Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕ್‌ನಲ್ಲಿ ಮುಳುಗಿದವನನ್ನು ರಕ್ಷಿಸಲು ಹೋದವರೂ ನೀರುಪಾಲು; ಒಂದೇ ಕುಟುಂಬದ ನಾಲ್ವರ ಸಾವು

ಬಿಹಾರದ ದರ್ಭಾಂಗಾದಲ್ಲಿ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರ ಸಾವಿನ ನಂತರ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟುವಂತಿದೆ. ಪೊಲೀಸರು ಅವರ ಶವಗಳನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಅಂತಿಮ ಸಂಸ್ಕಾರವನ್ನು ಶೀಘ್ರದಲ್ಲೇ ನೆರವೇರಿಸಲಾಗುವುದು.

ಟ್ಯಾಂಕ್‌ನಲ್ಲಿ ಮುಳುಗಿದವನನ್ನು ರಕ್ಷಿಸಲು ಹೋದವರೂ ನೀರುಪಾಲು; ಒಂದೇ ಕುಟುಂಬದ ನಾಲ್ವರ ಸಾವು
ಒಂದೇ ಕುಟುಂಬದ ನಾಲ್ವರ ಸಾವು
Follow us
ಸುಷ್ಮಾ ಚಕ್ರೆ
|

Updated on: Oct 15, 2024 | 8:18 PM

ಪಾಟ್ನಾ: ಬಿಹಾರದ ದರ್ಭಾಂಗಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಒಟ್ಟಿಗೆ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆಯ ಬಳಿಕ ಆ ಪ್ರದೇಶದಲ್ಲಿ ಶೋಕ ಮಡುಗಟ್ಟಿದೆ. ಇಬ್ಬರು ಸಹೋದರರು ಮತ್ತು ಸೋದರಳಿಯ ಹಾಗೂ ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಅದೇ ಕುಟುಂಬದ ವ್ಯಕ್ತಿಯ ಸಾವಿನ ನಂತರ ಕುಟುಂಬದ ಸದಸ್ಯರು ಅಳಲು ತೋಡಿಕೊಂಡಿದ್ದಾರೆ. ಸೆಪ್ಟಿಕ್ ಟ್ಯಾಂಕ್‌ನಲ್ಲಿ ಉಸಿರುಗಟ್ಟಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಇದರಲ್ಲಿ ಮೊದಲಿಗೆ ವ್ಯಕ್ತಿಯೊಬ್ಬ ಪೈಪ್ ಅಳವಡಿಸಲು ಮುಂದಾದಾಗ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಇಬ್ಬರು ಸಹೋದರರು ಮತ್ತು ಅವರ ಸೋದರಳಿಯ ಸಹ ಟ್ಯಾಂಕ್‌ಗೆ ಇಳಿದರು. ಆತನನ್ನು ರಕ್ಷಿಸಲು ಹೋದ ಮೂವರೂ ಒಳಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಮಾಹಿತಿಯ ಪ್ರಕಾರ, ಸಂಜಯ್ ರಾಮ್ ಎಂಬ ವ್ಯಕ್ತಿ ಶೌಚಾಲಯದ ತೊಟ್ಟಿಗೆ ಪೈಪ್ ಹಾಕಲು ಪ್ರಯತ್ನಿಸುತ್ತಿದ್ದ. ಈ ವೇಳೆ ಸೆಪ್ಟಿಕ್ ಟ್ಯಾಂಕ್‌ನ ಮುಚ್ಚಳ ಒಡೆದಿದೆ. ಮುಚ್ಚಳ ಒಡೆದ ಕಾರಣ ಆತ ಟ್ಯಾಂಕ್ ಒಳಗೆ ಬಿದ್ದಿದ್ದಾನೆ. ಅವರನ್ನು ರಕ್ಷಿಸಲು ನೆರೆಹೊರೆಯಲ್ಲಿ ವಾಸಿಸುವ ಸುಶೀಲ್ ರಾಮ್ ಟ್ಯಾಂಕ್ ಒಳಗೆ ಇಳಿದಿದ್ದಾನೆ. ಅವರಿಬ್ಬರೂ ಹೊರಗೆ ಬರದಿದ್ದಾಗ ಸುಶೀಲ್ ಅವರ ಸಹೋದರ ಸುಧೀರ್ ರಾಮ್ ಮುಂದೆ ಬಂದಿದ್ದು, ಅವರನ್ನು ರಕ್ಷಿಸಲು ಆತ ಕೂಡ ಸೆಪ್ಟಿಕ್ ಟ್ಯಾಂಕ್‌ಗೆ ಇಳಿದಿದ್ದಾರೆ. ಇದಾದ ನಂತರ ಅವರ ಸೋದರಳಿಯ ನವಲ್ ರಾಮ್ ಕೂಡ ಕೆಳಗಿಳಿದಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆಗೆ ಶರಣಾದ ತಂದೆ

ಸಂಜಯ್​ನನ್ನು ರಕ್ಷಿಸಲು ಒಬ್ಬೊಬ್ಬರಾಗಿ ಮೂವರೂ ಸೆಪ್ಟಿಕ್ ಟ್ಯಾಂಕ್‌ಗೆ ಇಳಿದು ಸಾವನ್ನಪ್ಪಿದ್ದಾರೆ. ಸೆಪ್ಟಿಕ್ ಟ್ಯಾಂಕ್‌ನಿಂದ ಯಾರೂ ಹೊರಬರದ ಕಾರಣ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಎಲ್ಲರನ್ನೂ ಹೊರಗೆಳೆದು ಆಸ್ಪತ್ರೆಗೆ ಕರೆದೊಯ್ದರು. ನಾಲ್ವರ ಸಾವಿನಿಂದ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್