AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಸೀರೆಯಿಂದಲೇ ನೇಣಿಗೆ ಶರಣು: ಶಾಲೆಗೆ ಹೋಗು ಅಂತ ಬೈದಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿ ದುಡುಕಿನ ನಿರ್ಧಾರ

7ನೇ ತರಗತಿ ವಿದ್ಯಾರ್ಥಿ ಇನ್ನೂ ಈಗ ಪ್ರಪಂಚದ ಪರಿಜ್ಞಾನವನ್ನ ತಿಳಿದುಕೊಳ್ತಿದ್ದವನೇ ಅಮ್ಮ ಬೈದ್ಲು ಎಂದು ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ.

ಅಮ್ಮನ ಸೀರೆಯಿಂದಲೇ ನೇಣಿಗೆ ಶರಣು:  ಶಾಲೆಗೆ ಹೋಗು ಅಂತ ಬೈದಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿ ದುಡುಕಿನ ನಿರ್ಧಾರ
ಹೆತ್ತಮ್ಮ ಬೈದಿದ್ದಕ್ಕೆ ಬಾಲಕ ಸೂಸೈಡ್‌
TV9 Web
| Edited By: |

Updated on:Oct 22, 2022 | 6:24 AM

Share

ಬೆಂಗಳೂರು: ದಾರಿ ತಪ್ಪಿದ ಮಗನನ್ನ ಸರಿದಾರಿಗೆ ತರಲು ಹೊರಟಿದ್ದ ತಾಯಿ, ಮಗನಿಗೆ ಬೈದು ಬುದ್ದಿ ಹೇಳಿದ್ಲು ಅಷ್ಟೇ. ಅಷ್ಟಕ್ಕೆ ಅಲ್ಲಿ ಘೋರವೇ ನಡೆದು ಹೋಗಿದೆ. ಜಸ್ಟ್‌ 7ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಸೂಸೈಡ್‌ ಮಾಡಿಕೊಂಡಿದ್ದಾನೆ.

ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆ ಗ್ರಾಮದ ಮಂಜುನಾಥ್ ಹಾಗೂ ಸವಿತಾ ದಂಪತಿಯ 12 ವರ್ಷದ ಪುತ್ರ ಪೃಥ್ವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಪಂಚದ ಪರಿಜ್ಞಾನವನ್ನ ಈಗಷ್ಟೇ ತಿಳಿದುಕೊಳ್ತಿದ್ದವನೇ ಅಮ್ಮ ಬೈದ್ಲು ಎಂದು ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ.

ತಂದೆ-ತಾಯಿಯನ್ನು ಕಳೆದುಕೊಂಡಿದ್ದ ಯುವಕ ಬಸ್​ ಕ್ಲೀನರ್ ಆಗಿದ್ದ, ಆದ್ರೆ, ಲವ್​ನಲ್ಲಿ ಬಿದ್ದು ದುರಂತ ಅಂತ್ಯ ಕಂಡ

ಕಡಬಗೆರೆ ಗ್ರಾಮದ ಮಂಜುನಾಥ್ ಹಾಗೂ ಸವಿತಾ ದಂಪತಿಯ 12 ವರ್ಷದ ಪುತ್ರ ಪೃಥ್ವಿರಾಜ್, ಗ್ರಾಮದ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ. ಶಾಲೆಗೆ ಹೋಗು ಅಂದ್ರೆ ನಿತ್ಯ ಹಠ ಹಿಡಿಯುತ್ತಿದ್ದ. ಶಾಲೆಗೆ ಸರಿಯಾಗಿ ಬರಲ್ಲ ಅಂತ ಶಿಕ್ಷಕರು ಕೂಡಾ ಪೋಷಕರಿಗೆ ಕಂಪ್ಲೆಂಟ್‌ ಮಾಡಿದ್ರು. ಹೀಗಾಗಿ ನಿನ್ನೆ(ಅ.20) ಮಗನಿಗೆ ಶಾಲೆಗೆ ಹೋಗು ಅಂತ ಅಮ್ಮ ಬೈದು, ಹೊಡೆದು ಬುದ್ಧಿ ಹೇಳಿದ್ಲು ಅಷ್ಟೇ. ಇಷ್ಟಕ್ಕೆ ಕುಪಿತಗೊಂಡ ಪೃಥ್ವಿ, ಮನೆಯಲ್ಲೇ ಸೂಸೈಡ್‌ ಮಾಡಿಕೊಂಡಿದ್ದಾನೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ನೋಡಿಕೊಂಡ ಪೃಥ್ವಿರಾಜ್‌, ಅಮ್ಮನ ಸೀರೆಯಿಂದಲೇ ಮನೆಯಲ್ಲಿರೋ ಸೀಟ್ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಷ್ಟಕ್ಕೂ ಪೃಥ್ವಿರಾಜ್‌ ತಂದೆ ಮಂಜುನಾಥ್ ಕಾಯಿಲೆಯಿಂದ ಬಳಲುತ್ತಿದ್ದು, ಇಡೀ ಮನೆ ಜವಾಬ್ದಾರಿ ಬಾಲಕನ ತಾಯಿ ಸವಿತಾಳ ಮೇಲಿತ್ತು. ಮಗ ಮುಂದೆ ಓದಿ, ಮನೆಯ ಜವಾಬ್ದಾರಿ ಹೊರಬೇಕು ಅಂತಾ ಹೆತ್ತಮ್ಮ ಕನಸು ಕಂಡಿದ್ದಳು. ವಿಷ್ಯ ಅಂದ್ರೆ ತನ್ನ ಚಿಕ್ಕಮ್ಮನಿಗೆ ನಿತ್ಯ ಫೋನ್‌ ಮಾಡ್ತಿದ್ದ ಬಾಲಕ, ನನ್ನನ್ನ ನಿಮ್ಮ ಮನೆಗೆ ಕರೆದುಕೊಂಡು ಹೋಗಿ ಅಂತಾ ಹೇಳುತ್ತಿದ್ದನಂತೆ. ಆದ್ರೆ ಕಳೆದ ಎರಡು ದಿನದಿಂದ ಫೋನ್ ಕೂಡ ಮಾಡಿರಲಿಲ್ಲ. ಇದ್ರ ನಡುವೆ ಸೂಸೈಡ್‌ ಮಾಡಿಕೊಂಡಿರೋದು ಎಲ್ಲರಿಗೂ ಶಾಕ್‌ ಆಗುವಂತಾಗಿದೆ.

ಒಟ್ಟಿನಲ್ಲಿ ಮಕ್ಕಳು ಚೆನ್ನಾಗಿ ಓದಬೇಕು, ನೌಕರಿ ಸೇರಬೇಕು ಅಂತಾ ಹೆತ್ತವರು ಕನಸು ಕಾಣ್ತಾರೆ . ದಾರಿ ತಪ್ಪಿದ ಮಕ್ಕಳಿಗೆ ಬೈದು ಬುದ್ದಿ ಹೇಳ್ತಾರೆ. ಆದ್ರೆ ಇಲ್ಲಿ ಬೈದು ಬುದ್ಧಿ ಹೇಳಿದ್ದ ಮುಳುವಾಗಿದೆ. ಚಿಕ್ಕ ಬಾಲಕನ ದುಡುಕಿನ ನಿರ್ಧಾರಕ್ಕೆ ಇಡೀ ಕುಟುಂಬ ಕಣ್ಣೀರಾಗಿದೆ.

Published On - 11:13 pm, Fri, 21 October 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ