AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ನೇಮಕಾತಿಯಲ್ಲಿ ಭ್ರಷ್ಟಾಚಾರ: 23 ಆರೋಪಿಗಳಲ್ಲಿ 7 ಮಂದಿ ಸೇನಾಧಿಕಾರಿಗಳು

ಭಾರತೀಯ ಸೇನಾಪಡೆಯ ಏಳು ಅಧಿಕಾರಿಗಳನ್ನು ಹೊರತುಪಡಿಸಿ 10 ಇತರ ಸಿಬ್ಬಂದಿ ವರ್ಗದವರು ಪ್ರಕರಣದಲ್ಲಿ ಬಾಗಿಯಾಗಿದ್ದಾರೆಂದು ಸಿಬಿಐ ಹೇಳಿದೆ.

ಸೇನಾ ನೇಮಕಾತಿಯಲ್ಲಿ ಭ್ರಷ್ಟಾಚಾರ: 23 ಆರೋಪಿಗಳಲ್ಲಿ 7 ಮಂದಿ ಸೇನಾಧಿಕಾರಿಗಳು
ಸಿಬಿಐ ಕಚೇರಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 15, 2021 | 11:32 PM

Share

ನವದೆಹಲಿ: ಸೇನಾಪಡೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿರುವ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳವು 23 ಆರೋಪಿಗಳ ಪಟ್ಟಿಯನ್ನು ತಯಾರಿಸಿದ್ದು ಇದರಲ್ಲಿ ಏಳು ಸೇನಾಧಿಕಾರಿಗಳೂ ಸೇರಿದ್ದಾರೆ. ಸಿಬಿಐ ಮೂಲಗಳ ಪ್ರಕಾರ 13 ನಗರಗಳ 30 ಸ್ಥಳಗಳನ್ನು ಅಧಿಕಾರಿಗಳು ಸೋಮವಾರದಂದು ಶೋಧಿಸಿದರು.

ಭಾರತೀಯ ಸೇನಾಪಡೆಯ ಏಳು ಅಧಿಕಾರಿಗಳನ್ನು ಹೊರತುಪಡಿಸಿ 10 ಇತರ ಸಿಬ್ಬಂದಿ ವರ್ಗದವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಸಿಬಿಐ ಹೇಳಿದೆ. ಸೇನಾ ನೇಮಕಾತಿ ಮಂಡಳಿ ಮೂಲಕ ಅಧಿಕಾರಿ ಮತ್ತು ಇತರ ರ‍್ಯಾಂಕಿನ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಮತ್ತು ಇತರ ಅಕ್ರಮಗಳು ನಡೆದಿರುವ ಅರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ರಕ್ಷಣಾ ಸಚಿವಾಲಯದ ಕೇಂದ್ರ ಕಚೇರಿ (ಭೂ ಸೇನೆ) ಅಧೀನದ ಹೆಚ್ಚುವರಿ ಮಹಾ ನಿರ್ದೇಶಕ-ಶಿಸ್ತು ಮತ್ತು ಜಾಗೃತಿ, ಅಡ್ಜುಅಂಟ್ ಜನರಲ್ ಅವರ ಶಾಖೆಯಿಂದ ದೂರು ದಾಖಲಾದ ನಂತರ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ. 13 ನಗರಗಳ 30 ಸ್ಥಳಗಳಲ್ಲಿ ಇಂದು ನಡೆದ ಶೋಧದಲ್ಲಿ ಬೇಸ್ ಆಸ್ಪತ್ರೆ, ಕಂಟೋನ್ಮೆಂಟ್ ಹಾಗೂ ಸೇನಾ ಮತ್ತು ನಾಗರಿಕ ಪ್ರದೇಶಗಳೂ ಸೇರಿವೆ.

ದೆಹಲಿ, ಲಖನೌ, ಜೈಪುರ, ಗುವಾಹಟಿ, ಕಪುರ್ತಲಾ, ಭಟಿಂಡ, ಕೈತಲ್, ಪಲ್ವಲ್, ಬರೇಲಿ, ಗೊರಖ್​ಪುರ್, ವಿಶಾಖಪಟ್ಟಣಂ, ಜೊರ್ಹಟ್​ ಮತ್ತು ಚಿರಂಗಾವ್ ಸೇರಿದಂತೆ ಮತ್ತೊಂದು ನಗರದಲ್ಲಿ ಸಿಬಿಐ ಅಧಿಕಾರಿಗಳು ಶೋಧನೆ ನಡೆಸಿದರು. ಆರೋಪಗಳನ್ನು ದೃಢಪಡಿಸುವ ಹಲವಾರು ದಾಖಲೆಗಳು ಶೋಧನೆಯ ಸಮಯದಲ್ಲಿ ಸಿಕ್ಕಿದ್ದು ಅವುಗಳನ್ನು ಅಭ್ಯಾಸ ಮಾಡಲಾಗುತ್ತಿದೆ ಎಂದು ಸಿಬಿಐ ತಿಳಿಸಿದೆ.

ಇದನ್ನೂ ಓದಿ: ಒಂದು ಕೋಟಿ ಲಂಚಕ್ಕೆ ಬೇಡಿಕೆ ಆರೋಪ -CBIನಿಂದ ಇಬ್ಬರು ಹಿರಿಯ ರೈಲ್ವೆ ಅಧಿಕಾರಿಗಳ ಬಂಧನ

Published On - 10:22 pm, Mon, 15 March 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ