AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಚಿತ್ರಹಿಂಸೆ ನೀಡಿ 10 ವರ್ಷ ಬಾಲಕನ ಹತ್ಯೆ; ತಾಯಿ ಹಾಗೂ ರೌಡಿ ಶೀಟರ್ ಬಂಧನ

ಬೆಂಗಳೂರಿನಲ್ಲಿ 10 ವರ್ಷದ ಬಾಲಕನೊಬ್ಬನ ಹತ್ಯೆಯ ಆಘಾತಕಾರಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ರೌಡಿ ಶೀಟರ್​ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಚಿತ್ರಹಿಂಸೆ ನೀಡಿ 10 ವರ್ಷ ಬಾಲಕನ ಹತ್ಯೆ; ತಾಯಿ ಹಾಗೂ ರೌಡಿ ಶೀಟರ್ ಬಂಧನ
ಹತ್ಯೆಗೀಡಾದ ಬಾಲಕ
TV9 Web
| Edited By: |

Updated on:Sep 10, 2021 | 1:29 PM

Share

ಬೆಂಗಳೂರಿನಲ್ಲಿ 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಅದನ್ನು ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಮಗುವಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದ. ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಬಿಸಾಡಿದ್ದರು. ಕೊಲೆ ಪ್ರಕರಣ ದಾಖಲಿಸಿದ್ದ, ತಮಿಳುನಾಡು ಪೊಲೀಸರಿಗೆ ಗುರುತು ಪತ್ತೆಯಾಗಿರಲಿಲ್ಲ. 7 ತಿಂಗಳ ನಂತರ ಬಾಲಕನ ತಾಯಿ ನಾಪತ್ತೆಯ ಪ್ರಕರಣ ದಾಖಲಿಸಿದ್ದರು. ತನಿಖೆಕೈಗೊಂಡ ಪೊಲೀಸರಿಗೆ ಹತ್ಯೆಯ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಪ್ರಕರಣದ ಸಂಪೂರ್ಣ ಮಾಹಿತಿ ಇಲ್ಲಿದೆ: ಗಂಡ ಬಿಟ್ಟಿದ್ದರಿಂದ ಮಗು ನೋಡಿಕೊಳ್ಳುವುದು ಕಷ್ಟವಾಗಿದ್ದ ತಾಯಿ, ಮೈಕೊಲೇಔಟ್ ವ್ಯಾಪ್ತಿಯ ರೌಡಿಶೀಟರ್ ಬಳಿ ಮಗುವನ್ನು ಜನವರಿಯಲ್ಲಿ ಬಿಟ್ಟಿದ್ದಳು. ಮಗು ನೋಡಿಕೊಳ್ಳುತ್ತೇನೆ ಎಂದಿದ್ದ​ ಆತ​ ಬಾಲಕನಿಗೆ ಪ್ರತಿದಿನವೂ ದೈಹಿಕ ಹಿಂಸೆ ನೀಡುತ್ತಿದ್ದ. ಕೊಠಡಿಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡುತ್ತಿದ್ದುದರಿಂದ ಫೆಬ್ರವರಿ ತಿಂಗಳಲ್ಲಿ ಬಾಲಕ ಪ್ರಾಣಬಿಟ್ಟಿದ್ದ. ನಂತರ ತಮಿಳುನಾಡಿಗೆ ಬಾಲಕನ ಶವ ಸಾಗಿಸಿದ್ದ ಅವರು, ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತದೇಹ ಎಸೆದಿದ್ದರು.

ಮರಣೋತ್ತರ ಪರೀಕ್ಷೆ ಮಾಡಿಸಿದ್ದ ತಮಿಳುನಾಡು ಪೊಲೀಸರಿಗೆ ಬಾಲಕನ ಗುರುತು ಪತ್ತೆಯಾಗಿರಲಿಲ್ಲ. ಅವರು ಕೊಲೆ ಪ್ರಕರಣ​ವನ್ನು ದಾಖಲಿಸಿದ್ದರು. 7 ತಿಂಗಳ ನಂತರ ಬಾಲಕನ ತಾಯಿ ಮೈಕೋಲೇಔಟ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಳು. ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿ ತನಿಖೆ ಕೈಗೊಂಡಾಗ ದೈಹಿಕ ಹಿಂಸೆ ನೀಡಿ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಕೊಲೆ ಪ್ರಕರಣ​ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್​ ಹಾಗೂ ತಾಯಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ:

10 ವರ್ಷ ಬಾಲಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿಯನ್ನು ಬಂಧಿಸಿದ ಪೊಲೀಸರು

Coronavirus cases in India: ದೇಶದಲ್ಲಿ 34,973 ಹೊಸ ಕೊವಿಡ್ ಪ್ರಕರಣ ಪತ್ತೆ, 260 ಮಂದಿ ಸಾವು

Ford India: ಉತ್ಪಾದನೆ ನಿಲ್ಲಿಸುವುದಾಗಿ ಫೋರ್ಡ್ ಇಂಡಿಯಾ ಘೋಷಣೆ; ಡೀಲರ್​ಗಳ 2 ಸಾವಿರ ಕೋಟಿ ರೂ. ಕಥೆ ಏನು?

(A 10 year old boy killed in Bengaluru mother and a rowdy sheeter are arrested by police)

Published On - 11:42 am, Fri, 10 September 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!