AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಿ ಕದಿಯಲು ಹೋಗಿದ್ದ ಕಳ್ಳನ ಸಾವಿಗೆ ಟ್ವಿಸ್ಟ್​, ಆರೋಪಿಗಳು ಅರೆಸ್ಟ್​

ಬೆಂಗಳೂರು: ಶ್ರೀರಾಂಪುರದಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮೇ 31ರಂದು ಜಗನ್(23) ಎಂಬಾತನ ಅನುಮಾನಾಸ್ಪದ ಸಾವು ಸಂಭವಿಸಿತ್ತು. ನಂತರ ತನಿಖೆ ವೇಳೆ ಜಗನ್ ಕೊಲೆಯಾಗಿರುವ ವಿಷಯ ಬಯಲಾಗಿದೆ. ಕದಿಯಲು ಬಂದಿದ್ದ ಕಳ್ಳನನ್ನು ಕೊಲೆ ಮಾಡಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜಗನ್, ಶ್ರೀರಾಮಪುರದಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸಾಕಷ್ಟು ಕಳ್ಳತನ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆ ಬಳಿಕವೂ ಅದೇ ಮಾದರಿಯ ಕೃತ್ಯ ಎಸಗಲು ಹೋಗಿದ್ದ. ಮೇ 31ರಂದು ರಾತ್ರಿ […]

ಕಂಬಿ ಕದಿಯಲು ಹೋಗಿದ್ದ ಕಳ್ಳನ ಸಾವಿಗೆ ಟ್ವಿಸ್ಟ್​, ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 3:20 PM

Share

ಬೆಂಗಳೂರು: ಶ್ರೀರಾಂಪುರದಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮೇ 31ರಂದು ಜಗನ್(23) ಎಂಬಾತನ ಅನುಮಾನಾಸ್ಪದ ಸಾವು ಸಂಭವಿಸಿತ್ತು. ನಂತರ ತನಿಖೆ ವೇಳೆ ಜಗನ್ ಕೊಲೆಯಾಗಿರುವ ವಿಷಯ ಬಯಲಾಗಿದೆ. ಕದಿಯಲು ಬಂದಿದ್ದ ಕಳ್ಳನನ್ನು ಕೊಲೆ ಮಾಡಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಜಗನ್, ಶ್ರೀರಾಮಪುರದಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸಾಕಷ್ಟು ಕಳ್ಳತನ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆ ಬಳಿಕವೂ ಅದೇ ಮಾದರಿಯ ಕೃತ್ಯ ಎಸಗಲು ಹೋಗಿದ್ದ.

ಮೇ 31ರಂದು ರಾತ್ರಿ ಖಾಸಗಿ ಅಪಾರ್ಟ್​ಮೆಂಟ್​ನ ಕಂಬಿ ಕದಿಯಲು ಜಗನ್ ಹೋಗಿದ್ದ. ಈ ವೇಳೆ ಸೆಕ್ಯೂರಿಟಿ ಗಾರ್ಡ್ ಕೈಗೆ ಸಿಕ್ಕಿ ಜಗನ್​ ಸಿಕ್ಕಿಬಿದ್ದಿದ್ದ. ಆಗ ಬನಬಂದಂತೆ ಥಳಿಸಿ ಸೆಕ್ಯೂರಿಟಿ ಗಾರ್ಡ್​ಗಳು ಹೊರತಳ್ಳಿದ್ದರು. ನಂತರ ಮನೆಗೆ ತೆರಳುವಾಗ ಮನೆಯ ಮುಂದೆ ಮೋರಿಗೆ ಬಿದ್ದು ಮೃತಪಟ್ಟಿದ್ದಾನೆ.

ತನಿಖೆ ವೇಳೆ ಅಸಹಜ ಸಾವಲ್ಲ ಕೊಲೆ ಎಂಬುದು ಬಯಲಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ ಪಶ್ಚಿಮ ಬಂಗಾಳ ಮೂಲದ ಆರು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಂಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Published On - 11:53 am, Fri, 5 June 20

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು