AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಮಗುವನ್ನ ಮೋರಿಗೆಸೆದ ಹೆಮ್ಮಾರಿ: ಕೋಲಾರದಲ್ಲಿ ಹೆತ್ತವರಿಂದ್ಲೇ ಕೊಲೆ ಶಂಕೆ!

ಗಂಡ ಹೆಂಡ್ತಿ ಅಂದ್ಮೇಲೆ ಸಣ್ಣ, ಪುಟ್ಟ ಜಗಳ ಇದ್ದದ್ದೇ. ಹಾಗಂತ ಏನೂ ಅರಿಯದ ಪುಟ್ಟ ಕಂದಮ್ಮಗಳ ಮೇಲೆ ಕೋಪ ತೋರಿಸ್ತಾರೆ ಅಂದರೆ ಇದು ಪಾಪಿ ದುನಿಯಾನೇ.

ಮೈಸೂರಲ್ಲಿ ಮಗುವನ್ನ ಮೋರಿಗೆಸೆದ ಹೆಮ್ಮಾರಿ: ಕೋಲಾರದಲ್ಲಿ ಹೆತ್ತವರಿಂದ್ಲೇ ಕೊಲೆ ಶಂಕೆ!
ಸಾಧು ಶ್ರೀನಾಥ್​
| Edited By: |

Updated on:Nov 22, 2023 | 10:36 AM

Share

ಕೋಲಾರ: ಮಕ್ಕಳಿಲ್ಲ ಅಂತಾ ಕಂಡಕಂಡ ದೇವರಿಗೆ ಮೊರೆ ಹೋಗ್ತಾರೆ, ಆಸ್ಪತ್ರೆಗಳಿಗೆ ಅಲೆದಾಡ್ತಾರೆ. ಆದ್ರೆ ಈ ನೀಚರು ಮಾತ್ರ ಯಾವ ತಂದೆ-ತಾಯಿಯೂ ಮಾಡದ ನೀಚಕೃತ್ಯ ಮಾಡಿದ್ದಾರೆ. ಕೂಸು ಹುಟ್ಟಿ 6 ತಿಂಗಳು ತುಂಬೋ ಮುನ್ನವೇ ಮಾಡಬಾರದ್ದನ್ನ ಮಾಡಿದ್ದಾರೆ.

ಒಂದೂವರೆ ತಿಂಗಳ ಹಸುಗೂಸನ್ನೇ ಕೊಂದರಾ ಹೆತ್ತವರು? ನಿಜ.. ಕೇಳೋಕೆ ನಮಗೆ ಹಿಂಸೆ ಅನ್ನಿಸುತ್ತೆ. ಆದ್ರೆ ಕೋಲಾರ ತಾಲೂಕು ಛತ್ರಕೋಡಿಹಳ್ಳಿ ಗ್ರಾಮದಲ್ಲಿ ಇಂಥಾದ್ದೇ ಮಾತು ಕೇಳಿ ಬಂದಿದೆ. ರಘುಪತಿ ಹಾಗೂ ಹರ್ಷಿತ ದಂಪತಿ ಒಂದೂವರೆ ತಿಂಗಳ ತಮ್ಮ ಹೆಣ್ಣು ಮಗು ಬೆಳಗ್ಗೆ ನಾಪತ್ತೆಯಾಗಿದೆ ಅಂತಾ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ರು. ಕೂಡ್ಲೇ ಸ್ಪಾಟ್​ಗೆ ಬಂದ ಖಾಕಿ ಟೀಮ್ ಪರಿಶೀಲನೆ ನಡೆಸ್ತಿತ್ತು.

ಈ ವೇಳೆ ಪೊಲೀಸರ ಶ್ವಾನ ಮನೆ ಬಳಿಯೇ ಇದ್ದ ಸಂಪ್ ಬಳಿ ಓಡಾಡಿದೆ. ಅನುಮಾನಗೊಂಡು ಪರಿಶೀಲಿಸಿದಾಗ ಸಂಪ್​ನಲ್ಲಿ ಮಗು ಶವ ಪತ್ತೆಯಾಗಿದೆ. ಇನ್ನು ಹೆತ್ತವರೇ ಹೆಣ್ಣು ಮಗು ಅಂತಾ ಕೊಂದಿದ್ದಾರೆಂದು ಸಂಬಂಧಿಕರು ಆರೋಪಿಸ್ತಿದ್ದಾರೆ. ಸದ್ಯ ಪೊಲೀಸರು ಪೋಷಕರನ್ನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸ್ತಿದ್ದಾರೆ. ಪತಿ ಜೊತೆ ಜಗಳಕ್ಕೆ ಮಗುವನ್ನೇ ಮೋರಿಗೆ ಎಸೆದ ಹೆಮ್ಮಾರಿ ಕೋಲಾರದಲ್ಲಿ ಆ ಕಥೆಯಾದ್ರೆ ಮೈಸೂರಲ್ಲಿ 6 ತಿಂಗಳ ಕೂಸನ್ನೇ ಹೆಮ್ಮಾರಿ ತಾಯಿ ಚರಂಡಿಗೆ ಎಸೆದಿದ್ದಾಳೆ. ಮೈಸೂರಿನ‌ ವಿದ್ಯಾರಣ್ಯಪುರಂ ನಿವಾಸಿ ರೇಣುಕಾರಾಧ್ಯ ಹಾಗೂ ರಾಣಿ ದಂಪತಿ ನಡುವೆ ಜಗಳವಾಗಿದೆ. ಆದ್ರೆ ಗಂಡನ ಮೇಲಿನ ಸಿಟ್ಟಿಗೆ ಮಗುವನ್ನೇ ಮೋರಿಗೆ ಬಿಸಾಡಿದ್ದಾಳೆ‌.

ಮೋರಿಗೆ ಬಿದ್ದ ವೇಳೆ ಕಾಲಿಗೆ ಗಾಯವಾಗಿ, ಮಗು ಚಿರಾಡಿದೆ. ಕೂಡ್ಲೇ ಸ್ಥಳೀಯರು ಮಗುವನ್ನ ಮೇಲೆತ್ತಿ ಸ್ನಾನ ಮಾಡಿಸಿದ್ದಾರೆ. ಅಷ್ಟ್ರಲ್ಲಿ ಪಾಪಿ ತಂದೆ ಸ್ಥಳಕ್ಕೆ ಬಂದು ಅಸಲಿ ವಿಷ್ಯ ಹೇಳಿದ್ದು, ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ರು. ಸದ್ಯ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಹೆತ್ತವರಿಗೆ ಕೌನ್ಸಿಲಿಂಗ್ ನಡೆಸಲಾಗಿದೆ.

ಗಂಡ ಹೆಂಡ್ತಿ ಅಂದ್ಮೇಲೆ ಸಣ್ಣ, ಪುಟ್ಟ ಜಗಳ ಇದ್ದದ್ದೇ. ಹಾಗಂತ ಏನೂ ಅರಿಯದ ಪುಟ್ಟ ಕಂದಮ್ಮಗಳ ಮೇಲೆ ಕೋಪ ತೋರಿಸ್ತಾರೆ ಅಂದರೆ ಇದು ಪಾಪಿ ದುನಿಯಾನೇ.

Published On - 8:02 pm, Tue, 18 February 20

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ