ಸೇನಾ ನೇಮಕಾತಿಯಲ್ಲಿ ಭ್ರಷ್ಟಾಚಾರ: 23 ಆರೋಪಿಗಳಲ್ಲಿ 7 ಮಂದಿ ಸೇನಾಧಿಕಾರಿಗಳು

ಭಾರತೀಯ ಸೇನಾಪಡೆಯ ಏಳು ಅಧಿಕಾರಿಗಳನ್ನು ಹೊರತುಪಡಿಸಿ 10 ಇತರ ಸಿಬ್ಬಂದಿ ವರ್ಗದವರು ಪ್ರಕರಣದಲ್ಲಿ ಬಾಗಿಯಾಗಿದ್ದಾರೆಂದು ಸಿಬಿಐ ಹೇಳಿದೆ.

ಸೇನಾ ನೇಮಕಾತಿಯಲ್ಲಿ ಭ್ರಷ್ಟಾಚಾರ: 23 ಆರೋಪಿಗಳಲ್ಲಿ 7 ಮಂದಿ ಸೇನಾಧಿಕಾರಿಗಳು
ಸಿಬಿಐ ಕಚೇರಿ
Follow us
|

Updated on:Mar 15, 2021 | 11:32 PM

ನವದೆಹಲಿ: ಸೇನಾಪಡೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿರುವ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳವು 23 ಆರೋಪಿಗಳ ಪಟ್ಟಿಯನ್ನು ತಯಾರಿಸಿದ್ದು ಇದರಲ್ಲಿ ಏಳು ಸೇನಾಧಿಕಾರಿಗಳೂ ಸೇರಿದ್ದಾರೆ. ಸಿಬಿಐ ಮೂಲಗಳ ಪ್ರಕಾರ 13 ನಗರಗಳ 30 ಸ್ಥಳಗಳನ್ನು ಅಧಿಕಾರಿಗಳು ಸೋಮವಾರದಂದು ಶೋಧಿಸಿದರು.

ಭಾರತೀಯ ಸೇನಾಪಡೆಯ ಏಳು ಅಧಿಕಾರಿಗಳನ್ನು ಹೊರತುಪಡಿಸಿ 10 ಇತರ ಸಿಬ್ಬಂದಿ ವರ್ಗದವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಸಿಬಿಐ ಹೇಳಿದೆ. ಸೇನಾ ನೇಮಕಾತಿ ಮಂಡಳಿ ಮೂಲಕ ಅಧಿಕಾರಿ ಮತ್ತು ಇತರ ರ‍್ಯಾಂಕಿನ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಮತ್ತು ಇತರ ಅಕ್ರಮಗಳು ನಡೆದಿರುವ ಅರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ರಕ್ಷಣಾ ಸಚಿವಾಲಯದ ಕೇಂದ್ರ ಕಚೇರಿ (ಭೂ ಸೇನೆ) ಅಧೀನದ ಹೆಚ್ಚುವರಿ ಮಹಾ ನಿರ್ದೇಶಕ-ಶಿಸ್ತು ಮತ್ತು ಜಾಗೃತಿ, ಅಡ್ಜುಅಂಟ್ ಜನರಲ್ ಅವರ ಶಾಖೆಯಿಂದ ದೂರು ದಾಖಲಾದ ನಂತರ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ. 13 ನಗರಗಳ 30 ಸ್ಥಳಗಳಲ್ಲಿ ಇಂದು ನಡೆದ ಶೋಧದಲ್ಲಿ ಬೇಸ್ ಆಸ್ಪತ್ರೆ, ಕಂಟೋನ್ಮೆಂಟ್ ಹಾಗೂ ಸೇನಾ ಮತ್ತು ನಾಗರಿಕ ಪ್ರದೇಶಗಳೂ ಸೇರಿವೆ.

ದೆಹಲಿ, ಲಖನೌ, ಜೈಪುರ, ಗುವಾಹಟಿ, ಕಪುರ್ತಲಾ, ಭಟಿಂಡ, ಕೈತಲ್, ಪಲ್ವಲ್, ಬರೇಲಿ, ಗೊರಖ್​ಪುರ್, ವಿಶಾಖಪಟ್ಟಣಂ, ಜೊರ್ಹಟ್​ ಮತ್ತು ಚಿರಂಗಾವ್ ಸೇರಿದಂತೆ ಮತ್ತೊಂದು ನಗರದಲ್ಲಿ ಸಿಬಿಐ ಅಧಿಕಾರಿಗಳು ಶೋಧನೆ ನಡೆಸಿದರು. ಆರೋಪಗಳನ್ನು ದೃಢಪಡಿಸುವ ಹಲವಾರು ದಾಖಲೆಗಳು ಶೋಧನೆಯ ಸಮಯದಲ್ಲಿ ಸಿಕ್ಕಿದ್ದು ಅವುಗಳನ್ನು ಅಭ್ಯಾಸ ಮಾಡಲಾಗುತ್ತಿದೆ ಎಂದು ಸಿಬಿಐ ತಿಳಿಸಿದೆ.

ಇದನ್ನೂ ಓದಿ: ಒಂದು ಕೋಟಿ ಲಂಚಕ್ಕೆ ಬೇಡಿಕೆ ಆರೋಪ -CBIನಿಂದ ಇಬ್ಬರು ಹಿರಿಯ ರೈಲ್ವೆ ಅಧಿಕಾರಿಗಳ ಬಂಧನ

Published On - 10:22 pm, Mon, 15 March 21

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ