AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಆಂಧ್ರಪ್ರದೇಶದ ಕಡಪಾ ಮೂಲದ ವ್ಯಕ್ತಿಯೊರ್ವ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ
ಆರೋಪಿ ಬಂಧನ
Prajwal D'Souza
| Edited By: |

Updated on:Jun 24, 2023 | 1:55 PM

Share

ಉತ್ತರ ಕನ್ನಡ: ಜಿಲ್ಲೆಯ ಶಿರಸಿ(Sirsi)ಯಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ಆಂಧ್ರಪ್ರದೇಶದ ಕಡಪಾ ನಿವಾಸಿ ಶಿವ (26) ಎಂದು ಪೊಲೀಸರು ಗುರುತಿಸಿದ್ದಾರೆ. ಜೂ.22 ರಂದು ಸಂಜೆ 5.30 ರ ಸುಮಾರಿಗೆ 4 ವರ್ಷದ ಮಗುವಿಗೆ ಅತ್ಯಾಚಾರವೆಸಗಿರುವುದಾಗಿ ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಒಂದು ತಿಂಗಳು ಕಾಲ ಶಿರಸಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ. ಮದ್ಯದ ಅಮಲಿನಲ್ಲಿ ಆರೋಪಿ ಅಕ್ಕಪಕ್ಕದ ಮನೆಯ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಶಿರಸಿ ಹೊಸ ಮಾರ್ಕೆಟ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಭೀಮಾಶಂಕರ್ ತಿಳಿಸಿದ್ದಾರೆ.

ಇನ್ನು ಅತ್ಯಾಚಾರದ ನಂತರ ಆರೋಪಿ ವೈರ್ ಬಳಸಿ ಮಗುವನ್ನು ಕತ್ತು ಹಿಸುಕಲು ಪ್ರಯತ್ನಿಸಿದ್ದಾನೆ. ಈ ವೇಳೆ ಅಕ್ಕಪಕ್ಕದ ಮನೆಯವರು ಮಗುವಿನ ಅಳುವ ಶಬ್ದವನ್ನು ಕೇಳಿ ಹೊರ ಬಂದಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ನಮ್ಮ ಸಿಬ್ಬಂದಿ ಹಿಡಿದಿದ್ದು, ಮಗು ಸುರಕ್ಷಿತವಾಗಿದ್ದು, ಜೀವಂತವಾಗಿದೆ ಎಂದು ಪಿಎಸ್‌ಐ ತಿಳಿಸಿದ್ದಾರೆ.

ಇದನ್ನೂ ಓದಿ:ಚಾಕೊಲೇಟ್ ಆಸೆ ತೋರಿಸಿ 4ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ 52 ವರ್ಷದ ಕಾಮುಕ

ಈ ಕುರಿತು ಆರೋಪಿಗೆ ಪೋಕ್ಸೊ ಕಾಯಿದೆಯಡಿ, ಸೆಕ್ಷನ್ 376ಅತ್ಯಾಚಾರ, 307 ಕೊಲೆಗೆ ಯತ್ನ, ಸೆಕ್ಷನ್ 4 ಲೈಂಗಿಕ ದೌರ್ಜನ್ಯ ಮತ್ತು ಸೆಕ್ಷನ್ 6 ಉಗ್ರವಾದ ಲೈಂಗಿಕ ದೌರ್ಜನ್ಯ ಅಡಿಯಲ್ಲಿ ಶಿವ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್‌ಐ ಭೀಮಾಶಂಕರ್‌ ತಿಳಿಸಿದ್ದಾರೆ.

ಇನ್ನು ಇಂತಹುದೇ ಘಟನೆ ಜೂ.22 ರಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್​ಎಚ್ ಕ್ಯಾಂಪ್ 3ರಲ್ಲಿ ನಡೆದಿತ್ತು. 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಚಾಕೊಲೇಟ್ ಆಸೆ ತೋರಿಸಿ, 52 ವರ್ಷದ ಕಾಮುಕ ಆಕೆಯನ್ನ ಪುಸಲಾಯಿಸಿ ಸ್ಕೂಟರ್​ನಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿದ್ದ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿ ಸಪನ್ ಮಂಡಲ್(52) ಎಂಬಾತನನ್ನ ಪೊಲೀಸರು ಬಂಧಿಸಿದ್ದರು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Sat, 24 June 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ