್‌ನಲ್ಲಿದ್ದ ಸಿಸಿಟಿವಿಯಲ್ಲಿ ದರೋಡೆಕೋರರ ಕೃತ್ಯ ಸೆರೆಯಾಗಿದೆ.

ನಾಲ್ವರು ದರೋಡೆಕೋರರು ಮುಖಕ್ಕೆ‌ ಮಂಕಿ ಕ್ಯಾಪ್ ಹಾಕ್ಕೊಂಡು ತಡರಾತ್ರಿ ಕೃತ್ಯ ಎಸಗಿರುವುದು ಬ್ಯಾಂಕ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ಪರಿಶೀಲನೆ ನಡೆಸಿದ್ದು, ಹೊಸಳ್ಳಿ ಪೊಲೀಸರು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:22 am, Sun, 27 November 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್