AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ಟೆಂಪೋಗೆ ಟ್ರಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ; 9 ಮಂದಿ ಸಾವು

ಮಹಾರಾಷ್ಟ್ರದ ಪುಣೆ-ನಾಸಿಕ್ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಟೆಂಪೋ​ವೊಂದು ಟ್ರಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಪಕ್ಕದಲ್ಲಿ ನಿಂತಿದ್ದ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಇಂದು ಬೆಳಗ್ಗೆ ಅಪಘಾತ ನಡೆದ ಸಮಯದಲ್ಲಿ ಕಾರು ನಾರಾಯಣಗಾಂವ್ ಕಡೆಗೆ ಹೋಗುತ್ತಿತ್ತು.

ಪುಣೆಯಲ್ಲಿ ಟೆಂಪೋಗೆ ಟ್ರಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ; 9 ಮಂದಿ ಸಾವು
Road Accident
ಸುಷ್ಮಾ ಚಕ್ರೆ
|

Updated on: Jan 17, 2025 | 5:11 PM

Share

ಪುಣೆ: ಪುಣೆ-ನಾಸಿಕ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಂಪೋವೊಂದು ಟ್ರಕ್​ಗೆ ಡಿಕ್ಕಿ ಹೊಡೆದು, ನಂತರ ಪಕ್ಕದಲ್ಲಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನಾರಾಯಣಗಾಂವ್ ಬಳಿ ಈ ಘಟನೆ ಸಂಭವಿಸಿದೆ. ಟೆಂಪೋ ನಾರಾಯಣಗಾಂವ್ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಟ್ರಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಬ್ಯಾಲೆನ್ಸ್ ತಪ್ಪಿ ಖಾಲಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಭಾರೀ ಅಪಘಾತ ಸಂಭವಿಸಿದೆ.

ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ದೇಶಮುಖ್, ಟೆಂಪೋದಲ್ಲಿದ್ದ 9 ಪ್ರಯಾಣಿಕರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಈ ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕಾರಿಗಳು ಇನ್ನೂ ಕಾಯುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸಲು ಮತ್ತು ಆ ಪ್ರದೇಶದಲ್ಲಿ ಸಂಚಾರ ಅಡಚಣೆಗಳನ್ನು ನಿರ್ವಹಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ.

ಬೆಳಿಗ್ಗೆ 10 ಗಂಟೆ ಸುಮಾರಿಗೆ ನಾರಾಯಣಗಾಂವ್ ಬಳಿ ಈ ಅಪಘಾತ ಸಂಭವಿಸಿದೆ. ಪಿಟಿಐ ವರದಿಗಳ ಪ್ರಕಾರ, ನಾರಾಯಣಗಾಂವ್ ಕಡೆಗೆ ಹೋಗುತ್ತಿದ್ದ ಟ್ರಕ್​ಗೆ ಹಿಂದಿನಿಂದ ಟೆಂಪೋ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ಪರಿಣಾಮ ಟ್ರಕ್ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಖಾಲಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಈ ಘಟನೆ ಬಗ್ಗೆ ತಮ್ಮ ಸಂತಾಪ ವ್ಯಕ್ತಪಡಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಘಟನೆಯನ್ನು “ತುಂಬಾ ದುರದೃಷ್ಟಕರ” ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. “ಪುಣೆ-ನಾಸಿಕ್ ಹೆದ್ದಾರಿಯ ನಾರಾಯಣಗಾಂವ್ ಬಳಿ ನಡೆದ ಭೀಕರ ಅಪಘಾತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿದ ದುರಂತ ಘಟನೆ ಅತ್ಯಂತ ದುರದೃಷ್ಟಕರ. ಅವರ ಕುಟುಂಬಗಳ ದುಃಖದಲ್ಲಿ ನಾವು ಭಾಗಿಯಾಗುತ್ತೇವೆ” ಎಂದು ಅವರು ಬರೆದಿದ್ದಾರೆ.

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳು 5 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ. ಈ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ಒದಗಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More