AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ಟೆಂಪೋಗೆ ಟ್ರಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ; 9 ಮಂದಿ ಸಾವು

ಮಹಾರಾಷ್ಟ್ರದ ಪುಣೆ-ನಾಸಿಕ್ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಟೆಂಪೋ​ವೊಂದು ಟ್ರಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಪಕ್ಕದಲ್ಲಿ ನಿಂತಿದ್ದ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಇಂದು ಬೆಳಗ್ಗೆ ಅಪಘಾತ ನಡೆದ ಸಮಯದಲ್ಲಿ ಕಾರು ನಾರಾಯಣಗಾಂವ್ ಕಡೆಗೆ ಹೋಗುತ್ತಿತ್ತು.

ಪುಣೆಯಲ್ಲಿ ಟೆಂಪೋಗೆ ಟ್ರಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ; 9 ಮಂದಿ ಸಾವು
Road Accident
ಸುಷ್ಮಾ ಚಕ್ರೆ
|

Updated on: Jan 17, 2025 | 5:11 PM

Share

ಪುಣೆ: ಪುಣೆ-ನಾಸಿಕ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಂಪೋವೊಂದು ಟ್ರಕ್​ಗೆ ಡಿಕ್ಕಿ ಹೊಡೆದು, ನಂತರ ಪಕ್ಕದಲ್ಲಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನಾರಾಯಣಗಾಂವ್ ಬಳಿ ಈ ಘಟನೆ ಸಂಭವಿಸಿದೆ. ಟೆಂಪೋ ನಾರಾಯಣಗಾಂವ್ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಟ್ರಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಬ್ಯಾಲೆನ್ಸ್ ತಪ್ಪಿ ಖಾಲಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಭಾರೀ ಅಪಘಾತ ಸಂಭವಿಸಿದೆ.

ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ದೇಶಮುಖ್, ಟೆಂಪೋದಲ್ಲಿದ್ದ 9 ಪ್ರಯಾಣಿಕರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಈ ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕಾರಿಗಳು ಇನ್ನೂ ಕಾಯುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸಲು ಮತ್ತು ಆ ಪ್ರದೇಶದಲ್ಲಿ ಸಂಚಾರ ಅಡಚಣೆಗಳನ್ನು ನಿರ್ವಹಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ.

ಬೆಳಿಗ್ಗೆ 10 ಗಂಟೆ ಸುಮಾರಿಗೆ ನಾರಾಯಣಗಾಂವ್ ಬಳಿ ಈ ಅಪಘಾತ ಸಂಭವಿಸಿದೆ. ಪಿಟಿಐ ವರದಿಗಳ ಪ್ರಕಾರ, ನಾರಾಯಣಗಾಂವ್ ಕಡೆಗೆ ಹೋಗುತ್ತಿದ್ದ ಟ್ರಕ್​ಗೆ ಹಿಂದಿನಿಂದ ಟೆಂಪೋ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ಪರಿಣಾಮ ಟ್ರಕ್ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಖಾಲಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಈ ಘಟನೆ ಬಗ್ಗೆ ತಮ್ಮ ಸಂತಾಪ ವ್ಯಕ್ತಪಡಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಘಟನೆಯನ್ನು “ತುಂಬಾ ದುರದೃಷ್ಟಕರ” ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. “ಪುಣೆ-ನಾಸಿಕ್ ಹೆದ್ದಾರಿಯ ನಾರಾಯಣಗಾಂವ್ ಬಳಿ ನಡೆದ ಭೀಕರ ಅಪಘಾತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿದ ದುರಂತ ಘಟನೆ ಅತ್ಯಂತ ದುರದೃಷ್ಟಕರ. ಅವರ ಕುಟುಂಬಗಳ ದುಃಖದಲ್ಲಿ ನಾವು ಭಾಗಿಯಾಗುತ್ತೇವೆ” ಎಂದು ಅವರು ಬರೆದಿದ್ದಾರೆ.

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳು 5 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ. ಈ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ಒದಗಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?