AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್​ನ ಬಂಧಿಸಿದ ಪೊಲೀಸ್ ತಂಡಗಳಿಗೆ 5 ಲಕ್ಷ ರೂ. ಬಹುಮಾನ; ಕಮಲ್ ಪಂತ್ ಮಾಹಿತಿ

ಆರೋಪಿ ನಾಗೇಶ್ ಯಾವುದೇ ಸುಳಿವು ನೀಡದೆ ನಾಪತ್ತೆಯಾಗಿದ್ದ. ಸಂದೀಪ್ ಪಾಟೀಲ್ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ ತಿರುವಣ್ಣಾಮಲೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್​ನ ಬಂಧಿಸಿದ ಪೊಲೀಸ್ ತಂಡಗಳಿಗೆ 5 ಲಕ್ಷ ರೂ. ಬಹುಮಾನ; ಕಮಲ್ ಪಂತ್ ಮಾಹಿತಿ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on:May 14, 2022 | 12:27 PM

Share

ಬೆಂಗಳೂರು: ಪ್ರೀತಿ ನಿರಾಕರಿಸಿದ್ದ ಯುವತಿ ಮೇಲೆ ಆ್ಯಸಿಡ್ (Acid) ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ ನಿನ್ನೆ ಸೆರೆಯಾಗಿದ್ದಾನೆ. ಸ್ವಾಮೀಜಿ ವೇಷ ಧರಿಸಿ ತಲೆಮರಿಸಿಕೊಂಡಿದ್ದ. ನಿರಂತರ ಕಾರ್ಯಾಚರಣೆ ನಡೆಸಿ ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ (Kamala Pant), ಕಾರ್ಯಚರಣೆ ತಂಡಗಳಿಗೆ ಒಟ್ಟು ಐದು ಲಕ್ಷ ರೂ. ಬಹುಮಾನ (Prize) ನೀಡುವುದಾಗಿ ತಿಳಿಸಿದ್ದಾರೆ.

ಆರೋಪಿ ನಾಗೇಶ್ ಯಾವುದೇ ಸುಳಿವು ನೀಡದೆ ನಾಪತ್ತೆಯಾಗಿದ್ದ. ಸಂದೀಪ್ ಪಾಟೀಲ್ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ ತಿರುವಣ್ಣಾಮಲೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವತಿಗೆ ಗೊತ್ತಾಗದಂತೆ ಆರೋಪಿ ನಾಗೇಶ್ ಹಿಂಬಾಲಿಸುತ್ತಿದ್ದ. ಏ.20ರಂದು ಖಾಸಗಿ ಕಂಪನಿ ಲೆಟರ್​ಹೆಡ್​ ಬಳಸಿ ಸಲ್ಫೂರಿಕ್ ಆ್ಯಸಿಡ್ ಖರೀದಿ ಮಾಡಿದ್ದ. ಆ್ಯಸಿಡ್ ಖರೀದಿಸಿದ ನಂತರ ಯುವತಿ ಬಳಿ ತೆರಳಿ ಮಾತಾಡಿದ್ದ. ತನ್ನನ್ನು ಮದುವೆಯಾಗುವಂತೆ ಪೀಡಿಸಿದ್ದ. ಸ್ಥಳಕ್ಕೆ ಬಂದಿದ್ದ ಕಂಪನಿಯ ಮ್ಯಾನೇಜರ್ ಬೈಯ್ದು ಕಳಿಸಿದ್ದರು. ಏಪ್ರಿಲ್ 28ರಂದು ಬೆಳಗ್ಗೆ ಯುವತಿ ಮೇಲೆ ಆ್ಯಸಿಡ್ ಎರಚಿದ್ದ ಎಂದು ಕಮಲ್ ಪಂತ್ ಹೇಳಿದರು.

ಸುಮಾರು ಅರ್ಧ ಲೀಟರ್​ ಸಲ್ಫೂರಿಕ್​ ಆ್ಯಸಿಡ್​​ ಹಾಕಿದ್ದ. ಌಸಿಡ್ ದಾಳಿ ನಂತರ ಅಣ್ಣ, ಸ್ನೇಹಿತನಿಗೆ ಕರೆ ಮಾಡಿದ್ದ. ರಾಜಗೋಪಾಲನಗರ ಠಾಣೆಗೆ ಶರಣಾಗುವಂತೆ ಸೂಚನೆ ನೀಡಿದ್ದರು. ಅಣ್ಣ, ಸ್ನೇಹಿತನ ಮಾತು ಕೇಳದೆ ಬೈಕ್​ನಲ್ಲಿ ಕೋರ್ಟ್​ಗೆ ತೆರಳಿದ್ದ. ತನಗೆ ಪರಿಚಯವಿದ್ದ ವಕೀಲರನ್ನು ಭೇಟಿಯಾಗಿದ್ದ. ಕೋರ್ಟ್​ಗೆ ಎಫ್​ಐಆರ್​​ ಬಂದಿಲ್ಲವೆಂದು ವಕೀಲರು ಹೇಳಿರುತ್ತಾರೆ. ನಂತರ ಅಲ್ಲಿಂದ ಹೊಸಕೋಟೆಗೆ ತೆರಳಿದ್ದ. ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಕೊನೆ ಕ್ಷಣದಲ್ಲಿ ಮನಸ್ಸು ಬದಲಿಸಿ ತಿರುಪತಿ ಬಸ್​ ಹತ್ತಿ ತೆರಳಿದ್ದ. ಮಾರ್ಗಮಧ್ಯೆ ಬಸ್​ನಿಂದ ಇಳಿದು ತಿರುವಣ್ಣಾಮಲೈಗೆ ತೆರಳಿದ್ದ. ತಿರುವಣ್ಣಾಮಲೈಗೆ ತೆರಳಿ ಕೇಸರಿ ಬಟ್ಟೆಯನ್ನು ಖರೀದಿಸಿದ್ದ ಎಂದು ಸುದ್ದಿಗೋಷ್ಟಿಯಲ್ಲಿ ಕಮಲ್ ಪಂತ್ ತಿಳಿಸಿದರು.

ಇದನ್ನೂ ಓದಿ
Image
ವರ್ಲ್ಡ್​​ ಸ್ಕೂಲ್​​ ಸ್ಪೋರ್ಟ್ಸ್​ ಫೆಡರೇಷನ್​ ಕ್ರೀಡಾಕೂಟಕ್ಕೆ ಫ್ರಾನ್ಸ್​​ಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿಗೆ ವೀಸಾ ಸಿಗದೆ ಪರದಾಟ
Image
WhiteHat Jr: ಎರಡು ತಿಂಗಳಲ್ಲಿ ಈ ಕಂಪೆನಿಗೆ 800 ಉದ್ಯೋಗಿಗಳ ರಾಜೀನಾಮೆ; ಮತ್ತೆ ಕಚೇರಿಗೆ ಬನ್ನಿ ಎಂದಿದ್ದಕ್ಕೆ ಬಿತ್ತು ಸಾಲು ಸಾಲು ಪೇಪರ್
Image
Delhi fire tragedy: ಮುಂಡ್ಕಾ ಕಟ್ಟಡಕ್ಕಿಲ್ಲ ಅಗ್ನಿಶಾಮಕ ಎನ್‌ಒಸಿ: ಕಟ್ಟಡ ಮಾಲೀಕ ಪರಾರಿ
Image
ಕೋಟ್ಯಂತರ ರೂ ‘ಕೈ’ಬದಲು! FIR ದಾಖಲು: ಬಳ್ಳಾರಿ ಪಾಲಿಕೆಯಲ್ಲಿ ಕಾಂಗ್ರೆಸ್ ಬಹುಮತ ಹೊಂದಿದ್ದರೂ ಮೇಯರ್ ಸ್ಥಾನ ಹರಾಜಿಗೆ, ಶಾಸಕ ನಾಗೇಂದ್ರ ಪಾತ್ರವೇನು?

ಮೊದಲು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಆರೋಪಿ: ಎಎಸ್​ಐ ಶಿವಣ್ಣ, ಕಾನ್ಸ್​ಟೇಬಲ್​ ರವಿ ಆಶ್ರಮಕ್ಕೆ ತೆರಳಿದ್ದರು. ಶಿವಣ್ಣ, ರವಿ ಆರೋಪಿ ನಾಗೇಶ್​ನ ಹಿಂದೆ ಕುಳಿತುಕೊಂಡಿದ್ದರು. ಮೆಡಿಟೇಷನ್​ ಮುಗಿದ ಬಳಿಕ ಪೊಲೀಸರು ಆತನನ್ನು ಪ್ರಶ್ನಿಸಿದ್ದಾರೆ. ನಮ್ಮ ಪೊಲೀಸರು ಮೊದಲು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿರಲಿಲ್ಲ. ನಂತರ ಗಟ್ಟಿಧ್ವನಿಯಲ್ಲಿ ಪ್ರಶ್ನಿಸಿದಾಗ ನಾಗೇಶ್ ಎಂದು ಹೇಳಿದ್ದ. ನಾಗೇಶ್​ನನ್ನು ಹಿಡಿದುಕೊಂಡಾಗ ಅಲ್ಲಿದ್ದವರು ಸುತ್ತುವರಿದಿದ್ದರು. ನಾಗೇಶ್​ನನ್ನು ಹಿಡಿದುಕೊಂಡೇ ಜನರಿಗೆ ಎಲ್ಲಾ ಮಾಹಿತಿ ನೀಡಿದ್ದರು.

2 ಕಿ.ಮೀ. ದೂರದಲ್ಲಿದ್ದ ಮತ್ತೊಂದು ಟೀಮ್​ ಆಶ್ರಮಕ್ಕೆ ಬಂದಿತ್ತು. ಆರೋಪಿ ನಾಗೇಶ್​ನನ್ನ ನಿನ್ನೆಯೇ ವಶಕ್ಕೆ ಪಡೆದು ಕರೆತಂದಿದ್ದೇವೆ. ತಮಿಳುನಾಡಿನಿಂದ ಬೆಂಗಳೂರಿಗೆ ಬರುವವರೆಗೆ ವಿಚಾರಣೆ ನಡೆಸಿದ್ದರು. 15 ದಿನಗಳ ಕಾಲ 50ಕ್ಕೂ ಹೆಚ್ಚು ಪೊಲೀಸರು ಹಗಲಿರುಳು ಕೆಲಸ ಮಾಡಿದ್ದಾರೆ. ತಮಿಳುನಾಡಿನಲ್ಲೂ ನಮ್ಮ ಪೊಲೀಸರ 2 ತಂಡ ಬೀಡುಬಿಟ್ಟಿದ್ದವು ಎಂದು ಕಮಲ್ ಪಂತ್ ಹೇಳಿದ್ದಾರೆ.

Published On - 12:07 pm, Sat, 14 May 22

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ