ಐಸಿಸ್‌ಗೆ ಸೇರಿದ್ದ ಎನ್ನಲಾದ 48ರ ವರ್ಷದ ಕೇರಳದ ವ್ಯಕ್ತಿ ಪಾಕಿಸ್ತಾನ ಜೈಲಿನಲ್ಲಿ ಸಾವು

ಜುಲ್ಫಿಕರ್ ಎಂಬ ವ್ಯಕ್ತಿಯ ಮೃತದೇಹವನ್ನು ಅಟ್ಟಾರಿ ಗಡಿಯಲ್ಲಿ ಹಸ್ತಾಂತರಿಸಲಾಗುವುದು ಎಂದು ಪಾಕಿಸ್ತಾನ ಸರ್ಕಾರವು ಕೇಂದ್ರ ಗೃಹ ಸಚಿವಾಲಯಕ್ಕೆ ತಿಳಿಸಿದೆ

ಐಸಿಸ್‌ಗೆ ಸೇರಿದ್ದ ಎನ್ನಲಾದ 48ರ ವರ್ಷದ ಕೇರಳದ ವ್ಯಕ್ತಿ ಪಾಕಿಸ್ತಾನ ಜೈಲಿನಲ್ಲಿ ಸಾವು
ಜುಲ್ಫಿಕರ್Image Credit source: India Times
Follow us
|

Updated on: May 24, 2023 | 12:50 PM

ಅಬುಧಾಬಿಯಿಂದ (Abu Dhabi) ನಾಪತ್ತೆಯಾಗಿದ್ದ ಕೇರಳದ 48 ವರ್ಷದ ವ್ಯಕ್ತಿಯೊಬ್ಬರು ಪಾಕಿಸ್ತಾನದ (Pakistan) ಜೈಲಿನಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಧಿಕೃತ ಮೂಲಗಳ ಪ್ರಕಾರ ಪಾಲಕ್ಕಾಡ್ (Palakkad) ಜಿಲ್ಲೆಯ ಕಪ್ಪುರ್ ಮೂಲದ ಜುಲ್ಫಿಕರ್ ಎಂಬ ವ್ಯಕ್ತಿಯ ಮೃತದೇಹವನ್ನು ಅಟ್ಟಾರಿ ಗಡಿಯಲ್ಲಿ ಹಸ್ತಾಂತರಿಸಲಾಗುವುದು ಎಂದು ಪಾಕಿಸ್ತಾನ ಸರ್ಕಾರವು ಕೇಂದ್ರ ಗೃಹ ಸಚಿವಾಲಯಕ್ಕೆ ತಿಳಿಸಿದೆ, ಎಂದು ಇಂಡಿಯಾ ಟೈಮ್ಸ್ ವರದಿ ಮಾಡಿದೆ.

ಜುಲ್ಫಿಕರ್ ನಾಪತ್ತೆಯ ಸುತ್ತ ನಿಗೂಢತೆ ಇತ್ತು, ಗುಪ್ತಚರ ಸಂಸ್ಥೆಗಳು ಆರಂಭದಲ್ಲಿ ಅವರು ಐಸಿಸ್ ಸೇರಲು ಅಬುಧಾಬಿಯನ್ನು ತೊರೆದಿದ್ದಾರೆ ಎಂದು ಶಂಕಿಸಿದ್ದರು. ಆದಾಗ್ಯೂ, ಅವರು ಮೀನುಗಾರಿಕೆಗೆ ಹೋಗಿದ್ದರು ಮತ್ತು ಪಾಕಿಸ್ತಾನದ ಪ್ರಾದೇಶಿಕ ಜಲವನ್ನು ಅಜಾಗರೂಕತೆಯಿಂದ ಉಲ್ಲಂಘಿಸಿದ್ದಾರೆ ಎಂದು ಅವರ ಕುಟುಂಬವು ತಿಳಿಸಿದೆ, ಇದರ ಪರಿಣಾಮವಾಗಿ ಅವರನ್ನು ಜೈಲಿನಲ್ಲಿಡಲಾಯಿತು.

ಜುಲ್ಫಿಕರ್ 2018 ರಲ್ಲಿ ಅಬುಧಾಬಿಯಿಂದ ನಾಪತ್ತೆಯಾಗಿದ್ದರು, ಅಲ್ಲಿ ಅವರು ತನ್ನ ಹೆಂಡತಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಗುಪ್ತಚರ ಸಂಸ್ಥೆಗಳು ಇವರ ನಾಪತ್ತೆಯ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದು, ಪಾಕಿಸ್ತಾನದಲ್ಲಿ ಇವರನ್ನು ಬಂಧಿಸುವ ಮೊದಲು ಅವರು ಇರಾನ್‌ಗೆ ತೆರಳಿದ್ದರು ಎಂದು ಸೂಚಿಸಲಾಗಿದೆ,

ಅಮೃತಸರದಲ್ಲಿರುವ ವಿದೇಶಿಯರ ನೋಂದಣಿ ಕಚೇರಿ (ಎಫ್‌ಆರ್‌ಒ) ಮೂಲಕ ಜುಲ್ಫಿಕರ್ ಅವರ ಮೃತದೇಹವನ್ನು ಅಟ್ಟಾರಿ ಗಡಿಯಲ್ಲಿ ಹಸ್ತಾಂತರಿಸಲಾಗುವುದು ಎಂದು ಪಾಕಿಸ್ತಾನದ ಏಜೆನ್ಸಿಗಳು ಭಾರತ ಸರ್ಕಾರಕ್ಕೆ ತಿಳಿಸಿವೆ.

ಜುಲ್ಫಿಕರ್ ಅವರ ಕುಟುಂಬವು ಈಗ ಅವರ ಪಾರ್ಥಿವ ಶರೀರದ ಆಗಮನಕ್ಕಾಗಿ ಕೇರಳದಲ್ಲಿ ಕಾಯುತ್ತಿದೆ. ಮೃತದೇಹವನ್ನು ಕೇರಳದ ಯಾವುದೇ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲು ಸಿದ್ಧರಿದ್ದೇವೆ ಎಂದು ಅವರ ತಂದೆ ಸಿ ವಿ ಹಮೀದ್ ತಿಳಿಸಿದ್ದಾರೆ. ಆದರೆ, ವಯಸ್ಸಾದ ಕಾರಣ, ಮೃತದೇಹವನ್ನು ಸ್ವೀಕರಿಸಲು ಛತ್ತೀಸ್‌ಗಢದ ವಿಮಾನ ನಿಲ್ದಾಣಕ್ಕೆ ತೆರಳಲು ಹಮೀದ್ ಅಸಮರ್ಥತೆಯನ್ನು ವ್ಯಕ್ತಪಡಿಸಿದ್ದಾರೆ. ಜುಲ್ಫಿಕರ್ ಅವರ ಪತ್ನಿ ಮತ್ತು ಮಕ್ಕಳು ಇನ್ನೂ ಅಬುಧಾಬಿಯಲ್ಲಿದ್ದು, ಕಳೆದ ಐದು ವರ್ಷಗಳಿಂದ ಆತನ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೂಢನಂಬಿಕೆಯಿಂದ ಪ್ರಾಣವೇ ಹೋಯ್ತು: ಭೂತ ಓಡಿಸ್ತೀನಿ ಎಂದು ಥಳಿಸಿದ ತಾಂತ್ರಿಕ, ಬಾಲಕ ಸಾವು

ಜುಲ್ಫಿಕರ್ ಮೃತದೇಹವನ್ನು ಕೇರಳಕ್ಕೆ ರವಾನಿಸುವ ಕುರಿತು ಜಿಲ್ಲಾಡಳಿತ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಅವರ ಮೃತದೇಹವನ್ನು ಸ್ವೀಕರಿಸಿದರೆ, ಅವರ ಸಂಬಂಧಿಕರು ಅವರನ್ನು ಜುಮಾ ಮಸೀದಿಯಲ್ಲಿ ದಫನ ಮಾಡಲು ಯೋಜಿಸಿದ್ದಾರೆ.

ಜುಲ್ಫಿಕರ್ ನಾಪತ್ತೆಯಾಗಿರುವ ಬಗ್ಗೆ ಆತನ ಮನೆಯವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪಾಕಿಸ್ತಾನದ ಜೈಲಿನಿಂದ ಜುಲ್ಫಿಕರ್ ಸಾವಿನ ಸುದ್ದಿ ಬಂದಾಗ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಆತನಿಗಾಗಿ ಹುಡುಕಾಟ ನಡೆಸಿತ್ತು.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್